Homeಮುಖಪುಟಕ್ರಿಮಿನಲ್ ಪ್ರಕರಣ ಬಾಕಿ; ಬಿಜೆಪಿ ನಾಯಕನ ಪಾಸ್‌ಪೋರ್ಟ್ ನವೀಕರಣಕ್ಕೆ ಬಾಂಬೆ ಹೈಕೋರ್ಟ್ ನಿರಾಕರಣೆ

ಕ್ರಿಮಿನಲ್ ಪ್ರಕರಣ ಬಾಕಿ; ಬಿಜೆಪಿ ನಾಯಕನ ಪಾಸ್‌ಪೋರ್ಟ್ ನವೀಕರಣಕ್ಕೆ ಬಾಂಬೆ ಹೈಕೋರ್ಟ್ ನಿರಾಕರಣೆ

- Advertisement -
- Advertisement -

ಮಹಾರಾಷ್ಟ್ರದ ಬಿಜೆಪಿ ನಾಯಕ ಮತ್ತು ಮಾಜಿ ಕೃಷಿ ಸಚಿವ ದಾದಾ ಜಾಧವ್ರಾವ್ ಅವರ ಪುತ್ರ ಪಿಲಾಜಿ ಸುರ್ಸಿಂಗ್ ಜಾಧವ್ರಾವ್ ಅವರ ಪಾಸ್‌ಪೋರ್ಟ್ ನವೀಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಏಪ್ರಿಲ್‌ನಲ್ಲಿ ಪಾಸ್‌ಪೋರ್ಟ್ ಅವಧಿ ಮುಗಿದ ನಂತರ ಜಾಧವ್ರಾವ್ ಆಗಸ್ಟ್ 2024 ರಲ್ಲಿ ದೀರ್ಘಾವಧಿಯ ಪಾಸ್‌ಪೋರ್ಟ್ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು (ಆರ್‌ಪಿಒ) ಚಾಲ್ಇಯಲ್ಲಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ಉಲ್ಲೇಖಿಸಿ ನ್ಯಾಯಾಲಯದ ಅನುಮತಿಯನ್ನು ಪಡೆಯುವಂತೆ ನಿರ್ದೇಶಿಸಿತು.

ನ್ಯಾಯಮೂರ್ತಿಗಳಾದ ಜಿಎಸ್ ಕುಲಕರ್ಣಿ ಮತ್ತು ಅದ್ವೈತ್ ಸೇಥ್ನಾ ಅವರ ಪೀಠವು ಜಾಧವ್ರಾವ್ ಅವರಿಗೆ ಅನುಮೋದನೆಗಾಗಿ ಕ್ರಿಮಿನಲ್ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ಮಾಡಿಕೊಟ್ಟಿತು. ಆದರೆ, ಕ್ರಿಮಿನಲ್ ವಿಚಾರಣೆಗಳನ್ನು ಎದುರಿಸುತ್ತಿರುವ ವ್ಯಕ್ತಿಗಳಿಗೆ ಪಾಸ್‌ಪೋರ್ಟ್ ನೀಡುವಿಕೆಯನ್ನು ನಿರ್ಬಂಧಿಸುವ ಪಾಸ್‌ಪೋರ್ಟ್ ಕಾಯ್ದೆಯ ಸೆಕ್ಷನ್ 6(2)(ಎಫ್‌) ಅಡಿಯಲ್ಲಿ ಅವರ ಪಾಸ್‌ಪೋರ್ಟ್ ನವೀಕರಣವನ್ನು ನಿರಾಕರಿಸುವ ಆರ್‌ಪಿಒ ನಿರ್ಧಾರವನ್ನು ಎತ್ತಿಹಿಡಿದಿದೆ.

ಜಾಧವ್ರಾವ್ 2005 ರಲ್ಲಿ ಪುಣೆಯ ಸವಾದ್ ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿ ಅವರು ಮತ್ತು ಇತರ 74 ಜನರು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರಿಗೆ ಜಾಮೀನು ನೀಡಲಾಗಿದ್ದರೂ, ಪ್ರಕರಣ ಬಾಕಿ ಉಳಿದಿದೆ. ಇದರ ಹೊರತಾಗಿಯೂ, ಅವರಿಗೆ 2023 ರಲ್ಲಿ ಒಂದು ವರ್ಷದ ಪಾಸ್‌ಪೋರ್ಟ್ ನೀಡಲಾಯಿತು, ಆಗ ಅವರು ಯುನೈಟೆಡ್ ಕಿಂಗ್‌ಡಮ್‌ಗೆ ಪ್ರಯಾಣಿಸುತ್ತಿದ್ದರು.

ಜಾಧವ್ರಾವ್ ಅವರನ್ನು ಪ್ರತಿನಿಧಿಸುವ ವಕೀಲ ಅಭಿಜಿತ್ ಕುಲಕರ್ಣಿ, ತಮ್ಮ ಕಕ್ಷಿದಾರರಿಗೆ ಎಂದಿಗೂ ಶಿಕ್ಷೆಯಾಗಿಲ್ಲ ಮತ್ತು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಾರೆ ಎಂದು ವಾದಿಸಿದರು. ಪಾಸ್‌ಪೋರ್ಟ್ ನಿರಾಕರಿಸುವುದು ಆರ್ಟಿಕಲ್ 21 ರ ಅಡಿಯಲ್ಲಿ ಪ್ರಯಾಣಿಸುವ ಅವರ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ಗಮನಸೆಳೆದರು.

ಸರ್ಕಾರಿ ವಕೀಲೆ ಲೀನಾ ಪಾಟೀಲ್, ಬಾಕಿ ಇರುವ ಕ್ರಿಮಿನಲ್ ವಿಚಾರಣೆಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಪಾಸ್‌ಪೋರ್ಟ್ ನೀಡಲು ನ್ಯಾಯಾಲಯದ ಅನುಮೋದನೆ ಅಗತ್ಯವಿರುವ 1993 ರ ಸರ್ಕಾರಿ ಅಧಿಸೂಚನೆಯನ್ನು ಉಲ್ಲೇಖಿಸಿ, ಆರ್‌ಪಿಒ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಜಾಧವ್ರಾವ್ ಅವರು ಕ್ರಿಮಿನಲ್ ನ್ಯಾಯಾಲಯದಿಂದ ಅನುಮತಿ ಪಡೆಯಬೇಕು, ಅದು ಅವರ ಅರ್ಜಿಯನ್ನು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿತು.

ಇದನ್ನೂ ಓದಿ; ವೈದ್ಯೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...