Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...