Homeಮುಖಪುಟಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

ಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

- Advertisement -
- Advertisement -

ಡೆವಲಪರ್ ಮತ್ತು ಅವರ ವ್ಯವಹಾರದ ಅಕ್ರಮ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ದುರುದ್ದೇಶಪೂರಿತ ಕ್ರಮ’ಕ್ಕಾಗಿ ಬಾಂಬೆ ಹೈಕೋರ್ಟ್ ಮಂಗಳವಾರ (ಜ.22) ಜಾರಿ ನಿರ್ದೇಶನಾಲಯಕ್ಕೆ (ಇಡಿ) 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಇಡಿ ಪ್ರಕರಣವನ್ನು ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರು ತೀವ್ರ ಅಸಮ್ಮತಿ ವ್ಯಕ್ತಪಡಿಸಿದ್ದು, ಇಡಿಯಂತಹ ಸಂಸ್ಥೆಗಳು ಕಾನೂನಿನ ಮಿತಿಯೊಳಗೆ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅನಗತ್ಯ ದಬ್ಬಾಳಿಕೆಯನ್ನು ತಪ್ಪಿಸಲು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸುವಂತೆ ಸೂಚಿಸಿದ್ದಾರೆ.

ಆಗಸ್ಟ್ 2024ರಲ್ಲಿ ಮುಂಬೈ ಮೂಲದ ಡೆವಲಪರ್ ವಿರುದ್ಧ ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೊರಡಿಸಲಾದ ಆದೇಶವನ್ನು ರದ್ದುಗೊಳಿಸುವಾಗ ನ್ಯಾಯಾಲಯವು ಈ ಅವಲೋಕನಗಳನ್ನು ಮಾಡಿದೆ.

2007ರಲ್ಲಿ ದೂರುದಾರರು ಮುಂಬೈನ ಉನ್ನತ ಮಟ್ಟದ ಯೋಜನೆಯಲ್ಲಿ ವಾಣಿಜ್ಯ ಆಸ್ತಿಯನ್ನು ಖರೀದಿಸಲು ಮತ್ತು ಅದನ್ನು ವಸತಿ ಹೋಟೆಲ್/ಅತಿಥಿ ಗೃಹವಾಗಿ ಪರಿವರ್ತಿಸಲು ನವೀಕರಣ ಕಾರ್ಯಕ್ಕಾಗಿ ಡೆವಲಪರ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಾಗ ಪ್ರಕರಣ ಪ್ರಾರಂಭವಾಯಿತು.

ದೂರುದಾರರು ಆಸ್ತಿ ಮತ್ತು ನವೀಕರಣ ಕಾರ್ಯ ಎರಡಕ್ಕೂ ಸೇರಿ ಡೆವಲಪರ್‌ಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಾವತಿಸಿದ್ದರು. ಆದರೆ, ಆಕ್ಯುಪೆನ್ಸಿ ಪ್ರಮಾಣಪತ್ರ (OC)ಪಡೆಯುವಲ್ಲಿನ ಭಾರೀ ವಿಳಂಬವು ಅವರಿಗೆ ನಿರಾಶೆ ಉಂಟು ಮಾಡಿತ್ತು.

ಈ ಸಂಬಂಧ ಅವರು ನೀಡಿದ್ದ ಆರಂಭಿಕ ದೂರುಗಳನ್ನು ಪೊಲೀಸರು ತಿರಸ್ಕರಿದ್ದರು. ಯಾವುದೇ ಗುರುತಿಸಬಹುದಾದ ಅಪರಾಧವಿಲ್ಲ. ಅಲ್ಲದೆ ಇದು ಸಿವಿಲ್ ಸ್ವರೂಪದ ಪ್ರಕರಣವಾಗಿದೆ ಎಂದಿದ್ದರು.

