Homeಮುಖಪುಟಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

ಇಡಿಗೆ ದಂಡ ವಿಧಿಸಿದ ಬಾಂಬೆ ಹೈಕೋರ್ಟ್ : ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ

- Advertisement -
- Advertisement -

ಡೆವಲಪರ್ ಮತ್ತು ಅವರ ವ್ಯವಹಾರದ ಅಕ್ರಮ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ದುರುದ್ದೇಶಪೂರಿತ ಕ್ರಮ’ಕ್ಕಾಗಿ ಬಾಂಬೆ ಹೈಕೋರ್ಟ್ ಮಂಗಳವಾರ (ಜ.22) ಜಾರಿ ನಿರ್ದೇಶನಾಲಯಕ್ಕೆ (ಇಡಿ) 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಇಡಿ ಪ್ರಕರಣವನ್ನು ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರು ತೀವ್ರ ಅಸಮ್ಮತಿ ವ್ಯಕ್ತಪಡಿಸಿದ್ದು, ಇಡಿಯಂತಹ ಸಂಸ್ಥೆಗಳು ಕಾನೂನಿನ ಮಿತಿಯೊಳಗೆ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ನಾಗರಿಕರಿಗೆ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅನಗತ್ಯ ದಬ್ಬಾಳಿಕೆಯನ್ನು ತಪ್ಪಿಸಲು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸುವಂತೆ ಸೂಚಿಸಿದ್ದಾರೆ.

ಆಗಸ್ಟ್ 2024ರಲ್ಲಿ ಮುಂಬೈ ಮೂಲದ ಡೆವಲಪರ್ ವಿರುದ್ಧ ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೊರಡಿಸಲಾದ ಆದೇಶವನ್ನು ರದ್ದುಗೊಳಿಸುವಾಗ ನ್ಯಾಯಾಲಯವು ಈ ಅವಲೋಕನಗಳನ್ನು ಮಾಡಿದೆ.

2007ರಲ್ಲಿ ದೂರುದಾರರು ಮುಂಬೈನ ಉನ್ನತ ಮಟ್ಟದ ಯೋಜನೆಯಲ್ಲಿ ವಾಣಿಜ್ಯ ಆಸ್ತಿಯನ್ನು ಖರೀದಿಸಲು ಮತ್ತು ಅದನ್ನು ವಸತಿ ಹೋಟೆಲ್/ಅತಿಥಿ ಗೃಹವಾಗಿ ಪರಿವರ್ತಿಸಲು ನವೀಕರಣ ಕಾರ್ಯಕ್ಕಾಗಿ ಡೆವಲಪರ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಾಗ ಪ್ರಕರಣ ಪ್ರಾರಂಭವಾಯಿತು.

ದೂರುದಾರರು ಆಸ್ತಿ ಮತ್ತು ನವೀಕರಣ ಕಾರ್ಯ ಎರಡಕ್ಕೂ ಸೇರಿ ಡೆವಲಪರ್‌ಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಾವತಿಸಿದ್ದರು. ಆದರೆ, ಆಕ್ಯುಪೆನ್ಸಿ ಪ್ರಮಾಣಪತ್ರ (OC)ಪಡೆಯುವಲ್ಲಿನ ಭಾರೀ ವಿಳಂಬವು ಅವರಿಗೆ ನಿರಾಶೆ ಉಂಟು ಮಾಡಿತ್ತು.

ಈ ಸಂಬಂಧ ಅವರು ನೀಡಿದ್ದ ಆರಂಭಿಕ ದೂರುಗಳನ್ನು ಪೊಲೀಸರು ತಿರಸ್ಕರಿದ್ದರು. ಯಾವುದೇ ಗುರುತಿಸಬಹುದಾದ ಅಪರಾಧವಿಲ್ಲ. ಅಲ್ಲದೆ ಇದು ಸಿವಿಲ್ ಸ್ವರೂಪದ ಪ್ರಕರಣವಾಗಿದೆ ಎಂದಿದ್ದರು.

