Homeಮುಖಪುಟಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

- Advertisement -
- Advertisement -

ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಹಿಂದಿಯನ್ನು “ರಾಷ್ಟ್ರೀಯ ಭಾಷೆ” ಎಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈದರಾಬಾದ್ ನಿವಾಸಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಪ್ರಸಂಗ ಜರುಗಿದೆ.

ಮುಂಬೈ ಪೊಲೀಸರು ಗಂಗಮ್ ಸುಧೀರ್ ಕುಮಾರ್ ರೆಡ್ಡಿ ಎಂಬ ವ್ಯಕ್ತಿಯನ್ನು ಅವರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಪತ್ತೆಯಾಗಿದೆ ಎಂದು ಆರೋಪಿಸಿ ಜುಲೈ 2019 ರಲ್ಲಿ ಬಂಧಿಸಿದ್ದರು. ಆ ವಾಹನವು ರೆಡ್ಡಿ ಅವರ ಹೆಂಡತಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ ಸೆಕ್ಷನ್‌ಗಳ ಅಡಿಯಲ್ಲಿ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಜಾಮೀನು ಅರ್ಜಿ ಸಲ್ಲಿಸಿರುವ ರೆಡ್ಡಿ ಪೊಲೀಸರು ತನ್ನ ಬಂಧನಕ್ಕೆ ಕಾರಣಗಳ ಬಗ್ಗೆ ಹಾಗೂ ನನ್ನ  ಶಾಸನಬದ್ಧ ಹಕ್ಕುಗಳ ಬಗ್ಗೆ ಹಿಂದಿಯಲ್ಲಿ ಹೇಳಿದ್ದಾರೆ. ನನಗೆ ಹಿಂದಿ ಬಾರದ ಕಾರಣ ಅದು ಅರ್ಥವಾಗಿಲ್ಲ, ಹಾಗಾಗಿ ಜಾಮೀನು ನೀಡಬೇಕೆಂದು ವಾದಿಸಿದ್ದರು.

ಈ ವಾದಕ್ಕೆ ಪ್ರತಿಕ್ರಿಯೆಯಾಗಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರು, ‘ರೆಡ್ಡಿ ಅವರು ಟ್ರಾವೆಲ್ಸ್ ವ್ಯವಹಾರವನ್ನು ಹೊಂದಿದ್ದಾರೆ ಮತ್ತು ಅವರು “ಸ್ಥಳೀಯ ಭಾಷೆಯ ಸ್ಥಳಾಕೃತಿ ಮತ್ತು ಸಂಕೇತಗಳ ಬಗ್ಗೆ ತಿಳಿದಿರಬೇಕು” ಎಂದು ಹೇಳಿ, ರೆಡ್ಡಿಗೆ ಹಿಂದಿ ಗೊತ್ತಿದೆ ಎಂದು ಹೈಕೋರ್ಟ್ ಭಾವಿಸಬಹುದು’ ಎಂದಿದ್ದರು.

“ಅರ್ಜಿದಾರರಿಗೆ ತಮ್ಮ ಹಕ್ಕಿನ ಬಗ್ಗೆ ಹಿಂದಿಯಲ್ಲಿ ತಿಳಿಸಲಾಗಿದೆ, ಅದು ರಾಷ್ಟ್ರೀಯ ಭಾಷೆಯಾಗಿದೆ” ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸಾಂಬ್ರೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಸಂವಿಧಾನದ ಪ್ರಕಾರ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ರೆಡ್ಡಿ ವಾದಿಸಿದ್ದಾರೆ. ಅವರು ಸಂವಿಧಾನದ 345 ನೇ ವಿಧಿಯನ್ನು ಉಲ್ಲೇಖಿಸಿ, ಇದು ಶಾಸಕಾಂಗವು ರಾಜ್ಯದಲ್ಲಿ ಯಾವುದೇ ರಾಜ್ಯ ಭಾಷೆ ಅಥವಾ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸಲು ಅನುಮತಿಸುತ್ತದೆ. ಇಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದು ಉಲ್ಲೇಖಿಸಿಲ್ಲ ಎಂದಿದ್ದಾರೆ.

ಸಂವಿಧಾನ ರಚನಾ ಸಭೆಯಲ್ಲಿ ಈ ಬಗ್ಗೆ ತೀವ್ರ ಚರ್ಚೆ ನಡೆದಿದೆ. ನಮ್ಮ ಸಂವಿಧಾನ ರಚನಾಕಾರರು ಹಿಂದಿಯನ್ನು ಹಿಂದಿಯನ್ನು ರಾಷ್ಟ್ರಭಾಷೆಯೆಂದು ಒಪ್ಪಿಕೊಂಡಿಲ್ಲ ಎಂದು ರೆಡ್ಡಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

ಪೊಲೀಸರು ನನಗೆ ತಿಳಿದಿರುವ ರಾಜ್ಯಭಾಷೆಯಲ್ಲಿ ನನ್ನ ಹಕ್ಕುಗಳ ಬಗ್ಗೆ, ನನ್ನ ಮೇಲಿನ ಆರೋಪಗಳ ಬಗ್ಗೆ ತಿಳಿಸಿಲ್ಲ. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. ಟ್ರಾವೆಲ್ ಏಜೆನ್ಸಿಯವರು ಸ್ಥಳೀಯ ಭಾಷೆ ತಿಳಿದಿರಬೇಕು ಎಂಬ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿರುವ ಅವರು, ಸ್ಥಳೀಯ ಭಾಷೆಯಲ್ಲಿ ಸೈನ್‌ಬೋರ್ಡ್‌ಗಳಿಗಿಂತ ನಾನು ಗೂಗಲ್ ನಕ್ಷೆಗಳ ಅಪ್ಲಿಕೇಶನ್ ಅನ್ನು ಅವಲಂಬಿಸಿದ್ದೆ ಎಂದು ಉತ್ತರಿಸಿದ್ದಾರೆ.


ಇದನ್ನೂ ಓದಿ: ರಾಜಧಾನಿಯಲ್ಲಿ ಭೋರ್ಗರೆದ ’ಭೀಮ ಸಾಗರ’: ರ್‍ಯಾಲಿಯನ್ನು ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...