Homeಮುಖಪುಟಇಡಬ್ಲ್ಯೂಎಸ್‌ ಅಡಿ ಆಯ್ಕೆಯಾದ 111 ಮರಾಠ ಅಭ್ಯರ್ಥಿಗಳ ನೇಮಕಾತಿಗೆ ಬಾಂಬೆ ಹೈಕೋರ್ಟ್ ತಡೆ

ಇಡಬ್ಲ್ಯೂಎಸ್‌ ಅಡಿ ಆಯ್ಕೆಯಾದ 111 ಮರಾಠ ಅಭ್ಯರ್ಥಿಗಳ ನೇಮಕಾತಿಗೆ ಬಾಂಬೆ ಹೈಕೋರ್ಟ್ ತಡೆ

- Advertisement -
- Advertisement -

ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಡಿಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಎಂಜಿನಿಯರಿಂಗ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ ಮರಾಠ ಸಮುದಾಯದ 111 ಅಭ್ಯರ್ಥಿಗಳ ನೇಮಕಾತಿಗೆ ಬಾಂಬೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.

‘ಮಹಾರಾಷ್ಟ್ರ ರಾಜ್ಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಾಯಿದೆ, 2018’ರ ಅಡಿಯಲ್ಲಿ ನೀಡಲಾದ ಮರಾಠಾ ಮೀಸಲಾತಿಯ ನಿಬಂಧನೆಗಳನ್ನು ಕಳೆದ ವರ್ಷ ಮೇನಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದಾದ ನಂತರ ಖಾಲಿ ಹುದ್ದೆಗಳನ್ನು ಇಡಬ್ಲ್ಯೂಎಸ್‌‌ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಸೇರಿಸಲಾಯಿತು. 1992ರ ಇಂದ್ರ ಸಾಹ್ನಿ ಮಹತ್ವದ ತೀರ್ಪಿನಲ್ಲಿ ವಿಧಿಸಲಾದ 50% ಕೋಟಾ ಮಿತಿಯನ್ನು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಚರ್ಚಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಮಹಾರಾಷ್ಟ್ರ ಸರ್ಕಾರವು 2018ರ ಕಾನೂನಿನ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಮರಾಠ ಸಮುದಾಯದ 111 ಅಭ್ಯರ್ಥಿಗಳಿಗೆ ಇಡಬ್ಲ್ಯೂಎಸ್‌ ಕೋಟಾವನ್ನು ವಿಸ್ತರಿಸಿದೆ.

ಮಹಾರಾಷ್ಟ್ರ ಲೋಕಸೇವಾ ಆಯೋಗವು ಒಟ್ಟು 1,143 ಅಭ್ಯರ್ಥಿಗಳನ್ನು ಆಯ್ಕೆ ಮಾಡಿತ್ತು. ಗುರುವಾರದ ತನ್ನ ಆದೇಶದಲ್ಲಿ 111 ಮರಾಠಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಇತರ ಎಲ್ಲ ಅಭ್ಯರ್ಥಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ನವೆಂಬರ್ 29ರಂದು, ಮಹಾರಾಷ್ಟ್ರ ಆಡಳಿತಾತ್ಮಕ ನ್ಯಾಯಮಂಡಳಿಯು 111 ಅಭ್ಯರ್ಥಿಗಳಿಗೆ ಮಧ್ಯಂತರ ಪರಿಹಾರವನ್ನು ನೀಡಿತು. ರಾಜ್ಯ ಸರ್ಕಾರವು ನೇಮಕಾತಿಗಳನ್ನು ಮಾಡಬಹುದು, ಆದರೆ ಅಭ್ಯರ್ಥಿಗಳು ಪ್ರಕರಣದ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತಾರೆ ಎಂದು ಹೇಳಿತು. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

“ನೇಮಕಾತಿಗಳನ್ನು ಮಾಡಿದರೆ ತೊಡಕುಗಳು ಉದ್ಭವಿಸುತ್ತವೆ” ಎಂದು ಹೈಕೋರ್ಟ್ ಗುರುವಾರ ಹೇಳಿದೆ.

“ನಾವು ಸಾಮಾನ್ಯವಾಗಿ ನ್ಯಾಯಮಂಡಳಿಗಳ ವ್ಯವಹಾರದಲ್ಲಿ ಅದರ ಮುಂದೆ ಬಾಕಿ ಇರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸುವುದನ್ನು ತಡೆಯುತ್ತೇವೆ, ಆದರೆ ಅದರ ಮುಂದಿರುವ ಸಮಸ್ಯೆಗಳ ಪ್ರಾಮುಖ್ಯತೆಯನ್ನು ಪರಿಗಣಿಸಿ, 2023ರ ಜನವರಿ ಅಂತ್ಯದ ಮೊದಲು ಅರ್ಜಿಯನ್ನು ಪರಿಗಣಿಸಲು ನಾವು ನ್ಯಾಯಮಂಡಳಿಯನ್ನು ಒತ್ತಾಯಿಸುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಅಭಯ್ ಅಹುಜಾ ಅವರ ಪೀಠ ಹೇಳಿದೆ.

ಇದನ್ನೂ ಓದಿರಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

111 ಅಭ್ಯರ್ಥಿಗಳ ಪರವಾಗಿ ನ್ಯಾಯಮಂಡಳಿ ತೀರ್ಪು ನೀಡಿದರೆ, ಅಭ್ಯರ್ಥಿಗಳ ಹಿರಿತನವನ್ನು ಡಿಸೆಂಬರ್ 1ರ ನೇಮಕಾತಿ ದಿನಾಂಕದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಇಡಬ್ಲೂಎಸ್‌ ವರ್ಗಕ್ಕೆ ಸೇರಿದ ಎ.ಎಂ.ಹಾವಶೆಟ್ಟೆ ಎಂಬ ವ್ಯಕ್ತಿ ಮತ್ತು ಇತರ ಇಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಇಡಬ್ಲ್ಯೂಎಸ್‌ಗೆ ಬದಲಾಯಿಸಲು ರಾಜ್ಯವು ಅವಕಾಶ ನೀಡುತ್ತಿರುವುದರಿಂದ ಅವರ ನೇಮಕಾತಿಯು ಪೂರ್ವಾಗ್ರಹ ಪೀಡಿತವಾಗಿದೆ ಎಂದು ಅರ್ಜಿದಾರರು ಹೈಕೋರ್ಟ್‌ಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...