Homeಮುಖಪುಟಕ್ರಿಮಿನಲ್ ಪ್ರಕರಣ ಬಾಕಿ; ಬಿಜೆಪಿ ನಾಯಕನ ಪಾಸ್‌ಪೋರ್ಟ್ ನವೀಕರಣಕ್ಕೆ ಬಾಂಬೆ ಹೈಕೋರ್ಟ್ ನಿರಾಕರಣೆ

ಕ್ರಿಮಿನಲ್ ಪ್ರಕರಣ ಬಾಕಿ; ಬಿಜೆಪಿ ನಾಯಕನ ಪಾಸ್‌ಪೋರ್ಟ್ ನವೀಕರಣಕ್ಕೆ ಬಾಂಬೆ ಹೈಕೋರ್ಟ್ ನಿರಾಕರಣೆ

- Advertisement -
- Advertisement -

ಮಹಾರಾಷ್ಟ್ರದ ಬಿಜೆಪಿ ನಾಯಕ ಮತ್ತು ಮಾಜಿ ಕೃಷಿ ಸಚಿವ ದಾದಾ ಜಾಧವ್ರಾವ್ ಅವರ ಪುತ್ರ ಪಿಲಾಜಿ ಸುರ್ಸಿಂಗ್ ಜಾಧವ್ರಾವ್ ಅವರ ಪಾಸ್‌ಪೋರ್ಟ್ ನವೀಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಏಪ್ರಿಲ್‌ನಲ್ಲಿ ಪಾಸ್‌ಪೋರ್ಟ್ ಅವಧಿ ಮುಗಿದ ನಂತರ ಜಾಧವ್ರಾವ್ ಆಗಸ್ಟ್ 2024 ರಲ್ಲಿ ದೀರ್ಘಾವಧಿಯ ಪಾಸ್‌ಪೋರ್ಟ್ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು (ಆರ್‌ಪಿಒ) ಚಾಲ್ಇಯಲ್ಲಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ಉಲ್ಲೇಖಿಸಿ ನ್ಯಾಯಾಲಯದ ಅನುಮತಿಯನ್ನು ಪಡೆಯುವಂತೆ ನಿರ್ದೇಶಿಸಿತು.

ನ್ಯಾಯಮೂರ್ತಿಗಳಾದ ಜಿಎಸ್ ಕುಲಕರ್ಣಿ ಮತ್ತು ಅದ್ವೈತ್ ಸೇಥ್ನಾ ಅವರ ಪೀಠವು ಜಾಧವ್ರಾವ್ ಅವರಿಗೆ ಅನುಮೋದನೆಗಾಗಿ ಕ್ರಿಮಿನಲ್ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ಮಾಡಿಕೊಟ್ಟಿತು. ಆದರೆ, ಕ್ರಿಮಿನಲ್ ವಿಚಾರಣೆಗಳನ್ನು ಎದುರಿಸುತ್ತಿರುವ ವ್ಯಕ್ತಿಗಳಿಗೆ ಪಾಸ್‌ಪೋರ್ಟ್ ನೀಡುವಿಕೆಯನ್ನು ನಿರ್ಬಂಧಿಸುವ ಪಾಸ್‌ಪೋರ್ಟ್ ಕಾಯ್ದೆಯ ಸೆಕ್ಷನ್ 6(2)(ಎಫ್‌) ಅಡಿಯಲ್ಲಿ ಅವರ ಪಾಸ್‌ಪೋರ್ಟ್ ನವೀಕರಣವನ್ನು ನಿರಾಕರಿಸುವ ಆರ್‌ಪಿಒ ನಿರ್ಧಾರವನ್ನು ಎತ್ತಿಹಿಡಿದಿದೆ.

ಜಾಧವ್ರಾವ್ 2005 ರಲ್ಲಿ ಪುಣೆಯ ಸವಾದ್ ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿ ಅವರು ಮತ್ತು ಇತರ 74 ಜನರು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರಿಗೆ ಜಾಮೀನು ನೀಡಲಾಗಿದ್ದರೂ, ಪ್ರಕರಣ ಬಾಕಿ ಉಳಿದಿದೆ. ಇದರ ಹೊರತಾಗಿಯೂ, ಅವರಿಗೆ 2023 ರಲ್ಲಿ ಒಂದು ವರ್ಷದ ಪಾಸ್‌ಪೋರ್ಟ್ ನೀಡಲಾಯಿತು, ಆಗ ಅವರು ಯುನೈಟೆಡ್ ಕಿಂಗ್‌ಡಮ್‌ಗೆ ಪ್ರಯಾಣಿಸುತ್ತಿದ್ದರು.

ಜಾಧವ್ರಾವ್ ಅವರನ್ನು ಪ್ರತಿನಿಧಿಸುವ ವಕೀಲ ಅಭಿಜಿತ್ ಕುಲಕರ್ಣಿ, ತಮ್ಮ ಕಕ್ಷಿದಾರರಿಗೆ ಎಂದಿಗೂ ಶಿಕ್ಷೆಯಾಗಿಲ್ಲ ಮತ್ತು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಾರೆ ಎಂದು ವಾದಿಸಿದರು. ಪಾಸ್‌ಪೋರ್ಟ್ ನಿರಾಕರಿಸುವುದು ಆರ್ಟಿಕಲ್ 21 ರ ಅಡಿಯಲ್ಲಿ ಪ್ರಯಾಣಿಸುವ ಅವರ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ಗಮನಸೆಳೆದರು.

ಸರ್ಕಾರಿ ವಕೀಲೆ ಲೀನಾ ಪಾಟೀಲ್, ಬಾಕಿ ಇರುವ ಕ್ರಿಮಿನಲ್ ವಿಚಾರಣೆಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಪಾಸ್‌ಪೋರ್ಟ್ ನೀಡಲು ನ್ಯಾಯಾಲಯದ ಅನುಮೋದನೆ ಅಗತ್ಯವಿರುವ 1993 ರ ಸರ್ಕಾರಿ ಅಧಿಸೂಚನೆಯನ್ನು ಉಲ್ಲೇಖಿಸಿ, ಆರ್‌ಪಿಒ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಜಾಧವ್ರಾವ್ ಅವರು ಕ್ರಿಮಿನಲ್ ನ್ಯಾಯಾಲಯದಿಂದ ಅನುಮತಿ ಪಡೆಯಬೇಕು, ಅದು ಅವರ ಅರ್ಜಿಯನ್ನು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿತು.

ಇದನ್ನೂ ಓದಿ; ವೈದ್ಯೆಯ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ : ನಾಲ್ವರು ಅಪರಾಧಿಗಳಿಗೆ 20 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...