Homeರಾಜಕೀಯಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

ಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

- Advertisement -
- Advertisement -

ಬೊಮ್ಮಾಯಿ ನೇತೃತ್ವದ ಆಡಳಿತವು ಕರ್ನಾಟಕವನ್ನು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ಹೇಳಿದ್ದಾರೆ. ಅವರು ವಿಜಯನಗರ ಜಿಲ್ಲೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಸಭೆಯಲ್ಲಿ ಮಾತನಾಡಿದ ನಡ್ಡಾ “ನಾನು ನಿಮಗೆ ಉಪನ್ಯಾಸ ನೀಡಲು ಬಂದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತು ಬಿ ಎಸ್ ಯಡಿಯೂರಪ್ಪನವರ ಕೃಪೆಯಿಂದ ಕರ್ನಾಟಕವು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಹೋಗುತ್ತದೆ ಎಂದು ಹೇಳಲು ಬಂದಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರೇಂದ್ರ ಮೋದಿಯಂತಹ ಅಪ್ರತಿಮ ನಾಯಕನಿದ್ದಾಗ ಬಿಜೆಪಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ತುಂಬಾ ಅದೃಷ್ಟವಂತರು. ಅವರು ರಾಷ್ಟ್ರೀಯ ನಾಯಕರಷ್ಟೇ ಅಲ್ಲ, ಅಂತರರಾಷ್ಟ್ರೀಯ ವ್ಯಕ್ತಿಯಾಗಿದ್ದಾರೆ. ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಉಳಿದೆಲ್ಲವೂ ಕುಟುಂಬ ಪಕ್ಷಗಳು ಮತ್ತು ಯಾವುದೇ ಪಕ್ಷವು ಸಿದ್ಧಾಂತ ಆಧಾರಿತ ಪಕ್ಷವಲ್ಲ” ಎಂದು ನಡ್ಡಾ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

“ಜನರ ಬದುಕನ್ನು ಬದಲಾಯಿಸಲು ತಾವು ಏನು ಮಾಡಲಿದ್ದೇವೆ ಎಂಬುದರ ಕುರಿತು ಮುಂದೆ ಬಂದು ಮಾತನಾಡುವ ಯಾವುದೇ ನಾಯಕ ಕಾಂಗ್ರೆಸ್ ಅಥವಾ ಯಾವುದೇ ಪ್ರಾದೇಶಿಕ ಪಕ್ಷದಲ್ಲಿ ಇಲ್ಲ. ಅವರು ಜಾತಿ, ಪ್ರಾದೇಶಿಕತೆ ಮತ್ತು ಭಾಷಾ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ವಿಭಜನೆಯನ್ನು ಉಂಟುಮಾಡುವ ಬಗ್ಗೆ ಮಾತನಾಡುತ್ತಾರೆ. ಆದರೆ ಬಡವರ ಕಣ್ಣೀರು ಒರೆಸಲು ಅವರು ಎರಡು ಪದಗಳನ್ನು ಹೇಳುವುದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಡ್ಡಾ ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪುನರಾವರ್ತಿತ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿಯ ಕಾರ್ಯಚಟುವಟಿಕೆಯಿಂದ ನನಗೆ ಸಂತೋಷವಾಗಿದೆ. ಸರ್ಕಾರ ಪುನರಾವರ್ತನೆ ಆಗುವ ಹಾಗೆ ನೀವು ಸಂಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತೀರಿ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ನಡ್ಡಾ ಹೇಳಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಗಿದ ಬಳಿಕ ರಾಜ್ಯದ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಊಹಾಪೋಹ ಎದ್ದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಕುರ್ಚಿಯ ಮೇಲೆ ಹಲವಾರು ತಿಂಗಳುಗಳಿಂದ ತೂಗುಗತ್ತಿ ತೂಗಾಡುತ್ತಿದೆ. ಸಚಿವ ಸಂಪುಟ ಬದಲಾವಣೆ ಕುರಿತು ಮಾತುಕತೆಗಾಗಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಅವರಿಗೆ ಬಿಜೆಪಿ ನಾಯಕತ್ವದಿಂದ ಅನುಕೂಲಕರ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಕತ್ತಿಯ ಅಲಗಿನ ಮೇಲೆ; ಕರ್ನಾಟಕದಲ್ಲಿ ವಸ್ತು-ವಿಷಯಗಳು, ಆಕ್ಷೇಪಗಳು ಮತ್ತು ಉದ್ದೇಶಗಳು 

ಈ ಭೇಟಿಯ ವೇಳೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬೊಮ್ಮಾಯಿ ಅವರಿಗೆ ಸಾಧ್ಯವಾಗಿರಲಿಲ್ಲ. ಬೊಮ್ಮಾಯಿ ದೆಹಲಿಯನ್ನು ತೊರೆದ ಕೆಲವು ಗಂಟೆಗಳ ನಂತರ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಅಮಿತ್‌ ಶಾ ಅವರನ್ನು ಭೇಟಿಯಾದ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಉಸ್ತುವಾರಿ ಹೊಂದಿರುವ ