Homeದಲಿತ್ ಫೈಲ್ಸ್ದಲಿತ ಕಾನೂನು ವಿದ್ಯಾರ್ಥಿಯ ಕಸ್ಟಡಿ ಸಾವು: ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ

ದಲಿತ ಕಾನೂನು ವಿದ್ಯಾರ್ಥಿಯ ಕಸ್ಟಡಿ ಸಾವು: ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ

- Advertisement -
- Advertisement -

ದಲಿತ ಕಾನೂನು ವಿದ್ಯಾರ್ಥಿ ಸೋಮನಾಥ್ ಸೂರ್ಯವಂಶಿ ಅವರ ಕಸ್ಟಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶಿಸಿದೆ.

2024ರ ನವೆಂಬರ್‌ನಲ್ಲಿ ಭಾರತದ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ್ದನ್ನು ಖಂಡಿಸಿ ಪ್ರತಿಭಟಿಸಿದ ನಂತರ ಪೊಲೀಸರು ಬಂಧಿಸಲ್ಪಟ್ಟವರಲ್ಲಿ ಸೋಮನಾಥ ಸೂರ್ಯವಂಶಿ ಕೂಡ ಒಬ್ಬರು.

ತನ್ನ ಮಗನನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪೊಲೀಸರು ಜೈಲಿನಲ್ಲಿ ಚಿತ್ರಹಿಂಸೆ ಕೊಟ್ಟಿದ್ದಾರೆ. ಇದರಿಂದಾಗಿ ಆತ ಡಿಸೆಂಬರ್ 15, 2024ರಂದು ಸಾವನ್ನಪ್ಪಿದ್ದಾನೆ ಎಂದು ಸೋಮನಾಥ್ ಸೂರ್ಯವಂಶಿ ಅವರ ತಾಯಿ ಆರೋಪಿಸಿದ್ದರು.

ಈ ಆರೋಪವನ್ನು ಅಲ್ಲಗಳೆದಿದ್ದ ಪೊಲೀಸರು, ಬಂಧನದ ನಂತರ ಸೂರ್ಯವಂಶಿಗೆ ಎದೆ ನೋವು ಕಾಣಿಸಿಕೊಂಡಿತ್ತು, ಅವರು ಚಡಪಡಿಸುತ್ತಿದ್ದರು. ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದರು.

ತನ್ನ ಮಗನ ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳು ಹಿಂದೇಟು ಹಾಕಿದ್ದರಿಂದ ನೊಂದ ಸೂರ್ಯವಂಶಿ ಅವರ ತಾಯಿ, ಹೈಕೋರ್ಟ್ ಮೊರೆ ಹೋಗಿದ್ದರು.

ಕಸ್ಟಡಿ ಸಾವುಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪೂರ್ಣಗೊಳಿಸಿದ ಬಳಿಕ, ಅಧಿಕಾರಿಗಳು ಏನು ಮಾಡಬೇಕು ಎಂಬುದರ ಕುರಿತ ಮಾರ್ಗಸೂಚಿಗಳನ್ನು ಸಹ ಅವರು ಕೋರಿದ್ದರು.

ಜುಲೈ 4ರಂದು, ನ್ಯಾಯಮೂರ್ತಿ ವಿಭಾ ವಿ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ಎ ದೇಶಮುಖ್ ಅವರಿದ್ದ ಪೀಠವು, ಪೊಲೀಸರು ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕಿತ್ತು. ಆದರೆ, ಅವರು ಕ್ರಮ ಕೈಗೊಂಡಿಲ್ಲ ಎಂದಿದೆ. ಒಂದು ವಾರದೊಳಗೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಿರ್ದೇಶಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂಬ ವರದಿಗಳನ್ನು ನೋಡಿದ ಹಿಂದೂ ಸಕಲ್ ಸಮಾಜ ಮೋರ್ಚಾ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನವೆಂಬರ್ 10, 2024ರಂದು ಪ್ರತಿಭಟನೆ ಆಯೋಜಿಸಿತ್ತು.

