Homeಮುಖಪುಟಬಾಂಬೆ ಆಕ್ಸಿಜನ್ ಷೇರು ಬೆಲೆ 133% ಏರಿಕೆ!: ಆಮ್ಲಜನಕಕ್ಕೂ ಇದಕ್ಕೂ ಸಂಬಂಧವೇ ಇಲ್ಲ!

ಬಾಂಬೆ ಆಕ್ಸಿಜನ್ ಷೇರು ಬೆಲೆ 133% ಏರಿಕೆ!: ಆಮ್ಲಜನಕಕ್ಕೂ ಇದಕ್ಕೂ ಸಂಬಂಧವೇ ಇಲ್ಲ!

- Advertisement -
- Advertisement -

ಇದು ಆಕ್ಸಿಜನ್ ಎಂಬ ಪದದ ಮಹಿಮೆ! ಆಮ್ಲಜನಕ ಉತ್ಪಾದನೆ, ವಿತರಣೆ ಯಾವುದಕ್ಕೂ ಸಂಬಂಧವೇ ಇಲ್ಲದ ಬ್ಯಾಂಕೇತರ ಹಣಕಾಸು ಸಂಸ್ಥೆಗೆ ಬಂಪರ್ ಭಾಗ್ಯ ದೊರೆತಿದೆ. ಆದರೆ ಷೇರುಪ್ರಿಯ ಜನರು ತಪ್ಪಾಗಿ ಭಾವಿಸಿದ್ದರ ಪರಿಣಾಮ ಈ ಕಂಪನಿಗೆ ಬಂಪರ್ ಹೊಡೆದಿದೆ ಎಂದು ಫೈನಾನ್ಸಿಯಲ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಮ್ಲಜನಕದ ಬೇಡಿಕೆಯ ಹಠಾತ್ ಏರಿಕೆಯೊಂದಿಗೆ ಒಂದು ತಿಂಗಳೊಳಗೆ ಬಾಂಬೆ ಆಕ್ಸಿಜನ್ ಇನ್‌ವೆಸ್ಟ್ಮೆಂಟ್ ಕಂಪನಿಯ ಷೇರು ಬೆಲೆ 133% ರಷ್ಟು ಭಾರಿ ಪ್ರಮಾಣದಲ್ಲಿ ಏರಿದೆ. ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹೂಡಿಕೆದಾರರು ಆಮ್ಲಜನಕವನ್ನು ಉತ್ಪಾದಿಸುವ ಕಂಪನಿಗಳ ಷೇರುಗಳನ್ನು ಉತ್ಸಾಹದಿಂದ ಖರೀದಿಸಿದರು. ಆದರೆ, ಈ ಪ್ರವೃತ್ತಿಯ ಪ್ರಧಾನ ಫಲಾನುಭವಿ ಬಾಂಬೆ ಆಕ್ಸಿಜನ್ ಇನ್ವೆಸ್ಟ್ಮೆಂಟ್ ಕಂಪನಿಯು ಆಮ್ಲಜನಕ ಉತ್ಪಾದನಾ ವ್ಯವಹಾರದಲ್ಲಿಲ್ಲ. ಇದು ಬ್ಯಾಂಕೇತರ ಹಣಕಾಸು ಕಂಪನಿ (ಎನ್‌ಬಿಎಫ್‌ಸಿ) ಆಗಿದೆ. ಹೂಡಿಕೆದಾರರಿಗೆ ಈ ವಾಸ್ತವ ಅರಿವಾದಾಗ ಬಾಂಬೆ ಆಕ್ಸಿಜನ್ ಇನ್ವೆಸ್ಟ್ಮೆಂಟ್‌ನ ಷೇರು ಬೆಲೆ ಮಂಗಳವಾರ 5% ಕುಸಿದು 23,346 ರೂ.ಗೆ ಇಳಿಯಿತು. ಆದರೂ ಒಂದು ತಿಂಗಳಲ್ಲಿ ಭರ್ಜರಿ ಏರಿಕೆಯಂತೂ ಸಿಕ್ಕಿತಲ್ಲ?

ಬ್ಯಾಂಕೇತರ ಹಣಕಾಸು ಕಂಪನಿಯಾದ ಠೇವಣಿ ರಹಿತ ಬಾಂಬೆ ಆಕ್ಸಿಜನ್ ಇನ್ವೆಸ್ಟ್ಮೆಂಟ್ಸ್ ಮಾರುಕಟ್ಟೆ ಬಂಡವಾಳ 350 ಕೋಟಿ ರೂ. ಈ ಮೊದಲು ಕಂಪನಿಯನ್ನು ಬಾಂಬೆ ಆಕ್ಸಿಜನ್ ಕಾರ್ಪೊರೇಷನ್ ಎಂದು ಕರೆಯಲಾಗುತ್ತಿತ್ತು. ಆದರೆ 2019 ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಈ ಹೆಸರನ್ನು ಬದಲಾಯಿಸಲಾಗಿದೆ. ಕಂಪನಿಯ ವೆಬ್‌ಸೈಟ್‌ನಲ್ಲಿ, ಸಂಸ್ಥೆಯು ತನ್ನ ಪ್ರಾಥಮಿಕ ವ್ಯವಹಾರವು ಆಗಸ್ಟ್ 2019 ರವರೆಗೆ ಕೈಗಾರಿಕಾ ಅನಿಲಗಳನ್ನು ತಯಾರಿಸಿ ಸರಬರಾಜು ಮಾಡುತ್ತಿದೆ ಎಂದು ಹೇಳುತ್ತದೆ, ನಂತರ ಅದನ್ನು ನಿಲ್ಲಿಸಲಾಯಿತು. “ಕಂಪನಿಯು ಷೇರುಗಳು, ಮ್ಯೂಚುವಲ್ ಫಂಡ್‌ಗಳು ಮತ್ತು ಇತರ ಹಣಕಾಸು ಭದ್ರತೆಗಳ ರೂಪದಲ್ಲಿ ಸಾಕಷ್ಟು ಹಣಕಾಸಿನ ಹೂಡಿಕೆಗಳನ್ನು ಹೊಂದಿದೆ ಮತ್ತು ಅಂತಹ ಹಣಕಾಸು ಹೂಡಿಕೆಗಳಿಂದ ಬರುವ ಆದಾಯವು ಕಂಪನಿಯ ಆದಾಯದ ಮೂಲವಾಗಿದೆ” ಎಂದು ಬಾಂಬೆ ಆಕ್ಸಿಜನ್ ಹೇಳಿದೆ.

