Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...