Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...