Homeಮುಖಪುಟ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

- Advertisement -
- Advertisement -

ಬಿಹಾರ್‌ದಿಂದ ಬಂದು ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್‌ಗಳ ‘ಆಶೀರ್ವಾದ’ವಿಲ್ಲದೇ, ಸ್ವ-ಪ್ರತಿಭೆಯಿಂದ ಗಮನ ಸೆಳೆದ ಸುಶಾಂತ್ ಸಿಂಗ್ ಸಾವಿನ ಕುರಿತ ಅನುಮಾನ-ಸಂದೇಹಗಳು ಸಂಪೂರ್ಣ ತನಿಖೆ ಮತ್ತು ಅಂತಿಮ ತೀರ್ಪಿನ ನಂತರವಷ್ಟೇ ಗೊತ್ತಾಗಲಿವೆ. ಆದರೆ ಬಾಂಬೆ ಹೈಕೋರ್ಟ್ ‘ಮುಖ ನೋಡಿದರೆ ಆತ ಮುಗ್ಧ’ ಎಂದು ಹೇಳಿದ್ದು ವಿಚಿತ್ರ ಅಲ್ಲವೇ?

ಗುರುವಾರ ಬಾಂಬೆ ಹೈಕೋರ್ಟ್, ‘ಎಂ.ಎಸ್ ಧೋನಿ: ಆ್ಯನ್ ಅನ್‌ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿನ ಸುಶಾಂತ್‌ಸಿಂಗ್ ಅಭಿನಯವನ್ನು ಹೊಗಳಿದೆಯಲ್ಲದೇ, ನಟನ ಮುಖ, ಮುಖಭಾವದಿಂದ ಆತ ಒಳ್ಳೆಯ ಮನುಷ್ಯನಾಗಿದ್ದ, ಯಾವುದೇ ವ್ಯಸನವಿರದ ವ್ಯಕ್ತಿಯಾಗಿದ್ದ ಎಂಬುದು ಗೊತ್ತಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

ಇಂತಹ ಅಭಿಪ್ರಾಯಗಳಿಗೆ ನ್ಯಾಯ ವ್ಯವಸ್ಥೆಯಲ್ಲಿ ಮಾನ್ಯತೆಯಿದೆಯೇ ಎಂಬ ಬಗ್ಗೆ ನಮ್ಮಂತಹ ಜನಸಾಮಾನ್ಯರಿಗೆ ಗೊತ್ತಿಲ್ಲ. ಮುಖ ಬಿಡಿ, ಅವರ ಜನಪರ ಕಾಳಜಿ, ಸೇವೆ ಪರಿಗಣಿಸಿದ್ದರೆ ಇವತ್ತು ಎಲ್ಗಾರ್ ಸಮಾವೇಶದಲ್ಲಿ ‘ಅಸಂಭವನೀಯ ಆರೋಪಗಳ’ ಅಡಿಯಲ್ಲಿ ಬಂಧಿತರಾದ ಚಿಂತಕರು, ಹೋರಾಟಗಾರರಿಗೆ ಕನಿಷ್ಟ ಜಾಮೀನಾದರೂ ಸಿಗಬೇಕಿತ್ತು ಅಲ್ಲವೆ?

ಈಗ ಗುರುವಾರದ ಕೋರ್ಟ್ ವಿಚಾರಣೆಗೆ ಮತ್ತೆ ಬರೋಣ. ಸುಶಾಂತ್‌ಸಿಂಗ್ ಅವರ ಸಹೋದರಿಯರಾದ ಪ್ರಿಯಾಂಕಾ ಸಿಂಗ್ ಮತ್ತು ಮೀತು ಸಿಂಗ್ ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ತೀರ್ಪನ್ನು ಕಾಯ್ದಿರಿಸುವ ಮುನ್ನ ಎಸ್. ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ನಿಕ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಹೊರ ಹಾಕಿದೆ. ‘ತಮ್ಮ ಸಹೋದರನಿಗಾಗಿ ತಾವು ಮೆಡಿಕಲ್ ಪ್ರಿಸ್ಕಿಪ್ಸನ್ ತಿದ್ದಿದ ಮತ್ತು ಫೋರ್ಜರಿ ಮಾಡಿದ ಆರೋಪವನ್ನು ನಮ್ಮ ಮೇಲೆ ಹೊರಿಸುವ ಎಫ್‌ಐಆರ್ ವಜಾ ಮಾಡಬೇಕು’ ಎಂದು ಸಲ್ಲಿಸಿದ್ದ ಪಿಟಿಷನ್ ವಿಚಾರಣೆಯ ವೇಳೆ ಪೀಠ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಬರಹದ ಉದ್ದೇಶ ಗುರುವಾರ ನ್ಯಾಯಾಲಯದಲ್ಲಿ ನಡೆದ ಬೆಳವಣಿಗಗಳನ್ನು ವರದಿ ಮಾಡುವುದಲ್ಲ. ಬದಲಿಗೆ ‘ಮುಖ ನೋಡಿ ಮೊಳ ಹಾಕುವ’ ಸಂಪ್ರದಾಯ ಇದು ಹೊಸದೋ ಅಥವಾ ಮೊದಲಿನಿಂದಲೂ ಇದೆಯೋ?

ಬಿಹಾರ್ ಚುನಾವಣೆಯಲ್ಲೂ ನಟನ ಸಾವಿನ ದುರಂತವನ್ನು ಬಳಸಿಕೊಳ್ಳಲಾಯಿತು. ವ್ಯಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಮಾಧ್ಯಮಗಳು ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯೇ ‘ಕೊಲೆಗಾರ್ತಿ’ ಎಂದು ಅಂದೇ ತೀರ್ಪು ಕೊಟ್ಟುಬಿಟ್ಟಿದ್ದವು. ಈ ಪ್ರಕರಣಕ್ಕೆ ಡ್ರಗ್ಸ್ ಆಯಾಮವೂ ಸೇರಿಕೊಂಡಿತು. ಅದರ ತನಿಖೆಯೂ ಈಗ ಸ್ಥಗಿತವಾಗಿದೆ.

‘ಆತನ ಮುಖ ನೋಡಿದರೆ, ಅದರಲ್ಲೂ ಧೋನಿ ಕುರಿತಾದ ಸಿನಿಮಾದಲ್ಲಿ ಆತನ ಮುಖ ನೋಡಿದರೆ ಆತ ಮುಗ್ಧ ಮತ್ತು ವ್ಯಸನಿಯಲ್ಲ ಎಂಬುದು ಗೊತ್ತಾಗುತ್ತದೆ ಎಂಬ ಹೇಳಿಕೆ ಒಂಥರಾ ‘ಸಿನಿಮೀಯ ಡೈಲಾಗ್’ ಅನಿಸುತ್ತಿದೆ ಅಲ್ಲವೇ?

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...