Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...