ತನ್ನ ಮೊದಲ ದೂರು ತಿರಸ್ಕೃತಗೊಂಡ ಬಳಿಕ, ಜೂನ್ 2009 ರಲ್ಲಿ ದೂರುದಾರರು ಮಲಾಡ್ ಪೊಲೀಸ್ ಠಾಣೆಗೆ ಎರಡನೇ ದೂರು ನೀಡಿದ್ದರು. ಆದರೆ, ಮತ್ತೊಮ್ಮೆ ದೂರು ತಿರಸ್ಕೃತಗೊಂಡಿತ್ತು. ಈ ಪ್ರಕರಣ ಸಿವಿಲ್ ಸ್ವರೂಪದ್ದಾಗಿದೆ ಎಂದು ಪೊಲೀಸರು ಎರಡನೇ ಬಾರಿಯೂ ಹೇಳಿದ್ದರು.

ನಂತರ ಡಿಸೆಂಬರ್ 2009ರಲ್ಲಿ ದೂರುದಾರರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದ ನಂತರ ವಿಲೇ ಪಾರ್ಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಈ ಪ್ರಕರಣವು ನಂತರ ಇಡಿಯ ಗಮನ ಸೆಳೆದಿತ್ತು. ಡೆವಲಪರ್ ಹಣ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿತ್ತು.

ಡೆವಲಪರ್‌ಗೆ ಸಂಬಂಧಿತ ಕಂಪನಿಗಳಲ್ಲಿ ಒಂದರಿಂದ ಪಡೆದ ಹಣ ಒಟ್ಟು 4.27 ಕೋಟಿ ರೂಪಾಯಿ ಅಕ್ರಮ ಆದಾಯವಾಗಿದ್ದು, ನವೀಕರಣ ಒಪ್ಪಂದಕ್ಕೆ ಸಂಬಂಧಿಸಿದ ವಂಚನೆ ಚಟುವಟಿಕೆಗಳು ಮತ್ತು ಇದಕ್ಕೆ ಸಂಬಂಧವಿದೆ ಎಂದು ಇಡಿ ಆರೋಪಿಸಿತ್ತು.

ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, ಡೆವಲಪರ್ ಪರ ವಕೀಲರು ಈ ಪ್ರಕರಣದ ಹಿಂದೆ ಯಾವುದೇ ಕ್ರಿಮಿನಲ್ ಉದ್ದೇಶವಿಲ್ಲ. ಇದೊಂದು ಸಿವಿಲ್ ವಿವಾದ ಎಂದಿದ್ದರು. ಡೆವಲಪರ್ ಯಾವುದೇ ತಪ್ಪು ಮಾಡಿಲ್ಲ ಎಂದು ಪೊಲೀಸರು ಈಗಾಗಲೇ ಹೇಳಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಆದರೂ,ಇಡಿ ಹಣ ವರ್ಗಾವಣೆಯ ತನ್ನ ಆರೋಪಗಳನ್ನು ಮುಂದಿಡುತ್ತಲೇ ಇತ್ತು.

ಈ ಪ್ರಕರಣವನ್ನು ಇಡಿ ನಿರ್ವಹಿಸಿದ ರೀತಿಗೆ ನ್ಯಾಯಮೂರ್ತಿ ಜಾಧವ್ ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ವಂಚನೆಯ ಯಾವುದೇ ಅಂಶಗಳು ಕಂಡುಬಂದಿಲ್ಲ ಮತ್ತು ಮುಂಬೈನಲ್ಲಿ ಅಭಿವೃದ್ಧಿ ಯೋಜನೆಗಳು ಸಾಮಾನ್ಯವಾಗಿ ಹೇಗೆ ನಡೆಯುತ್ತವೆಯೋ ಅದಕ್ಕೆ ಅನುಗುಣವಾಗಿ ಡೆವಲಪರ್ ವರ್ತಿಸಿದ್ದಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇಡಿಯ ಅಸ್ಪಷ್ಟ ಮತ್ತು ಆಧಾರರಹಿತ ಆರೋಪಗಳ ವಿರುದ್ದ ಕಿಡಿಕಾರಿ ದಂಡ ವಿಧಿಸಿದ್ದಾರೆ.

ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...