Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...