Homeರಾಜಕೀಯಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

ಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

- Advertisement -
- Advertisement -

ಬೊಮ್ಮಾಯಿ ನೇತೃತ್ವದ ಆಡಳಿತವು ಕರ್ನಾಟಕವನ್ನು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ಹೇಳಿದ್ದಾರೆ. ಅವರು ವಿಜಯನಗರ ಜಿಲ್ಲೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಸಭೆಯಲ್ಲಿ ಮಾತನಾಡಿದ ನಡ್ಡಾ “ನಾನು ನಿಮಗೆ ಉಪನ್ಯಾಸ ನೀಡಲು ಬಂದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತು ಬಿ ಎಸ್ ಯಡಿಯೂರಪ್ಪನವರ ಕೃಪೆಯಿಂದ ಕರ್ನಾಟಕವು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಹೋಗುತ್ತದೆ ಎಂದು ಹೇಳಲು ಬಂದಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರೇಂದ್ರ ಮೋದಿಯಂತಹ ಅಪ್ರತಿಮ ನಾಯಕನಿದ್ದಾಗ ಬಿಜೆಪಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ತುಂಬಾ ಅದೃಷ್ಟವಂತರು. ಅವರು ರಾಷ್ಟ್ರೀಯ ನಾಯಕರಷ್ಟೇ ಅಲ್ಲ, ಅಂತರರಾಷ್ಟ್ರೀಯ ವ್ಯಕ್ತಿಯಾಗಿದ್ದಾರೆ. ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಉಳಿದೆಲ್ಲವೂ ಕುಟುಂಬ ಪಕ್ಷಗಳು ಮತ್ತು ಯಾವುದೇ ಪಕ್ಷವು ಸಿದ್ಧಾಂತ ಆಧಾರಿತ ಪಕ್ಷವಲ್ಲ” ಎಂದು ನಡ್ಡಾ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

“ಜನರ ಬದುಕನ್ನು ಬದಲಾಯಿಸಲು ತಾವು ಏನು ಮಾಡಲಿದ್ದೇವೆ ಎಂಬುದರ ಕುರಿತು ಮುಂದೆ ಬಂದು ಮಾತನಾಡುವ ಯಾವುದೇ ನಾಯಕ ಕಾಂಗ್ರೆಸ್ ಅಥವಾ ಯಾವುದೇ ಪ್ರಾದೇಶಿಕ ಪಕ್ಷದಲ್ಲಿ ಇಲ್ಲ. ಅವರು ಜಾತಿ, ಪ್ರಾದೇಶಿಕತೆ ಮತ್ತು ಭಾಷಾ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ವಿಭಜನೆಯನ್ನು ಉಂಟುಮಾಡುವ ಬಗ್ಗೆ ಮಾತನಾಡುತ್ತಾರೆ. ಆದರೆ ಬಡವರ ಕಣ್ಣೀರು ಒರೆಸಲು ಅವರು ಎರಡು ಪದಗಳನ್ನು ಹೇಳುವುದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಡ್ಡಾ ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪುನರಾವರ್ತಿತ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿಯ ಕಾರ್ಯಚಟುವಟಿಕೆಯಿಂದ ನನಗೆ ಸಂತೋಷವಾಗಿದೆ. ಸರ್ಕಾರ ಪುನರಾವರ್ತನೆ ಆಗುವ ಹಾಗೆ ನೀವು ಸಂಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತೀರಿ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ನಡ್ಡಾ ಹೇಳಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಗಿದ ಬಳಿಕ ರಾಜ್ಯದ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಊಹಾಪೋಹ ಎದ್ದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಕುರ್ಚಿಯ ಮೇಲೆ ಹಲವಾರು ತಿಂಗಳುಗಳಿಂದ ತೂಗುಗತ್ತಿ ತೂಗಾಡುತ್ತಿದೆ. ಸಚಿವ ಸಂಪುಟ ಬದಲಾವಣೆ ಕುರಿತು ಮಾತುಕತೆಗಾಗಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಅವರಿಗೆ ಬಿಜೆಪಿ ನಾಯಕತ್ವದಿಂದ ಅನುಕೂಲಕರ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಕತ್ತಿಯ ಅಲಗಿನ ಮೇಲೆ; ಕರ್ನಾಟಕದಲ್ಲಿ ವಸ್ತು-ವಿಷಯಗಳು, ಆಕ್ಷೇಪಗಳು ಮತ್ತು ಉದ್ದೇಶಗಳು 

ಈ ಭೇಟಿಯ ವೇಳೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬೊಮ್ಮಾಯಿ ಅವರಿಗೆ ಸಾಧ್ಯವಾಗಿರಲಿಲ್ಲ. ಬೊಮ್ಮಾಯಿ ದೆಹಲಿಯನ್ನು ತೊರೆದ ಕೆಲವು ಗಂಟೆಗಳ ನಂತರ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಅಮಿತ್‌ ಶಾ ಅವರನ್ನು ಭೇಟಿಯಾದ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಉಸ್ತುವಾರಿ ಹೊಂದಿರುವ ಕೇಂದ್ರ ಬಿಜೆಪಿ ನಾಯಕ ಅರುಣ್ ಸಿಂಗ್ ಅವರು, ಬೊಮ್ಮಾಯಿ ಸಾಮಾನ್ಯ ಮನುಷ್ಯ ಮತ್ತು ಸರಳ ವ್ಯಕ್ತಿ ಎಂದು ಶನಿವಾರ ಬಣ್ಣಿಸಿದ್ದಾರೆ.

ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸಚಿವ ಸ್ಥಾನವೂ ಕೈತಪ್ಪಲಿದೆ ಎಂಬ ಊಹಾಪೋಹವಿದೆ. ಗೃಹ ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ಇದೆ ಎಂಬ ಸೂಚನೆಯಾಗಿ, ಸಚಿವ ಸ್ಥಾನದ ಆಕಾಂಕ್ಷಿ ಹಿರಿಯ ಶಾಸಕ ಬಸವರಾಜ ಪಾಟೀಲ ಯತ್ನಾಳ್ ಅವರು, ಜ್ಞಾನೇಂದ್ರ ಅವರು ಒಳ್ಳೆಯ ವ್ಯಕ್ತಿ, ಆದರೆ ಸಚಿವ ಸ್ಥಾನಕ್ಕೆ ಸೂಕ್ತವಲ್ಲ ಎಂದು ಕಳೆದವರ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ಬಲಪಂಥೀಯ ಯುವ ನಾಯಕನನ್ನು ಗೃಹ ಸಚಿವರನ್ನಾಗಿ ಮಾಡಲು ಬಿಜೆಪಿ ಪ್ರಯತ್ನಿಸಲಿದೆ ಎಂಬ ಮಾತುಗಳೂ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...