Homeಕರೋನಾ ತಲ್ಲಣಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಮನೆ ಬಾಗಿಲಿಗೆ ತೆರಳಿ ವ್ಯಾಕ್ಸಿನ್‌‌ ನೀಡಲು ನಿಮಗೇನು ಕಷ್ಟ?: ಒಕ್ಕೂಟ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ `ಮನೆ ಬಾಗಿಲಿಗೆ ಲಸಿಕೆ' ಕಾರ್ಯಕ್ರಮವನ್ನು ನೋಡಿ ಎಂದು ಅದು ಹೇಳಿದೆ

- Advertisement -
- Advertisement -

ಕೇರಳ ಮತ್ತು ಜಮ್ಮು ಕಾಶ್ಮೀರದಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ಮನೆ ಬಾಗಿಲಿಗೆ ಲಸಿಕೆ ಕಾರ್ಯಕ್ರಮವನ್ನು ನೋಡಿ ಮತ್ತು ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಪ್ರಸ್ತುತ ನೀತಿಯ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಿ ಎಂದು ಬಾಂಬೆ ಹೈಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಹೇಳಿದೆ.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ರಾಜ್ಯಗಳು ಈಗಾಗಲೇ ಇಂತಹ ಪ್ರಕ್ರಿಯೆಗಳನ್ನು ನಡೆಸುತ್ತಿರುವಾಗ ಮನೆ ಬಾಗಿಲಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಳುವ ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂಬುದನ್ನು ಅರ್ಥವಾಗುತ್ತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರ ವಿಭಾಗೀಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ, ಗಾಲಿಕುರ್ಚಿ ಅಥವಾ ಹಾಸಿಗೆ ಹಿಡಿದಿರುವ ವ್ಯಕ್ತಿಗಳ ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವಂತೆ ಕೋರಿ ವಕೀಲರಾದ ಧ್ರುತಿ ಕಪಾಡಿಯಾ ಮತ್ತು ಕುನಾಲ್ ತಿವಾರಿ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಲಸಿಕೆಯನ್ನು ನೀಡುತ್ತಿರುವಾಗ ಒಕ್ಕೂಟ ಸರ್ಕಾರ ಮಾತ್ರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತದೆ ಎಂದು ನ್ಯಾಯಾಲಯ ಕೇಳಿದೆ.

“ಕೇರಳ ಮತ್ತು ಜಮ್ಮು ಕಾಶ್ಮೀರದಂತಹ ಪ್ರತ್ಯೇಕ ರಾಜ್ಯಗಳು ಮನೆ ಬಾಗಿಲಿಗೆ ತೆರಳಿ ಚುಚ್ಚುಮದ್ದನ್ನು ಯಶಸ್ವಿಯಾಗಿ ನೀಡುತ್ತಿರುವುದು ಹೇಗೆ? ಕೇರಳ ಮತ್ತು ಜಮ್ಮು ಕಾಶ್ಮೀರ ಮಾದರಿಯ ಬಗ್ಗೆ ಕೇಂದ್ರದ ಅಭಿಪ್ರಾಯವೇನು?” ನ್ಯಾಯಪೀಠ ಪ್ರಶ್ನಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

“ಒಕ್ಕೂಟ ಸರ್ಕಾರದ ಸಮಸ್ಯೆ ಏನೆಂದು ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀವು ಈ ರಾಜ್ಯಗಳೊಂದಿಗೆ ಏಕೆ ಸಂವಹನ ನಡೆಸಬಾರದು. ಇದೇ ರೀತಿ ಲಸಿಕೆ ನೀಡಲು ನೀವು ಇತರ ರಾಜ್ಯಗಳಿಗೂ ಮನವಿ ಮಾಡಿದರೆ, ಅಲ್ಲಿ ಕೂಡ ಹಾಗೆಯೆ ಮಾಡಬಹುದು” ಎಂದು ನ್ಯಾಯಾಲಯ ಹೇಳಿದ್ದು, ಒಕ್ಕೂಟ ಸರ್ಕಾರಕ್ಕೆ “ಉತ್ತಮ ನಿರ್ಧಾರ” ತೆಗೆದುಕೊಳ್ಳಲು ಕೇಳಿದೆ.

ಸಾಂಕ್ರಾಮಿಕ ಸಮಯದಲ್ಲಿ ಮುಂಬೈ ಕಾರ್ಪೋರೇಷನ್‌‌(BMC) ಉತ್ತಮ ಕೆಲಸ ಮಾಡಲಾಗುತ್ತಿರುವುದು ತುಂಬಾ ಖುಷಿಕೊಟ್ಟಿದೆ ಎಂದು ನ್ಯಾಯಾಲಯ ಹೇಳಿದ್ದು, ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲು BMC ಯಾಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ BMC ಸಲಹೆಗಾರರಾದ ಸಖ್ರೆ ಅವರು, BMC ಆಯುಕ್ತ ಇಕ್ಬಾಲ್ ಚಾಹಲ್ ಅವರು ಕೇಂದ್ರಕ್ಕೆ ಬರೆದ ಪತ್ರದ ಬಗ್ಗೆ ಗಮನಸೆಳೆದು, “BMC ಮನೆ ಬಾಗಿಲಿಗೆ ಲಸಿಕೆ ನೀಡಲು ಸಿದ್ಧವಿದೆ. ಇದಕ್ಕಾಗಿ ಮಾರ್ಗಸೂಚಿಗಳನ್ನು ನೀಡುವಂತೆ ಒಕ್ಕೂಟ ಸರ್ಕಾರವನ್ನು ಕೋರಿದೆ” ಎಂದು ಹೇಳಿದ್ದಾರೆ.

ಈ ಪತ್ರದ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಕಾರ್ಯದರ್ಶಿಯ ಸೂಚನೆಗಳನ್ನು ತೆಗೆದುಕೊಳ್ಳುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣದಿಂದ ತೆರಿಗೆ ಸಂಗ್ರಹ ಹೆಚ್ಚಳ- ನಿರ್ಮಲ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...