Homeಮುಖಪುಟಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

ಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

- Advertisement -
- Advertisement -

ಡೆವಲಪರ್ ಮತ್ತು ಅವರ ವ್ಯವಹಾರದ ಅಕ್ರಮ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ದುರುದ್ದೇಶಪೂರಿತ ಕ್ರಮ’ಕ್ಕಾಗಿ ಬಾಂಬೆ ಹೈಕೋರ್ಟ್ ಮಂಗಳವಾರ (ಜ.22) ಜಾರಿ ನಿರ್ದೇಶನಾಲಯಕ್ಕೆ (ಇಡಿ) 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಇಡಿ ಪ್ರಕರಣವನ್ನು ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರು ತೀವ್ರ ಅಸಮ್ಮತಿ ವ್ಯಕ್ತಪಡಿಸಿದ್ದು, ಇಡಿಯಂತಹ ಸಂಸ್ಥೆಗಳು ಕಾನೂನಿನ ಮಿತಿಯೊಳಗೆ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅನಗತ್ಯ ದಬ್ಬಾಳಿಕೆಯನ್ನು ತಪ್ಪಿಸಲು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸುವಂತೆ ಸೂಚಿಸಿದ್ದಾರೆ.

ಆಗಸ್ಟ್ 2024ರಲ್ಲಿ ಮುಂಬೈ ಮೂಲದ ಡೆವಲಪರ್ ವಿರುದ್ಧ ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೊರಡಿಸಲಾದ ಆದೇಶವನ್ನು ರದ್ದುಗೊಳಿಸುವಾಗ ನ್ಯಾಯಾಲಯವು ಈ ಅವಲೋಕನಗಳನ್ನು ಮಾಡಿದೆ.

2007ರಲ್ಲಿ ದೂರುದಾರರು ಮುಂಬೈನ ಉನ್ನತ ಮಟ್ಟದ ಯೋಜನೆಯಲ್ಲಿ ವಾಣಿಜ್ಯ ಆಸ್ತಿಯನ್ನು ಖರೀದಿಸಲು ಮತ್ತು ಅದನ್ನು ವಸತಿ ಹೋಟೆಲ್/ಅತಿಥಿ ಗೃಹವಾಗಿ ಪರಿವರ್ತಿಸಲು ನವೀಕರಣ ಕಾರ್ಯಕ್ಕಾಗಿ ಡೆವಲಪರ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಾಗ ಪ್ರಕರಣ ಪ್ರಾರಂಭವಾಯಿತು.

ದೂರುದಾರರು ಆಸ್ತಿ ಮತ್ತು ನವೀಕರಣ ಕಾರ್ಯ ಎರಡಕ್ಕೂ ಸೇರಿ ಡೆವಲಪರ್‌ಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಾವತಿಸಿದ್ದರು. ಆದರೆ, ಆಕ್ಯುಪೆನ್ಸಿ ಪ್ರಮಾಣಪತ್ರ (OC)ಪಡೆಯುವಲ್ಲಿನ ಭಾರೀ ವಿಳಂಬವು ಅವರಿಗೆ ನಿರಾಶೆ ಉಂಟು ಮಾಡಿತ್ತು.

ಈ ಸಂಬಂಧ ಅವರು ನೀಡಿದ್ದ ಆರಂಭಿಕ ದೂರುಗಳನ್ನು ಪೊಲೀಸರು ತಿರಸ್ಕರಿದ್ದರು. ಯಾವುದೇ ಗುರುತಿಸಬಹುದಾದ ಅಪರಾಧವಿಲ್ಲ. ಅಲ್ಲದೆ ಇದು ಸಿವಿಲ್ ಸ್ವರೂಪದ ಪ್ರಕರಣವಾಗಿದೆ ಎಂದಿದ್ದರು.

