Homeಮುಖಪುಟಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

ಕಾನೂನುಬಾಹಿರವಾಗಿ ವಜಾಗೊಳಿಸಿದ ಬಾಟಾ ಸೇಲ್ಸ್‌ಮ್ಯಾನ್‌ಗಳಿಗೆ 75% ಪರಿಹಾರ ನೀಡಬೇಕು: ಬಾಂಬೆ ಹೈಕೋರ್ಟ್

- Advertisement -
- Advertisement -

2007ರಲ್ಲಿ ಬಾಟಾ ಸೇಲ್ಸ್‌ಮ್ಯಾನ್‌ಗಳನ್ನು ವಿಚಾರಣೆ ನಡೆಸದೆ ವಜಾಗೊಳಿಸಿರುವುದನ್ನು ಗಮನಿಸಿದ ಬಾಂಬೆ ಹೈಕೋರ್ಟ್, ಏಳು ಸೇಲ್ಸ್‌ಮ್ಯಾನ್‌ಗಳಿಗೆ 19.5 ಲಕ್ಷದಿಂದ 33 ಲಕ್ಷದವರೆಗೆ ಪರಿಹಾರ ನೀಡುವಂತೆ ಸೂಚಿಸಿದೆ.

ವಾರದಲ್ಲಿ ಏಳು ದಿನಗಳು ಹೆಚ್ಚಿನ ಅವಧಿಯೊಂದಿಗೆ ಕೆಲಸ ಮಾಡಬೇಕು ಎಂದು ಶೋರೂಮ್‌ಗಳಿಗೆ ನೀಡಿದ ವೇಳಾಪಟ್ಟಿಯನ್ನು ಅನುಸರಿಸಲು ನಿರಾಕರಿಸಿದ ಏಳು ಮಾರಾಟಗಾರರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ಯಾವುದೇ ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಿರುವುದನ್ನು ಗಮನಿಸಿದ ನ್ಯಾಯಮೂರ್ತಿ ಸಂದೀಪ್ ಮರ್ನೆ ಅವರು, ”ವಜಾಗೊಳಿಸಿ 16 ವರ್ಷಗಳು ಕಳೆದಿವೆ ಮತ್ತು ಅವರು ಈಗ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗದಿರಬಹುದು. ಕಳೆದ 16 ವರ್ಷಗಳ ಹಿಂದಿನ ವೇತನದ 75 ಪ್ರತಿಶತದಷ್ಟು ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

”ದೂರುದಾರರು ಈಗ ಬಾಟಾದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟಗಾರರಾಗಿ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸ್ಥಿತಿಯಲ್ಲಿದ್ದಾರೆಯೇ ಎಂದು ತಿಳಿದಿಲ್ಲ… ಆದರೆ ಕಳೆದ 16 ವರ್ಷಗಳಿಂದ ಅವರಿಗೆ ಅನ್ಯಾಯವಾಗಿದೆ. ಹಾಗಾಗಿ ಅವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರಬಹುದು, ಬದಲಾಗಿ ಅವರಿಗೆ ಸುಮಾರು 75% ನಷ್ಟು ಮೊತ್ತದ ಪರಿಹಾರ ಪಾವತಿಸಲು ಬಾಟಾಗೆ ನಿರ್ದೇಶಿಸಿದರೆ ನ್ಯಾಯ ನೀಡಿದಂತಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದರು.

2007ರಲ್ಲಿ ಬಾಟಾ ಕಂಪನಿಯು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ನಷ್ಟ ತಗ್ಗಿಸಲು ತನ್ನ ಶೋರೂಮ್‌ಗಳನ್ನು ವಾರದ ಎಲ್ಲಾ ಏಳು ದಿನಗಳು ಕಾರ್ಯನಿರ್ವಹಿಸಲು ನಿರ್ಧರಿಸಿತು. ಪ್ರತಿ ಉದ್ಯೋಗಿಗೆ ವಾರದ ರಜೆ ನೀಡಲಾಗುವುದು ಮತ್ತು ರಾತ್ರಿ 9:30ರೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಷರತ್ತಿನ ಮೇಲೆ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿದೆ.

