Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...