Homeಮುಖಪುಟಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

- Advertisement -
- Advertisement -

ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಹಿಂದಿಯನ್ನು “ರಾಷ್ಟ್ರೀಯ ಭಾಷೆ” ಎಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈದರಾಬಾದ್ ನಿವಾಸಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಪ್ರಸಂಗ ಜರುಗಿದೆ.

ಮುಂಬೈ ಪೊಲೀಸರು ಗಂಗಮ್ ಸುಧೀರ್ ಕುಮಾರ್ ರೆಡ್ಡಿ ಎಂಬ ವ್ಯಕ್ತಿಯನ್ನು ಅವರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಪತ್ತೆಯಾಗಿದೆ ಎಂದು ಆರೋಪಿಸಿ ಜುಲೈ 2019 ರಲ್ಲಿ ಬಂಧಿಸಿದ್ದರು. ಆ ವಾಹನವು ರೆಡ್ಡಿ ಅವರ ಹೆಂಡತಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ ಸೆಕ್ಷನ್‌ಗಳ ಅಡಿಯಲ್ಲಿ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಜಾಮೀನು ಅರ್ಜಿ ಸಲ್ಲಿಸಿರುವ ರೆಡ್ಡಿ ಪೊಲೀಸರು ತನ್ನ ಬಂಧನಕ್ಕೆ ಕಾರಣಗಳ ಬಗ್ಗೆ ಹಾಗೂ ನನ್ನ  ಶಾಸನಬದ್ಧ ಹಕ್ಕುಗಳ ಬಗ್ಗೆ ಹಿಂದಿಯಲ್ಲಿ ಹೇಳಿದ್ದಾರೆ. ನನಗೆ ಹಿಂದಿ ಬಾರದ ಕಾರಣ ಅದು ಅರ್ಥವಾಗಿಲ್ಲ, ಹಾಗಾಗಿ ಜಾಮೀನು ನೀಡಬೇಕೆಂದು ವಾದಿಸಿದ್ದರು.

ಈ ವಾದಕ್ಕೆ ಪ್ರತಿಕ್ರಿಯೆಯಾಗಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರು, ‘ರೆಡ್ಡಿ ಅವರು ಟ್ರಾವೆಲ್ಸ್ ವ್ಯವಹಾರವನ್ನು ಹೊಂದಿದ್ದಾರೆ ಮತ್ತು ಅವರು “ಸ್ಥಳೀಯ ಭಾಷೆಯ ಸ್ಥಳಾಕೃತಿ ಮತ್ತು ಸಂಕೇತಗಳ ಬಗ್ಗೆ ತಿಳಿದಿರಬೇಕು” ಎಂದು ಹೇಳಿ, ರೆಡ್ಡಿಗೆ ಹಿಂದಿ ಗೊತ್ತಿದೆ ಎಂದು ಹೈಕೋರ್ಟ್ ಭಾವಿಸಬಹುದು’ ಎಂದಿದ್ದರು.

“ಅರ್ಜಿದಾರರಿಗೆ ತಮ್ಮ ಹಕ್ಕಿನ ಬಗ್ಗೆ ಹಿಂದಿಯಲ್ಲಿ ತಿಳಿಸಲಾಗಿದೆ, ಅದು ರಾಷ್ಟ್ರೀಯ ಭಾಷೆಯಾಗಿದೆ” ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸಾಂಬ್ರೆ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಸಂವಿಧಾನದ ಪ್ರಕಾರ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ರೆಡ್ಡಿ ವಾದಿಸಿದ್ದಾರೆ. ಅವರು ಸಂವಿಧಾನದ 345 ನೇ ವಿಧಿಯನ್ನು ಉಲ್ಲೇಖಿಸಿ, ಇದು ಶಾಸಕಾಂಗವು ರಾಜ್ಯದಲ್ಲಿ ಯಾವುದೇ ರಾಜ್ಯ ಭಾಷೆ ಅಥವಾ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸಲು ಅನುಮತಿಸುತ್ತದೆ. ಇಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದು ಉಲ್ಲೇಖಿಸಿಲ್ಲ ಎಂದಿದ್ದಾರೆ.

ಸಂವಿಧಾನ ರಚನಾ ಸಭೆಯಲ್ಲಿ ಈ ಬಗ್ಗೆ ತೀವ್ರ ಚರ್ಚೆ ನಡೆದಿದೆ. ನಮ್ಮ ಸಂವಿಧಾನ ರಚನಾಕಾರರು ಹಿಂದಿಯನ್ನು ಹಿಂದಿಯನ್ನು ರಾಷ್ಟ್ರಭಾಷೆಯೆಂದು ಒಪ್ಪಿಕೊಂಡಿಲ್ಲ ಎಂದು ರೆಡ್ಡಿ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

ಪೊಲೀಸರು ನನಗೆ ತಿಳಿದಿರುವ ರಾಜ್ಯಭಾಷೆಯಲ್ಲಿ ನನ್ನ ಹಕ್ಕುಗಳ ಬಗ್ಗೆ, ನನ್ನ ಮೇಲಿನ ಆರೋಪಗಳ ಬಗ್ಗೆ ತಿಳಿಸಿಲ್ಲ. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. ಟ್ರಾವೆಲ್ ಏಜೆನ್ಸಿಯವರು ಸ್ಥಳೀಯ ಭಾಷೆ ತಿಳಿದಿರಬೇಕು ಎಂಬ ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿರುವ ಅವರು, ಸ್ಥಳೀಯ ಭಾಷೆಯಲ್ಲಿ ಸೈನ್‌ಬೋರ್ಡ್‌ಗಳಿಗಿಂತ ನಾನು ಗೂಗಲ್ ನಕ್ಷೆಗಳ ಅಪ್ಲಿಕೇಶನ್ ಅನ್ನು ಅವಲಂಬಿಸಿದ್ದೆ ಎಂದು ಉತ್ತರಿಸಿದ್ದಾರೆ.


ಇದನ್ನೂ ಓದಿ: ರಾಜಧಾನಿಯಲ್ಲಿ ಭೋರ್ಗರೆದ ’ಭೀಮ ಸಾಗರ’: ರ್‍ಯಾಲಿಯನ್ನು ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...