ತನ್ನ ಮೊದಲ ದೂರು ತಿರಸ್ಕೃತಗೊಂಡ ಬಳಿಕ, ಜೂನ್ 2009 ರಲ್ಲಿ ದೂರುದಾರರು ಮಲಾಡ್ ಪೊಲೀಸ್ ಠಾಣೆಗೆ ಎರಡನೇ ದೂರು ನೀಡಿದ್ದರು. ಆದರೆ, ಮತ್ತೊಮ್ಮೆ ದೂರು ತಿರಸ್ಕೃತಗೊಂಡಿತ್ತು. ಈ ಪ್ರಕರಣ ಸಿವಿಲ್ ಸ್ವರೂಪದ್ದಾಗಿದೆ ಎಂದು ಪೊಲೀಸರು ಎರಡನೇ ಬಾರಿಯೂ ಹೇಳಿದ್ದರು.

ನಂತರ ಡಿಸೆಂಬರ್ 2009ರಲ್ಲಿ ದೂರುದಾರರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದ ನಂತರ ವಿಲೇ ಪಾರ್ಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಈ ಪ್ರಕರಣವು ನಂತರ ಇಡಿಯ ಗಮನ ಸೆಳೆದಿತ್ತು. ಡೆವಲಪರ್ ಹಣ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿತ್ತು.

ಡೆವಲಪರ್‌ಗೆ ಸಂಬಂಧಿತ ಕಂಪನಿಗಳಲ್ಲಿ ಒಂದರಿಂದ ಪಡೆದ ಹಣ ಒಟ್ಟು 4.27 ಕೋಟಿ ರೂಪಾಯಿ ಅಕ್ರಮ ಆದಾಯವಾಗಿದ್ದು, ನವೀಕರಣ ಒಪ್ಪಂದಕ್ಕೆ ಸಂಬಂಧಿಸಿದ ವಂಚನೆ ಚಟುವಟಿಕೆಗಳು ಮತ್ತು ಇದಕ್ಕೆ ಸಂಬಂಧವಿದೆ ಎಂದು ಇಡಿ ಆರೋಪಿಸಿತ್ತು.

ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, ಡೆವಲಪರ್ ಪರ ವಕೀಲರು ಈ ಪ್ರಕರಣದ ಹಿಂದೆ ಯಾವುದೇ ಕ್ರಿಮಿನಲ್ ಉದ್ದೇಶವಿಲ್ಲ. ಇದೊಂದು ಸಿವಿಲ್ ವಿವಾದ ಎಂದಿದ್ದರು. ಡೆವಲಪರ್ ಯಾವುದೇ ತಪ್ಪು ಮಾಡಿಲ್ಲ ಎಂದು ಪೊಲೀಸರು ಈಗಾಗಲೇ ಹೇಳಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಆದರೂ,ಇಡಿ ಹಣ ವರ್ಗಾವಣೆಯ ತನ್ನ ಆರೋಪಗಳನ್ನು ಮುಂದಿಡುತ್ತಲೇ ಇತ್ತು.

ಈ ಪ್ರಕರಣವನ್ನು ಇಡಿ ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಜಾಧವ್ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ವಂಚನೆಯ ಯಾವುದೇ ಅಂಶಗಳು ಕಂಡುಬಂದಿಲ್ಲ ಮತ್ತು ಮುಂಬೈನಲ್ಲಿ ಅಭಿವೃದ್ಧಿ ಯೋಜನೆಗಳು ಸಾಮಾನ್ಯವಾಗಿ ಹೇಗೆ ನಡೆಯುತ್ತವೆಯೋ ಅದಕ್ಕೆ ಅನುಗುಣವಾಗಿ ಡೆವಲಪರ್ ವರ್ತಿಸಿದ್ದಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇಡಿಯ ಅಸ್ಪಷ್ಟ ಮತ್ತು ಆಧಾರರಹಿತ ಆರೋಪಗಳ ವಿರುದ್ದ ಕಿಡಿಕಾರಿ ದಂಡ ವಿಧಿಸಿದ್ದಾರೆ.

ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...