Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...