Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...