ಬಾಟಾ ಕಂಪನಿಯು ಡ್ಯೂಟಿ ಚಾರ್ಟ್‌ನ್ನು ಸಿದ್ಧಪಡಿಸಿತ್ತು ಆದರೆ ಕೆಲವು ಮಾರಾಟಗಾರರು ಇದನ್ನು ವಿರೋಧಿಸಿದರು. ರೋಸ್ಟರ್‌ಗೆ ಬದ್ಧರಾಗಿರಲು ಅವರು ನಿರಾಕರಿಸುವುದನ್ನು ದುರ್ನಡತೆ ಎಂದು ಪರಿಗಣಿಸಿ ಬಾಟಾ ಅವರ ಸೇವೆಯಿಂದ ವಜಾಗೊಳಿಸಿತು.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಮಾರಾಟಗಾರರು ಲೇಬರ್ ಕೋರ್ಟ್‌ನ್ನು ಸಂಪರ್ಕಿಸಿದರು, ಅದು ಅವರ ಪರವಾಗಿ ತೀರ್ಪು ನೀಡಿತು. ಅವರಿಗೆ 50 ಪ್ರತಿಶತ ಹಿಂಬದಿ ವೇತನ ನೀಡಿತು. ಈ ನಿರ್ಧಾರವನ್ನು ಕೈಗಾರಿಕಾ ನ್ಯಾಯಾಲಯ ಎತ್ತಿ ಹಿಡಿದಿದೆ.

ಸೇಲ್ಸ್‌ಮನ್‌ಗಳು ಕೆಲಸಗಾರರಲ್ಲ ಮತ್ತು ಹೀಗಾಗಿ ಕಾರ್ಮಿಕ ನ್ಯಾಯಾಲಯಕ್ಕೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಾಟಾ ಕಂಪನಿಯು ಹೈಕೋರ್ಟ್‌ನ ಮುಂದೆ ಇದನ್ನು ಪ್ರಶ್ನಿಸಿತು. ಮಾರಾಟಗಾರರು ಕೂಡ 100 ಪ್ರತಿಶತ ವೇತನವನ್ನು ಕೋರಿ ಹೈಕೋರ್ಟ್‌ನ ಮುಂದೆ ಆದೇಶವನ್ನು ಪ್ರಶ್ನಿಸಿದರು.

ಆಪಾದಿತ ದುಷ್ಕೃತ್ಯವನ್ನು ಸಾಬೀತುಪಡಿಸಲು ಬಾಟಾ ಯಾವುದೇ ವಿಚಾರಣೆಯನ್ನು ನಡೆಸಿಲ್ಲ ಎಂದು ನ್ಯಾಯಾಲಯವು ಕಂಡುಹಿಡಿದಿದೆ ಮತ್ತು ಹೀಗಾಗಿ ಇದು ಕಾನೂನುಬಾಹಿರವೆಂದು ಪರಿಗಣಿಸಿತು.

ನಾಲ್ಕು ತಿಂಗಳೊಳಗೆ ಪ್ರತಿ ಸಂತ್ರಸ್ತ ಮಾರಾಟಗಾರನಿಗೆ ಸರಿಸುಮಾರು 75 ಪ್ರತಿಶತದಷ್ಟು ಹಿಂದಿನ ವೇತನದ ಒಟ್ಟು ಮೊತ್ತದ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಬಾಟಾಗೆ ನಿರ್ದೇಶಿಸಿತು. ನಿಗದಿತ ಅವಧಿಯೊಳಗೆ ಪರಿಹಾರ ನೀಡದಿದ್ದಲ್ಲಿ ವಾರ್ಷಿಕ ಶೇ 8ರಷ್ಟು ಬಡ್ಡಿ ನೀಡುವಂತೆಯೂ ನ್ಯಾಯಾಲಯ ಬಾಟಾಗೆ ಆದೇಶಿಸಿದೆ.

ಈ ಬಗ್ಗೆ ಸಮಾಜಿಕ ಕಾರ್ಯಕರ್ತರು, ಕಾರ್ಮಿಕರ ಪರ ಹೋರಾಟಗಾರರಾದ ಡಾ. ವಾಸು ಅವರು ಪ್ರತಿಕ್ರಿಯಿಸಿದ್ದು, ”ಬಹಳ ದಿನಗಳ ನಂತರ ಕಾರ್ಮಿಕರ ಪರವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಾರದ ರಜೆ ನೀಡುವುದು ಪ್ರಪಂಚದಾದ್ಯಂತ ಜಾರಿಯಾಗಿ 100 ವರ್ಷಗಳೇ ಕಳೆದಿವೆ. ಅದನ್ನು ನಿರಾಕರಿಸಲು ಹೊರಟಿದ್ದ ಬಾಟಾ ಕಂಪನಿಗೆ ಮತ್ತು ಉದ್ಯೋಗಿಗಳಿಗೆ ನ್ಯಾಯಾಲಯದ ಆದೇಶ ಎಚ್ಚರಿಕೆಯ ಗಂಟೆಯಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...