ಪ್ರತಿಭಟನೆ ವೇಳೆ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಇರಿಸಲಾಗಿದ್ದ ಭಾರತದ ಸಂವಿಧಾನದ ಪ್ರತಿಕೃತಿಯನ್ನು ವ್ಯಕ್ತಿಯೊಬ್ಬ ಧ್ವಂಸಗೊಳಿಸಿದ್ದಾನೆ ಎಂಬ ಆರೋಪಿಸಲಾಗಿತ್ತು. ಇದರ ವಿರುದ್ದ ನವೆಂಬರ್ 11, 2024ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಪ್ರತಿಭಟನೆ ಬಳಿಕ ಪೊಲೀಸರು ಮನೆಗಳ ಮೇಲೆ ದಾಳಿ ನಡೆಸಿದ್ದರು. ಸೋಮನಾಥ ಸೂರ್ಯವಂಶಿ ಸೇರಿದಂತೆ ಹಲವರನ್ನು ಬಂಧಿಸಿದ್ದರು.

ತನ್ನ ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಲಾಗಿದೆ. ಸಂವಿಧಾನದ ಅಪವಿತ್ರತೆಯ ವಿರುದ್ಧದ ಶಾಂತಿಯುತ ಪ್ರತಿಭಟನೆಯಲ್ಲಿ ಮಾತ್ರ ಆತ ಭಾಗವಹಿಸಿದ್ದ ಎಂದು ಆತನ ತಾಯಿ ಹೇಳಿಕೊಂಡಿದ್ದರು. ಸೋಮನಾಥ್ ಮತ್ತು ಇತರರನ್ನು ಬಂಧಿಸಿದ ನಂತರ ತೀವ್ರವಾಗಿ ಥಳಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

ಸೋಮನಾಥ್ ಡಿಸೆಂಬರ್ 15, 2024ರಂದು ನ್ಯಾಯಾಂಗ ಬಂಧನದಲ್ಲಿದ್ದಾಗ ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಅವರ ದೇಹದ ಮೇಲಾದ ತೀವ್ರವಾದ ಗಾಯಗಳು ಸಾವಿಗೆ ಕಾರಣ ಎಂದು ತಿಳಿದು ಬಂದಿತ್ತು.

ನಂತರ, ಸೋಮನಾಥ್ ಅವರ ತಾಯಿ ಜೈಲಿನಲ್ಲಿ ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನಗಳನ್ನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಲ್ಲದೆ, ಕಸ್ಟಡಿಯಲ್ಲಿ ಮಹಿಳೆಯ ಘನತೆಗೆ ಧಕ್ಕೆ ತಂದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಮತ್ತು ಕಸ್ಟಡಿ ಸಾವಿನ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಮುಗಿದ ನಂತರದ ಕಾರ್ಯವಿಧಾನದ ಬಗ್ಗೆ ಮಾರ್ಗಸೂಚಿಗಳನ್ನು ನೀಡುವಂತೆಯೂ ಅವರು ಕೋರಿದ್ದರು.

ಪರ್ಭಾನಿಯಿಂದ ದೂರದಲ್ಲಿ ಸದ್ದಿಲ್ಲದೆ ಅಂತ್ಯಕ್ರಿಯೆ ನಡೆಸುವಂತೆ ಪೊಲೀಸರು ತನ್ನ ಮೇಲೆ ಒತ್ತಡ ಹೇರಿದ್ದರು. ಪೊಲೀಸರ ವಿರುದ್ಧ ಪ್ರಕರಣವನ್ನು ಹೂಡದಿರಲು 50 ಲಕ್ಷದ ರೂಪಾಯಿ ಆಮಿಷವನ್ನೂ ಒಡ್ಡಲಾಗಿತ್ತು ಎಂದು ಸೋಮನಾಥ್ ಅವರ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಆರೋಪಿಸಿದ್ದರು.

ಆದ್ದರಿಂದ, ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದ್ದರು. ಸರ್ಕಾರ ತನ್ನ ಮಗನ ಸಾವಿಗೆ ಕಾರಣರಾದ ಪೊಲೀಸರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು.

ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಕಂಡು ಬಂದಿದೆ. ಆದ್ದರಿಂದ ಪೊಲೀಸರು ಲಲಿತಾ ಕುಮಾರಿ ಮಾರ್ಗಸೂಚಿಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು ಎಂದು ನ್ಯಾಯಾಲಯವು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ನಿಗದಿಪಡಿಸಿದೆ.

ನಕಲಿ ಪದವಿ ಪ್ರಮಾಣಪತ್ರ: ಯುಪಿ ಡಿಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿದ್ಧ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...