Homeದಲಿತ್ ಫೈಲ್ಸ್ದಲಿತ ಕಾನೂನು ವಿದ್ಯಾರ್ಥಿಯ ಕಸ್ಟಡಿ ಸಾವು: ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ

ದಲಿತ ಕಾನೂನು ವಿದ್ಯಾರ್ಥಿಯ ಕಸ್ಟಡಿ ಸಾವು: ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ

- Advertisement -
- Advertisement -

ದಲಿತ ಕಾನೂನು ವಿದ್ಯಾರ್ಥಿ ಸೋಮನಾಥ್ ಸೂರ್ಯವಂಶಿ ಅವರ ಕಸ್ಟಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ.

2024ರ ನವೆಂಬರ್‌ನಲ್ಲಿ ಭಾರತದ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ್ದನ್ನು ಖಂಡಿಸಿ ಪ್ರತಿಭಟಿಸಿದ ನಂತರ ಪೊಲೀಸರು ಬಂಧಿಸಲ್ಪಟ್ಟವರಲ್ಲಿ ಸೋಮನಾಥ ಸೂರ್ಯವಂಶಿ ಕೂಡ ಒಬ್ಬರು.

ತನ್ನ ಮಗನನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪೊಲೀಸರು ಜೈಲಿನಲ್ಲಿ ಚಿತ್ರಹಿಂಸೆ ಕೊಟ್ಟಿದ್ದಾರೆ. ಇದರಿಂದಾಗಿ ಆತ ಡಿಸೆಂಬರ್ 15, 2024ರಂದು ಸಾವನ್ನಪ್ಪಿದ್ದಾನೆ ಎಂದು ಸೋಮನಾಥ್ ಸೂರ್ಯವಂಶಿ ಅವರ ತಾಯಿ ಆರೋಪಿಸಿದ್ದರು.

ಈ ಆರೋಪವನ್ನು ಅಲ್ಲಗಳೆದಿದ್ದ ಪೊಲೀಸರು, ಬಂಧನದ ನಂತರ ಸೂರ್ಯವಂಶಿಗೆ ಎದೆ ನೋವು ಕಾಣಿಸಿಕೊಂಡಿತ್ತು, ಅವರು ಚಡಪಡಿಸುತ್ತಿದ್ದರು. ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದರು.

ತನ್ನ ಮಗನ ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳು ಹಿಂದೇಟು ಹಾಕಿದ್ದರಿಂದ ನೊಂದ ಸೂರ್ಯವಂಶಿ ಅವರ ತಾಯಿ, ಹೈಕೋರ್ಟ್ ಮೊರೆ ಹೋಗಿದ್ದರು.

ಕಸ್ಟಡಿ ಸಾವುಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪೂರ್ಣಗೊಳಿಸಿದ ಬಳಿಕ, ಅಧಿಕಾರಿಗಳು ಏನು ಮಾಡಬೇಕು ಎಂಬುದರ ಕುರಿತ ಮಾರ್ಗಸೂಚಿಗಳನ್ನು ಸಹ ಅವರು ಕೋರಿದ್ದರು.

ಜುಲೈ 4ರಂದು, ನ್ಯಾಯಮೂರ್ತಿ ವಿಭಾ ವಿ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ಎ ದೇಶಮುಖ್ ಅವರಿದ್ದ ಪೀಠವು, ಪೊಲೀಸರು ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕಿತ್ತು. ಆದರೆ, ಅವರು ಕ್ರಮ ಕೈಗೊಂಡಿಲ್ಲ ಎಂದಿದೆ. ಒಂದು ವಾರದೊಳಗೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಿರ್ದೇಶಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂಬ ವರದಿಗಳನ್ನು ನೋಡಿದ ಹಿಂದೂ ಸಕಲ್ ಸಮಾಜ ಮೋರ್ಚಾ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನವೆಂಬರ್ 10, 2024ರಂದು ಪ್ರತಿಭಟನೆ ಆಯೋಜಿಸಿತ್ತು.

