Homeಕರೋನಾ ತಲ್ಲಣಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ `ಮನೆ ಬಾಗಿಲಿಗೆ ಲಸಿಕೆ' ಕಾರ್ಯಕ್ರಮವನ್ನು ನೋಡಿ ಎಂದು ಅದು ಹೇಳಿದೆ

- Advertisement -
- Advertisement -

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ಮನೆ ಬಾಗಿಲಿಗೆ ಲಸಿಕೆ ಕಾರ್ಯಕ್ರಮವನ್ನು ನೋಡಿ ಮತ್ತು ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಪ್ರಸ್ತುತ ನೀತಿಯ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಿ ಎಂದು ಬಾಂಬೆ ಹೈಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಹೇಳಿದೆ.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ರಾಜ್ಯಗಳು ಈಗಾಗಲೇ ಇಂತಹ ಪ್ರಕ್ರಿಯೆಗಳನ್ನು ನಡೆಸುತ್ತಿರುವಾಗ ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂಬುದನ್ನು ಅರ್ಥವಾಗುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರ ವಿಭಾಗೀಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ, ಗಾಲಿಕುರ್ಚಿ ಅಥವಾ ಹಾಸಿಗೆ ಹಿಡಿದಿರುವ ವ್ಯಕ್ತಿಗಳ ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವಂತೆ ಕೋರಿ ವಕೀಲರಾದ ಧ್ರುತಿ ಕಪಾಡಿಯಾ ಮತ್ತು ಕುನಾಲ್ ತಿವಾರಿ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಲಸಿಕೆಯನ್ನು ನೀಡುತ್ತಿರುವಾಗ ಒಕ್ಕೂಟ ಸರ್ಕಾರ ಮಾತ್ರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತದೆ ಎಂದು ನ್ಯಾಯಾಲಯ ಕೇಳಿದೆ.

“ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಚುಚ್ಚುಮದ್ದನ್ನು ಯಶಸ್ವಿಯಾಗಿ ನೀಡುತ್ತಿರುವುದು ಹೇಗೆ? ಕೇರಳ ಮತ್ತು ಜಮ್ಮು ಕಾಶ್ಮೀರ ಮಾದರಿಯ ಬಗ್ಗೆ ಕೇಂದ್ರದ ಅಭಿಪ್ರಾಯವೇನು?” ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

“ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂದು ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ಈ ರಾಜ್ಯಗಳೊಂದಿಗೆ ಏಕೆ ಸಂವಹನ ನಡೆಸಬಾರದು. ಇದೇ ರೀತಿ ಲಸಿಕೆ ನೀಡಲು ನೀವು ಇತರ ರಾಜ್ಯಗಳಿಗೂ ಮನವಿ ಮಾಡಿದರೆ, ಅಲ್ಲಿ ಕೂಡ ಹಾಗೆಯೆ ಮಾಡಬಹುದು” ಎಂದು ನ್ಯಾಯಾಲಯ ಹೇಳಿದ್ದು, ಒಕ್ಕೂಟ ಸರ್ಕಾರಕ್ಕೆ “ಉತ್ತಮ ನಿರ್ಧಾರ” ತೆಗೆದುಕೊಳ್ಳಲು ಕೇಳಿದೆ.

ಸಾಂಕ್ರಾಮಿಕ ಸಮಯದಲ್ಲಿ ಮುಂಬೈ ಕಾರ್ಪೋರೇಷನ್‌‌(BMC) ಉತ್ತಮ ಕೆಲಸ ಮಾಡಲಾಗುತ್ತಿರುವುದು ತುಂಬಾ ಖುಷಿಕೊಟ್ಟಿದೆ ಎಂದು ನ್ಯಾಯಾಲಯ ಹೇಳಿದ್ದು, ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು BMC ಯಾಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ BMC ಸಲಹೆಗಾರರಾದ ಸಖ್ರೆ ಅವರು, BMC ಆಯುಕ್ತ ಇಕ್ಬಾಲ್ ಚಾಹಲ್ ಅವರು ಕೇಂದ್ರಕ್ಕೆ ಬರೆದ ಪತ್ರದ ಬಗ್ಗೆ ಗಮನಸೆಳೆದು, “BMC ಮನೆ ಬಾಗಿಲಿಗೆ ಲಸಿಕೆ ನೀಡಲು ಸಿದ್ಧವಿದೆ. ಇದಕ್ಕಾಗಿ ಮಾರ್ಗಸೂಚಿಗಳನ್ನು ನೀಡುವಂತೆ ಒಕ್ಕೂಟ ಸರ್ಕಾರವನ್ನು ಕೋರಿದೆ” ಎಂದು ಹೇಳಿದ್ದಾರೆ.

ಈ ಪತ್ರದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಕಾರ್ಯದರ್ಶಿಯ ಸೂಚನೆಗಳನ್ನು ತೆಗೆದುಕೊಳ್ಳುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣದಿಂದ ತೆರಿಗೆ ಸಂಗ್ರಹ ಹೆಚ್ಚಳ- ನಿರ್ಮಲ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...