Homeಮುಖಪುಟಪತ್ರಕರ್ತೆ ರಾಣಾ ಅಯ್ಯೂಬ್ ಅವರ ಬಂಧನಕ್ಕೆ ಬಾಂಬೆ ಹೈಕೋರ್ಟ್‌ನಿಂದ 4 ವಾರಗಳ ತಡೆ

ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಬಂಧನಕ್ಕೆ ಬಾಂಬೆ ಹೈಕೋರ್ಟ್‌ನಿಂದ 4 ವಾರಗಳ ತಡೆ

- Advertisement -
- Advertisement -

ಗಾಜಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು 4 ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

ಜೂನ್ ಮೊದಲ ವಾರದಲ್ಲಿ ಗಾಝಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವೃದ್ಧರೊಬ್ಬರನ್ನು ಯುವಕರು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ರಾಣಾ ಅಯ್ಯೂಬ್ ಅವರ ವಿರುದ್ಧ FIR ದಾಖಲಾಗಿತ್ತು. FIR ದಾಖಲಾದ ಬೆನ್ನಲ್ಲೇ ರಾಣಾ ಅಯ್ಯೂಬ್ ತಮ್ಮ ಬಂಧನಕ್ಕೆ ತಡೆಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.

ಜಸ್ಟಿಸ್ ಪ್ರಕಾಶ್ ಡಿ. ನಾಯ್ಕ್‌ ಅವರನ್ನೊಳಗೊಂಡ ಬಾಂಬೆ ಹೈಕೋರ್ಟ್ ನ ಏಕ ಸದಸ್ಯ ಪೀಠ ರಾಣಾ ಅಯ್ಯೂಬ್ ಅವರ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿತು. ಅಯ್ಯೂಬ್ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೂಕ್ತ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದೆ.

ರಾಣಾ ಅಯ್ಯೂಬ್, ದಿ ವೈರ್, ಮೊಹಮ್ಮದ್ ಜುಬೇರ್, ಸಬಾ ನಕ್ವಿ ಸೇರಿದಂತೆ ಹಲವರು ಘಟನೆಯ ಹಿನ್ನಲೆಯನ್ನು ಪರಿಶೀಲಿಸದೇ ವಿಡಿಯೋವನ್ನು ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಘಟನೆಗೆ ಧರ್ಮದ ಲೇಪನವನ್ನು ನೀಡಿದ್ದರು. ಇದು ಸಮಾಜದಲ್ಲಿನ ಕೋಮು ಸಾಮರಸ್ಯವನ್ನು ಹದಗೆಡಿಸಿದೆ. ಈ ಕಾರಣದಿಂದ ಇವರ ವಿರುದ್ಧ  IPC ಸೆಕ್ಷನ್ 153(ದಂಗೆಗೆ ಪ್ರಚೋದನೆ), 153A (ಸಮುದಾಯಗಳ ನಡುವೆ ಧಾರ್ಮಿಕ ದ್ವೇಷ ಹರಡುವ ಕೃತ್ಯ), ಸೆಕ್ಷನ್ 295A, ಸೆಕ್ಷನ್, ಸೆಕ್ಷನ್ 505 (ಅಪರಾಧಿಕ ಕೃತ್ಯಗಳಿಗೆ ಪ್ರಚೋದನೆ), ಸೆಕ್ಷನ್ 120B (ಅಪರಾಧಿಕ ಒಳಸಂಚು)  ಗಂಭೀರವಾದ ಅಪರಾಧಿಕ ಸೆಕ್ಷನ್‌ಗಳ ಅಡಿ FIR ದಾಖಲಿಸಿಕೊಳ್ಳಲಾಗಿತ್ತು ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ಘಟನೆಯ ಹಿನ್ನಲೆ 

ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಗಾಜಿಯಾಬಾದ್ ಲೋನಿ ಪ್ರದೇಶದಲ್ಲಿ 72 ವರ್ಷದ  ಅಬ್ದುಲ್ ಸಮೀದ್ ಸಫಿ ಎಂಬುವವರನ್ನು ಯುವಕರ ಗುಂಪು ಥಳಿಸುತ್ತಿರುವ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಕೆಲವರು ಸಫಿ ಅವರಲ್ಲಿ ಜೈ ಶ್ರೀರಾಮ್ ಪಠಣವನ್ನು ಮಾಡುವಂತೆ ಒತ್ತಾಯಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು. ಘಟನೆಗೆ ಸಂಬಂಧಿಸಿದ ವಿಡಿಯೋ ಒಂದು ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸಹ ಘಾಜಿಯಾಬಾದ್ ಘಟನೆಯನ್ನು ಖಂಡಿಸಿ ಹೇಳಿಕೆಗಳನ್ನು ನೀಡಿದ್ದರು.


ಇದನ್ನು ಓದಿ : ಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...