Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...