Homeಮುಖಪುಟಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ಬಾಂಬೆ ಹೈಕೋರ್ಟ್ | ಮ್ಯಾಗಿ ನೂಡಲ್ಸ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

- Advertisement -
- Advertisement -

ಮ್ಯಾಗಿ ಇನ್ಸ್ಟೆಂಟ್ ನೂಡಲ್ಸ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿ ನೆಸ್ಲೆ ಇಂಡಿಯಾ ಲಿಮಿಟೆಡ್ ಮತ್ತು ಅದರ ಪದಾಧಿಕಾರಿಗಳ ವಿರುದ್ಧ ಹೂಡಲಾದ ಕ್ರಿಮಿನಲ್ ಮೊಕದ್ದಮೆಯನ್ನು ನಾಗ್ಪುರದ ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ ಎಂದು ಮಂಗಳವಾರ ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಉತ್ಪನ್ನವು ಕೆಲವು ಆಹಾರ ಸುರಕ್ಷತಾ ಮಾನದಂಡಗಳನ್ನು ಪೂರೈಸದ ಕಾರಣ ಈ ಪ್ರಕರಣವನ್ನು ದಾಖಲಿಸಲಾಗಿತ್ತು. ಮ್ಯಾಗಿ ನೂಡಲ್ಸ್

ನ್ಯಾಯಮೂರ್ತಿ ಉರ್ಮಿಳಾ ಜೋಶಿ ಫಾಲ್ಕೆ ಅವರು ಜನವರಿ 7 ರಂದು ನೀಡಿದ ತೀರ್ಪಿನಲ್ಲಿ, ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಎಫ್‌ಎಸ್‌ಎಸ್) ಕಾಯ್ದೆಯಡಿಯಲ್ಲಿ ಸಲ್ಲಿಸಲಾದ ಪ್ರಕರಣವು ಮಾನ್ಯತೆಯಿಲ್ಲ ಪ್ರಯೋಗಾಲಯ ವರದಿಯನ್ನು ಆಧರಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದು, ಆದ್ದರಿಂದ ಮೊಕದ್ದಮೆಯನ್ನು ಕೈಬಿಡಲು ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳಿಗಾಗಿ ರಾಷ್ಟ್ರೀಯ ಮಾನ್ಯತೆ ಮಂಡಳಿ (ಎನ್‌ಎಬಿಎಲ್) ಮಾನ್ಯತೆ ಪಡೆದ ಮತ್ತು ಆಹಾರ ಪ್ರಾಧಿಕಾರದಿಂದ ಗುರುತಿಸಲ್ಪಟ್ಟ ಮತ್ತು ಅದರಿಂದ ಅಧಿಸೂಚನೆಗೊಂಡ ಪ್ರಯೋಗಾಲಯದಲ್ಲಿ ಆಹಾರ ವಿಶ್ಲೇಷಕರು ಆಹಾರವನ್ನು ವಿಶ್ಲೇಷಿಸಬೇಕು ಎಂದು ಸೆಕ್ಷನ್ 43(1) ಆದೇಶಿಸುತ್ತದೆ ಎಂಬುದು ಸ್ಪಷ್ಟವಾಗಿದೆ. ಮ್ಯಾಗಿ ನೂಡಲ್ಸ್

ಆದರೆ, ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ರೆಫರಲ್ ಫುಡ್ ಲ್ಯಾಬೋರೇಟರಿಯು ಎನ್‌ಎಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯವಲ್ಲ. ಆದ್ದರಿಂದ, ಇದನ್ನು ಎಫ್‌ಎಸ್‌ಎಸ್ ಕಾಯ್ದೆಯ ಸೆಕ್ಷನ್ 43(1) ಅಡಿಯಲ್ಲಿ ಆಹಾರ ಪ್ರಾಧಿಕಾರದಿಂದ ಗುರುತಿಸಲ್ಪಟ್ಟ ಪ್ರಯೋಗಾಲಯ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಎಫ್‌ಎಸ್‌ಎಸ್ ಕಾಯ್ದೆಯ ಸೆಕ್ಷನ್ 43ರ ಅಡಿಯಲ್ಲಿ ಮಾನ್ಯತೆ ಪಡೆದ ಪ್ರಯೋಗಾಲಯದಿಂದ ಮಾದರಿಗಳನ್ನು ವಿಶ್ಲೇಷಿಸದ ಕಾರಣ ಡಿಸೆಂಬರ್ 31, 2015 ರ ಆಹಾರ ವಿಶ್ಲೇಷಕರ ವರದಿಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಇದೇ ವೇಳೆ ನ್ಯಾಯಾಲಯ ಹೇಳಿದೆ. “ಆದ್ದರಿಂದ, ಅರ್ಜಿದಾರರ ವಿರುದ್ಧ ಮೊಕದ್ದಮೆ ಹೂಡಲು ಅಡಿಪಾಯವಾಗಿರುವ ವರದಿಯನ್ನು ಅವಲಂಬಿಸಲಾಗುವುದಿಲ್ಲ” ಎಂದು ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸುತ್ತಾ ತೀರ್ಪು ನೀಡಿದೆ.

