Homeಕರೋನಾ ತಲ್ಲಣಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ `ಮನೆ ಬಾಗಿಲಿಗೆ ಲಸಿಕೆ' ಕಾರ್ಯಕ್ರಮವನ್ನು ನೋಡಿ ಎಂದು ಅದು ಹೇಳಿದೆ

- Advertisement -
- Advertisement -

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ಮನೆ ಬಾಗಿಲಿಗೆ ಲಸಿಕೆ ಕಾರ್ಯಕ್ರಮವನ್ನು ನೋಡಿ ಮತ್ತು ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಪ್ರಸ್ತುತ ನೀತಿಯ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಿ ಎಂದು ಬಾಂಬೆ ಹೈಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಹೇಳಿದೆ.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ರಾಜ್ಯಗಳು ಈಗಾಗಲೇ ಇಂತಹ ಪ್ರಕ್ರಿಯೆಗಳನ್ನು ನಡೆಸುತ್ತಿರುವಾಗ ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂಬುದನ್ನು ಅರ್ಥವಾಗುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರ ವಿಭಾಗೀಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ, ಗಾಲಿಕುರ್ಚಿ ಅಥವಾ ಹಾಸಿಗೆ ಹಿಡಿದಿರುವ ವ್ಯಕ್ತಿಗಳ ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವಂತೆ ಕೋರಿ ವಕೀಲರಾದ ಧ್ರುತಿ ಕಪಾಡಿಯಾ ಮತ್ತು ಕುನಾಲ್ ತಿವಾರಿ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಲಸಿಕೆಯನ್ನು ನೀಡುತ್ತಿರುವಾಗ ಒಕ್ಕೂಟ ಸರ್ಕಾರ ಮಾತ್ರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತದೆ ಎಂದು ನ್ಯಾಯಾಲಯ ಕೇಳಿದೆ.

“ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಚುಚ್ಚುಮದ್ದನ್ನು ಯಶಸ್ವಿಯಾಗಿ ನೀಡುತ್ತಿರುವುದು ಹೇಗೆ? ಕೇರಳ ಮತ್ತು ಜಮ್ಮು ಕಾಶ್ಮೀರ ಮಾದರಿಯ ಬಗ್ಗೆ ಕೇಂದ್ರದ ಅಭಿಪ್ರಾಯವೇನು?” ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

“ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂದು ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ಈ ರಾಜ್ಯಗಳೊಂದಿಗೆ ಏಕೆ ಸಂವಹನ ನಡೆಸಬಾರದು. ಇದೇ ರೀತಿ ಲಸಿಕೆ ನೀಡಲು ನೀವು ಇತರ ರಾಜ್ಯಗಳಿಗೂ ಮನವಿ ಮಾಡಿದರೆ, ಅಲ್ಲಿ ಕೂಡ ಹಾಗೆಯೆ ಮಾಡಬಹುದು” ಎಂದು ನ್ಯಾಯಾಲಯ ಹೇಳಿದ್ದು, ಒಕ್ಕೂಟ ಸರ್ಕಾರಕ್ಕೆ “ಉತ್ತಮ ನಿರ್ಧಾರ” ತೆಗೆದುಕೊಳ್ಳಲು ಕೇಳಿದೆ.

ಸಾಂಕ್ರಾಮಿಕ ಸಮಯದಲ್ಲಿ ಮುಂಬೈ ಕಾರ್ಪೋರೇಷನ್‌‌(BMC) ಉತ್ತಮ ಕೆಲಸ ಮಾಡಲಾಗುತ್ತಿರುವುದು ತುಂಬಾ ಖುಷಿಕೊಟ್ಟಿದೆ ಎಂದು ನ್ಯಾಯಾಲಯ ಹೇಳಿದ್ದು, ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು BMC ಯಾಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ BMC ಸಲಹೆಗಾರರಾದ ಸಖ್ರೆ ಅವರು, BMC ಆಯುಕ್ತ ಇಕ್ಬಾಲ್ ಚಾಹಲ್ ಅವರು ಕೇಂದ್ರಕ್ಕೆ ಬರೆದ ಪತ್ರದ ಬಗ್ಗೆ ಗಮನಸೆಳೆದು, “BMC ಮನೆ ಬಾಗಿಲಿಗೆ ಲಸಿಕೆ ನೀಡಲು ಸಿದ್ಧವಿದೆ. ಇದಕ್ಕಾಗಿ ಮಾರ್ಗಸೂಚಿಗಳನ್ನು ನೀಡುವಂತೆ ಒಕ್ಕೂಟ ಸರ್ಕಾರವನ್ನು ಕೋರಿದೆ” ಎಂದು ಹೇಳಿದ್ದಾರೆ.

ಈ ಪತ್ರದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಕಾರ್ಯದರ್ಶಿಯ ಸೂಚನೆಗಳನ್ನು ತೆಗೆದುಕೊಳ್ಳುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣದಿಂದ ತೆರಿಗೆ ಸಂಗ್ರಹ ಹೆಚ್ಚಳ- ನಿರ್ಮಲ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...