Homeಚಳವಳಿಆರೇ ಪ್ರದೇಶದ ಮರಗಳ ನಾಶ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ಆರೇ ಪ್ರದೇಶದ ಮರಗಳ ನಾಶ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಮುಂಬೈನ ಆರೇ ಪ್ರದೇಶದಲ್ಲಿನ ಮರಗಳ ಮಾರಣಹೋಮ ತಡೆದು, ಅರಣ್ಯ ಪ್ರದೇಶ ಎಂದು ಗುರುತಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಆರೇ ಪ್ರದೇಶ ಅರಣ್ಯ ಪ್ರದೇಶವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಮೆಟ್ರೋ ಕಾರ್ ಶೆಡ್ ದಾರಿ ನಿರ್ಮಾಣ ಹಿನ್ನೆಲೆ ಆರೇ ಪ್ರದೇಶದ ಮರಗಳ ಮಾರಣಹೋಮ ತಡೆಯಲು ಎರಡು ವರ್ಷಗಳಿಂದ ಪರಿಸರ ಪ್ರೇಮಿಗಳು ಹೋರಾಟ ನಡೆಸುತ್ತಿದ್ದಾರೆ.

ಮುಂಬೈ ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟಡ್, ಆರೇ ಪ್ರದೇಶದಲ್ಲಿರುವ 2,646 ಮರಗಳನ್ನು ಕಡಿಯಲು ಅನುಮತಿ ನೀಡುವ ನಿರ್ಧಾರ ಪ್ರಶ್ನಿಸಿ ಪರಿಸರವಾದಿ ಜೋರು ಬಥೆನಾ, ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಬಾಂಬೆ ಹೈಕೋರ್ಟ್ ಜೋರು ಅವರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ತಾವು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಜೋರು ಹೇಳಿದ್ದಾರೆ.

ಮುಂಬೈ ಮೆಟ್ರೋಗೆ ಕಾರ್ ಶೆಡ್ ನಿರ್ಮಿಸುವ ನಾಗರಿಕ ಸಂಸ್ಥೆಯ ಟ್ರೀ ಅಥಾರಿಟಿಯ ನಿರ್ಧಾರವನ್ನು ಎರಡು ವರ್ಷಗಳಿಂದ ಖಂಡಿಸುತ್ತಲೇ ಬಂದಿರುವ ಪರಿಸರವಾದಿಗಳು ಅದಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂಬೈನ ಆರೇ ಪ್ರದೇಶ ಸುಮಾರು ಲಕ್ಷಕ್ಕೂ ಹೆಚ್ಚು ಮರಗಳನ್ನು ಹೊಂದಿದೆ. ಮಹಾನಗರದ ಹಸಿರು ಶ್ವಾಸಕೋಶವೆಂದೇ ಆರೇ ಪ್ರದೇಶವನ್ನು ಕರೆಯುತ್ತಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...