ತನ್ನ ಮೊದಲ ದೂರು ತಿರಸ್ಕೃತಗೊಂಡ ಬಳಿಕ, ಜೂನ್ 2009 ರಲ್ಲಿ ದೂರುದಾರರು ಮಲಾಡ್ ಪೊಲೀಸ್ ಠಾಣೆಗೆ ಎರಡನೇ ದೂರು ನೀಡಿದ್ದರು. ಆದರೆ, ಮತ್ತೊಮ್ಮೆ ದೂರು ತಿರಸ್ಕೃತಗೊಂಡಿತ್ತು. ಈ ಪ್ರಕರಣ ಸಿವಿಲ್ ಸ್ವರೂಪದ್ದಾಗಿದೆ ಎಂದು ಪೊಲೀಸರು ಎರಡನೇ ಬಾರಿಯೂ ಹೇಳಿದ್ದರು.

ನಂತರ ಡಿಸೆಂಬರ್ 2009ರಲ್ಲಿ ದೂರುದಾರರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದ ನಂತರ ವಿಲೇ ಪಾರ್ಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಈ ಪ್ರಕರಣವು ನಂತರ ಇಡಿಯ ಗಮನ ಸೆಳೆದಿತ್ತು. ಡೆವಲಪರ್ ಹಣ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿತ್ತು.

ಡೆವಲಪರ್‌ಗೆ ಸಂಬಂಧಿತ ಕಂಪನಿಗಳಲ್ಲಿ ಒಂದರಿಂದ ಪಡೆದ ಹಣ ಒಟ್ಟು 4.27 ಕೋಟಿ ರೂಪಾಯಿ ಅಕ್ರಮ ಆದಾಯವಾಗಿದ್ದು, ನವೀಕರಣ ಒಪ್ಪಂದಕ್ಕೆ ಸಂಬಂಧಿಸಿದ ವಂಚನೆ ಚಟುವಟಿಕೆಗಳು ಮತ್ತು ಇದಕ್ಕೆ ಸಂಬಂಧವಿದೆ ಎಂದು ಇಡಿ ಆರೋಪಿಸಿತ್ತು.

ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, ಡೆವಲಪರ್ ಪರ ವಕೀಲರು ಈ ಪ್ರಕರಣದ ಹಿಂದೆ ಯಾವುದೇ ಕ್ರಿಮಿನಲ್ ಉದ್ದೇಶವಿಲ್ಲ. ಇದೊಂದು ಸಿವಿಲ್ ವಿವಾದ ಎಂದಿದ್ದರು. ಡೆವಲಪರ್ ಯಾವುದೇ ತಪ್ಪು ಮಾಡಿಲ್ಲ ಎಂದು ಪೊಲೀಸರು ಈಗಾಗಲೇ ಹೇಳಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಆದರೂ,ಇಡಿ ಹಣ ವರ್ಗಾವಣೆಯ ತನ್ನ ಆರೋಪಗಳನ್ನು ಮುಂದಿಡುತ್ತಲೇ ಇತ್ತು.

ಈ ಪ್ರಕರಣವನ್ನು ಇಡಿ ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಜಾಧವ್ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ವಂಚನೆಯ ಯಾವುದೇ ಅಂಶಗಳು ಕಂಡುಬಂದಿಲ್ಲ ಮತ್ತು ಮುಂಬೈನಲ್ಲಿ ಅಭಿವೃದ್ಧಿ ಯೋಜನೆಗಳು ಸಾಮಾನ್ಯವಾಗಿ ಹೇಗೆ ನಡೆಯುತ್ತವೆಯೋ ಅದಕ್ಕೆ ಅನುಗುಣವಾಗಿ ಡೆವಲಪರ್ ವರ್ತಿಸಿದ್ದಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇಡಿಯ ಅಸ್ಪಷ್ಟ ಮತ್ತು ಆಧಾರರಹಿತ ಆರೋಪಗಳ ವಿರುದ್ದ ಕಿಡಿಕಾರಿ ದಂಡ ವಿಧಿಸಿದ್ದಾರೆ.

ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...