ಪ್ರತಿಭಟನೆ ವೇಳೆ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಇರಿಸಲಾಗಿದ್ದ ಭಾರತದ ಸಂವಿಧಾನದ ಪ್ರತಿಕೃತಿಯನ್ನು ವ್ಯಕ್ತಿಯೊಬ್ಬ ಧ್ವಂಸಗೊಳಿಸಿದ್ದಾನೆ ಎಂಬ ಆರೋಪಿಸಲಾಗಿತ್ತು. ಇದರ ವಿರುದ್ದ ನವೆಂಬರ್ 11, 2024ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಪ್ರತಿಭಟನೆ ಬಳಿಕ ಪೊಲೀಸರು ಮನೆಗಳ ಮೇಲೆ ದಾಳಿ ನಡೆಸಿದ್ದರು. ಸೋಮನಾಥ ಸೂರ್ಯವಂಶಿ ಸೇರಿದಂತೆ ಹಲವರನ್ನು ಬಂಧಿಸಿದ್ದರು.

ತನ್ನ ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಲಾಗಿದೆ. ಸಂವಿಧಾನದ ಅಪವಿತ್ರತೆಯ ವಿರುದ್ಧದ ಶಾಂತಿಯುತ ಪ್ರತಿಭಟನೆಯಲ್ಲಿ ಮಾತ್ರ ಆತ ಭಾಗವಹಿಸಿದ್ದ ಎಂದು ಆತನ ತಾಯಿ ಹೇಳಿಕೊಂಡಿದ್ದರು. ಸೋಮನಾಥ್ ಮತ್ತು ಇತರರನ್ನು ಬಂಧಿಸಿದ ನಂತರ ತೀವ್ರವಾಗಿ ಥಳಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

ಸೋಮನಾಥ್ ಡಿಸೆಂಬರ್ 15, 2024ರಂದು ನ್ಯಾಯಾಂಗ ಬಂಧನದಲ್ಲಿದ್ದಾಗ ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಅವರ ದೇಹದ ಮೇಲಾದ ತೀವ್ರವಾದ ಗಾಯಗಳು ಸಾವಿಗೆ ಕಾರಣ ಎಂದು ತಿಳಿದು ಬಂದಿತ್ತು.

ನಂತರ, ಸೋಮನಾಥ್ ಅವರ ತಾಯಿ ಜೈಲಿನಲ್ಲಿ ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನಗಳನ್ನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಲ್ಲದೆ, ಕಸ್ಟಡಿಯಲ್ಲಿ ಮಹಿಳೆಯ ಘನತೆಗೆ ಧಕ್ಕೆ ತಂದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಮತ್ತು ಕಸ್ಟಡಿ ಸಾವಿನ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಮುಗಿದ ನಂತರದ ಕಾರ್ಯವಿಧಾನದ ಬಗ್ಗೆ ಮಾರ್ಗಸೂಚಿಗಳನ್ನು ನೀಡುವಂತೆಯೂ ಅವರು ಕೋರಿದ್ದರು.

ಪರ್ಭಾನಿಯಿಂದ ದೂರದಲ್ಲಿ ಸದ್ದಿಲ್ಲದೆ ಅಂತ್ಯಕ್ರಿಯೆ ನಡೆಸುವಂತೆ ಪೊಲೀಸರು ತನ್ನ ಮೇಲೆ ಒತ್ತಡ ಹೇರಿದ್ದರು. ಪೊಲೀಸರ ವಿರುದ್ಧ ಪ್ರಕರಣವನ್ನು ಹೂಡದಿರಲು 50 ಲಕ್ಷದ ರೂಪಾಯಿ ಆಮಿಷವನ್ನೂ ಒಡ್ಡಲಾಗಿತ್ತು ಎಂದು ಸೋಮನಾಥ್ ಅವರ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಆರೋಪಿಸಿದ್ದರು.

ಆದ್ದರಿಂದ, ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದ್ದರು. ಸರ್ಕಾರ ತನ್ನ ಮಗನ ಸಾವಿಗೆ ಕಾರಣರಾದ ಪೊಲೀಸರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಕಂಡು ಬಂದಿದೆ. ಆದ್ದರಿಂದ ಪೊಲೀಸರು ಲಲಿತಾ ಕುಮಾರಿ ಮಾರ್ಗಸೂಚಿಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು ಎಂದು ನ್ಯಾಯಾಲಯವು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ನಿಗದಿಪಡಿಸಿದೆ.

ನಕಲಿ ಪದವಿ ಪ್ರಮಾಣಪತ್ರ: ಯುಪಿ ಡಿಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿದ್ಧ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...