Homeಮುಖಪುಟ'ವಿಚಾರಣೆಯಿಲ್ಲದೆ 11 ವರ್ಷಗಳ ಕಾಲ ಜೈಲುವಾಸ : ಪುಣೆ ಸ್ಫೋಟದ ಆರೋಪಿಗೆ ಜಾಮೀನು ನೀಡಿದ ಕೋರ್ಟ್

‘ವಿಚಾರಣೆಯಿಲ್ಲದೆ 11 ವರ್ಷಗಳ ಕಾಲ ಜೈಲುವಾಸ : ಪುಣೆ ಸ್ಫೋಟದ ಆರೋಪಿಗೆ ಜಾಮೀನು ನೀಡಿದ ಕೋರ್ಟ್

- Advertisement -
- Advertisement -

ಪುಣೆಯಲ್ಲಿ ನಡೆದ 2012ರ ಸರಣಿ ಸ್ಫೋಟ ಪ್ರಕರಣದ ಆರೋಪಿ, 42 ವರ್ಷದ ಟೈಲರ್‌ಗೆ ಬಾಂಬೆ ಹೈಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 20) ಜಾಮೀನು ಮಂಜೂರು ಮಾಡಿದೆ.

ಆರೋಪಿ (ಮೇಲ್ಮನವಿದಾರ) ಮುನಿಬ್ ಮೆಮನ್‌ಗೆ ಜಾಮೀನು ನೀಡುವಾಗ, ಆತ 2012ರಿಂದ ಹನ್ನೊಂದುವರೆ ವರ್ಷಗಳ ಕಾಲ ಬಂಧನದಲ್ಲಿರುವುದನ್ನು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ಶರ್ಮಿಳಾ ದೇಶಮುಖ್ ಅವರ ಪೀಠ ಗಮನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ಮೇಲ್ಮನವಿದಾರ ಕಳೆದ ಹನ್ನೊಂದುವರೆ ವರ್ಷಗಳಿಂದ ಬಂಧನದಲ್ಲಿದ್ದಾರೆ. ವಿಚಾರಣೆಯು ನಿಗದಿತ ಅವಧಿಯೊಳಗೆ ಮುಕ್ತಾಯಗೊಳ್ಳುವ ಯಾವುದೇ ನಿರೀಕ್ಷೆಯಿಲ್ಲ. ಘಟನೆ ಡಿಸೆಂಬರ್ 2012 ರಲ್ಲಿ ನಡೆದಿದ್ದರೂ, 2022ರಲ್ಲಿ ಆರೋಪ ಹೊರಿಸಲಾಗಿದೆ. ಫೆಬ್ರವರಿ 2024ರಲ್ಲಿ ಮೊದಲ ಸಾಕ್ಷಿಯನ್ನು ವಿಚಾರಣೆ ನಡೆಸಲಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಪ್ರಾಸಿಕ್ಯೂಷನ್ 300 ಸಾಕ್ಷಿಗಳನ್ನು ಉಲ್ಲೇಖಿಸಿದೆ, ಈ ಪೈಕಿ 107 ಸಾಕ್ಷಿಗಳನ್ನು ಮಾತ್ರ ವಿಚಾರಣೆ ನಡೆಸಲು ಮುಂದಾಗಿದೆ ಎಂದು ನ್ಯಾಯಾಲಯವು ತಿಳಿಸಿದೆ.

“ಇಲ್ಲಿಯವರೆಗೆ ಕೇವಲ 8 ಸಾಕ್ಷಿಗಳನ್ನು ಮಾತ್ರ ವಿಚಾರಣೆ ನಡೆಸಲಾಗಿದೆ. ಶೀಘ್ರದಲ್ಲಿ ವಿಚಾರಣೆ ಪೂರ್ಣಗೊಳ್ಳುವ ಸಾಧ್ಯತೆಯಿಲ್ಲ. ಭಾರತದ ಸಂವಿಧಾನದ 21 ನೇ ವಿಧಿಯಡಿ ತ್ವರಿತ ವಿಚಾರಣೆ ಮೂಲಭೂತ ಹಕ್ಕು” ಎಂದು ನ್ಯಾಯಾಧೀಶರು ಒತ್ತಿ ಹೇಳಿದ್ದಾರೆ.

ಪುಣೆಯ ಪ್ರಸಿದ್ಧ ದಗಡು ಶೇಠ್ ಗಣಪತಿ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಕ್ಕಾಗಿ ಬಂಧಿತನಾಗಿದ್ದ ಇಂಡಿಯನ್ ಮುಜಾಹಿದ್ದೀನ್ ಸದಸ್ಯ ಕ್ವಾಟಿಲ್ ಸಿದ್ದಿಕ್ ಎಂಬಾತನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಯೋಜಿಸಲಾಗಿದ್ದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮುನಿಬ್ ಮೆಮನ್‌ ಅನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ : ಶೇ.33 ಮಹಿಳಾ ಮೀಸಲಾತಿ : ದೇಶದ ಎಲ್ಲಾ ವಕೀಲರ ಸಂಘಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...