Homeಕರೋನಾ ತಲ್ಲಣಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ `ಮನೆ ಬಾಗಿಲಿಗೆ ಲಸಿಕೆ' ಕಾರ್ಯಕ್ರಮವನ್ನು ನೋಡಿ ಎಂದು ಅದು ಹೇಳಿದೆ

- Advertisement -
- Advertisement -

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ಮನೆ ಬಾಗಿಲಿಗೆ ಲಸಿಕೆ ಕಾರ್ಯಕ್ರಮವನ್ನು ನೋಡಿ ಮತ್ತು ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಪ್ರಸ್ತುತ ನೀತಿಯ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಿ ಎಂದು ಬಾಂಬೆ ಹೈಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಹೇಳಿದೆ.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ರಾಜ್ಯಗಳು ಈಗಾಗಲೇ ಇಂತಹ ಪ್ರಕ್ರಿಯೆಗಳನ್ನು ನಡೆಸುತ್ತಿರುವಾಗ ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂಬುದನ್ನು ಅರ್ಥವಾಗುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರ ವಿಭಾಗೀಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ, ಗಾಲಿಕುರ್ಚಿ ಅಥವಾ ಹಾಸಿಗೆ ಹಿಡಿದಿರುವ ವ್ಯಕ್ತಿಗಳ ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವಂತೆ ಕೋರಿ ವಕೀಲರಾದ ಧ್ರುತಿ ಕಪಾಡಿಯಾ ಮತ್ತು ಕುನಾಲ್ ತಿವಾರಿ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಲಸಿಕೆಯನ್ನು ನೀಡುತ್ತಿರುವಾಗ ಒಕ್ಕೂಟ ಸರ್ಕಾರ ಮಾತ್ರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತದೆ ಎಂದು ನ್ಯಾಯಾಲಯ ಕೇಳಿದೆ.

“ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಚುಚ್ಚುಮದ್ದನ್ನು ಯಶಸ್ವಿಯಾಗಿ ನೀಡುತ್ತಿರುವುದು ಹೇಗೆ? ಕೇರಳ ಮತ್ತು ಜಮ್ಮು ಕಾಶ್ಮೀರ ಮಾದರಿಯ ಬಗ್ಗೆ ಕೇಂದ್ರದ ಅಭಿಪ್ರಾಯವೇನು?” ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

“ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂದು ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ಈ ರಾಜ್ಯಗಳೊಂದಿಗೆ ಏಕೆ ಸಂವಹನ ನಡೆಸಬಾರದು. ಇದೇ ರೀತಿ ಲಸಿಕೆ ನೀಡಲು ನೀವು ಇತರ ರಾಜ್ಯಗಳಿಗೂ ಮನವಿ ಮಾಡಿದರೆ, ಅಲ್ಲಿ ಕೂಡ ಹಾಗೆಯೆ ಮಾಡಬಹುದು” ಎಂದು ನ್ಯಾಯಾಲಯ ಹೇಳಿದ್ದು, ಒಕ್ಕೂಟ ಸರ್ಕಾರಕ್ಕೆ “ಉತ್ತಮ ನಿರ್ಧಾರ” ತೆಗೆದುಕೊಳ್ಳಲು ಕೇಳಿದೆ.

ಸಾಂಕ್ರಾಮಿಕ ಸಮಯದಲ್ಲಿ ಮುಂಬೈ ಕಾರ್ಪೋರೇಷನ್‌‌(BMC) ಉತ್ತಮ ಕೆಲಸ ಮಾಡಲಾಗುತ್ತಿರುವುದು ತುಂಬಾ ಖುಷಿಕೊಟ್ಟಿದೆ ಎಂದು ನ್ಯಾಯಾಲಯ ಹೇಳಿದ್ದು, ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು BMC ಯಾಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ BMC ಸಲಹೆಗಾರರಾದ ಸಖ್ರೆ ಅವರು, BMC ಆಯುಕ್ತ ಇಕ್ಬಾಲ್ ಚಾಹಲ್ ಅವರು ಕೇಂದ್ರಕ್ಕೆ ಬರೆದ ಪತ್ರದ ಬಗ್ಗೆ ಗಮನಸೆಳೆದು, “BMC ಮನೆ ಬಾಗಿಲಿಗೆ ಲಸಿಕೆ ನೀಡಲು ಸಿದ್ಧವಿದೆ. ಇದಕ್ಕಾಗಿ ಮಾರ್ಗಸೂಚಿಗಳನ್ನು ನೀಡುವಂತೆ ಒಕ್ಕೂಟ ಸರ್ಕಾರವನ್ನು ಕೋರಿದೆ” ಎಂದು ಹೇಳಿದ್ದಾರೆ.

ಈ ಪತ್ರದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಕಾರ್ಯದರ್ಶಿಯ ಸೂಚನೆಗಳನ್ನು ತೆಗೆದುಕೊಳ್ಳುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣದಿಂದ ತೆರಿಗೆ ಸಂಗ್ರಹ ಹೆಚ್ಚಳ- ನಿರ್ಮಲ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...