ಈ ಪ್ರಕರಣವು ಏಪ್ರಿಲ್ 2016 ರಲ್ಲಿ ಆಹಾರ ಸುರಕ್ಷತಾ ಅಧಿಕಾರಿ ಕಿರಣ್ ರಂಗಸ್ವಾಮಿ ಗೆಡಮ್ ಅವರು ಸಲ್ಲಿಸಿದ ದೂರಿನ ನಂತರ ಭುಗಿಲೆದ್ದಿತ್ತು. ಏಪ್ರಿಲ್ 30, 2015 ರಂದು ನಾಗ್ಪುರದಲ್ಲಿರುವ ನೆಸ್ಲೆ ಇಂಡಿಯಾದ ಲಾಜಿಸ್ಟಿಕ್ ಹಬ್‌ನ ತಪಾಸಣೆಯ ಸಮಯದಲ್ಲಿ, ಆಹಾರ ನಿರೀಕ್ಷಕರು “ಟೇಸ್ಟ್‌ಮೇಕರ್‌ನೊಂದಿಗೆ ಮ್ಯಾಗಿ ಇನ್‌ಸ್ಟಂಟ್ ನೂಡಲ್ಸ್” ಮತ್ತು “ಬೇಬಿ ಅಂಡ್ ಮಿ” ಪೌಷ್ಟಿಕಾಂಶದ ಪೂರಕಗಳ ಮಾದರಿಗಳನ್ನು ಪಡೆದಿದ್ದರು.

ಪುಣೆಯಲ್ಲಿರುವ ರಾಜ್ಯ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಆಹಾರ ವಿಶ್ಲೇಷಕರ ವರದಿಯು ಮ್ಯಾಗಿ ನೂಡಲ್ಸ್ ಅಗತ್ಯವಿರುವ ಮಾನದಂಡಗಳನ್ನು ಪೂರೈಸಿದೆ ಎಂದು ಸೂಚಿಸಿದೆ. ಆದಾಗ್ಯೂ, ಫಲಿತಾಂಶಗಳಿಂದ ಅತೃಪ್ತರಾದ ಅವರು ಘಾಜಿಯಾಬಾದ್‌ನಲ್ಲಿರುವ ರೆಫರಲ್ ಫುಡ್ ಲ್ಯಾಬೋರೇಟರಿಯ ಮಾದರಿಯನ್ನು ಕಳುಹಿಸಿದ್ದರು ಮತ್ತು ಅಲ್ಲಿ ಅದನ್ನು ಮರುವಿಶ್ಲೇಷನೆ ಮಾಡಿತ್ತು. ಈ ವರದಿಯು ನೂಡಲ್ಸ್ ನಿಗದಿತ ಮಾನದಂಡಗಳನ್ನು ಪೂರೈಸಿಲ್ಲ ಎಂದು ಬಹಿರಂಗಪಡಿಸಿತ್ತು.

ಅದರ ನಂತರ, ನೆಸ್ಲೆ ಇಂಡಿಯಾ ಮತ್ತು ಅದರ ಪದಾಧಿಕಾರಿಗಳ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲಾಗಿತ್ತು.

ಇದನ್ನೂಓದಿ:  “ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ

“ಸಾರ್ವಜನಿಕ ಹಿತಾಸಕ್ತಿ ಏನಾದ್ರು ಇದೆಯಾ”? ಪ್ರಧಾನಿ ಮೋದಿ ಪದವಿ ವಿವರ ಕೋರಿದ ಆರ್‌ಟಿಐ ಕಾರ್ಯಕರ್ತನಿಗೆ ದೆಹಲಿ ಹೈಕೋರ್ಟ್‌ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. College education is a mystery for some?
    Most of us have basic BA or BSc degrees and do with it?
    The greatness of democracy is the chaiwalah can be PM of India?
    PM’s office is not staffed by fools or dumb officers, they are IAS, IPS etc officers?
    If they won’t do for you, God can only help you?

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...