Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...