Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...