Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...