Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...