Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...