Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...