ಬಾಂಬೆ ಆಕ್ಸಿಜನ್ ಹೂಡಿಕೆಯ ಷೇರು ಬೆಲೆ ವರ್ಷದ ಆರಂಭದಿಂದ ಮಾರ್ಚ್ 25 ರವರೆಗೆ ಸಮತಟ್ಟಾಗಿ ವಹಿವಾಟು ನಡೆಸುತ್ತಿದೆ. ಮಾರ್ಚ್ 25 ರಂದು ಈ ಸ್ಟಾಕ್ 10,000 ರೂಗಳನ್ನು ಉಲ್ಲೇಖಿಸುತ್ತಿತ್ತು ಮತ್ತು ಅಂದಿನಿಂದ ಮಂಗಳವಾರ 52 ವಾರಗಳ ಗರಿಷ್ಠ 25,500 ರೂ.ಗಳನ್ನು ತಲುಪಲು ಪ್ರಾರಂಭಿಸಿತು.

ಬಾಂಬೆ ಆಕ್ಸಿಜನ್ ಸ್ಟಾಕ್ ಬೆಲೆಯಲ್ಲಿ ಅನೌಪಚಾರಿಕ ಚಲನೆಯನ್ನು ಗ್ರಹಿಸಿದ ಬಾಂಬೆ ಸ್ಟಾಕ್ ಎಕ್ಸ್‌ಚೆಂಜ್ (ಬಿಎಸ್‌ಇ) ಏಪ್ರಿಲ್ 8 ರಂದು ಕಂಪನಿಯಿಂದ ಸ್ಪಷ್ಟೀಕರಣವನ್ನು ಕೋರಿತು. ಸ್ಪಷ್ಟೀಕರಣವನ್ನು ಕೋರಿದ ನಂತರ ಷೇರು ಬೆಲೆ ಒಂದು ಸಣ್ಣ ತಿದ್ದುಪಡಿಯನ್ನು ಕಂಡರೂ, ಇದು ಹೂಡಿಕೆದಾರರರಿಗೆ ತಟ್ಟಿದಂತೆ ತೋರುತ್ತಿಲ್ಲ, ಅಂದಿನಿಂದ ಇಂದಿನವರೆಗೆ ಷೇರುಗಳ ಬಲೆ ಶೆ.27ರಷ್ಟು ಹೆಚ್ಚಾಗಿದೆ.

ಒಟ್ಟಿನಲ್ಲಿ ನಮ್ಮ ಜನ ಕೊರೊನಾ ಎರಡನೇ ಅಲೆಯಲ್ಲಿ ಸಾಮೂಹಿಕ ಸನ್ನಿಗೆ ಒಳಗಾಗಿದ್ದು ಹಿಂದು ಮುಂದು ನೋಡದೇ ಗಾಳಿ ಸುದ್ದಿಗಳನ್ನು ನಂಬುತ್ತಿದ್ದಾರೆ. ಕೋವಿಡ್‌ ರೋಗಿಗಳಿಗೆ ರೆಮ್‌ಡಿಸಿವಿರ್ ಇಂಜೆಕ್ಷನ್ ಉತ್ತಮ ಚಿಕಿತ್ಸಕವಲ್ಲ ಎಂದು ವಿಜ್ಞಾನಿಗಳು ಹೇಳಿದ್ದರೂ, ಅದರ ಬಗ್ಗೆ ಇನ್ನು ಚರ್ಚೆಗಳು ನಡೆಯುತ್ತಿದ್ದರೂ ಆ ಔ‍ಷಧಿಗೆ ಭಾರೀ ಬೇಡಿಕೆ ಕಂಡುಬಂದಿರುವುದನ್ನು ಇದೇ ಅರ್ಥದಲ್ಲಿ ಗ್ರಹಿಸಬೇಕಾಗಿದೆ.

ಈ ನಡುವೆ, ಆಮ್ಲಜನಕ ಉತ್ಪಾದಿಸುವ ವ್ಯವಹಾರದಲ್ಲಿರುವ ಇತರ ಕಂಪನಿಗಳು ಇನ್ನೂ ಷೇರು ವಿನಿಮಯ ಕೇಂದ್ರಗಳಲ್ಲಿ ಬಲವಾದ ಹಿಡಿತ ಹೊಂದಿವೆ.. ನ್ಯಾಷನಲ್ ಆಕ್ಸಿಜನ್, ಭಗವತಿ ಆಕ್ಸಿಜನ್, ಲಿಂಡೆ ಇಂಡಿಯಾ, ಮತ್ತು ಗಗನ್ ಅನಿಲಗಳ ಷೇರು ಬೆಲೆಗಳು ಹಸಿರು ಬಣ್ಣದಲ್ಲಿವೆ.


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...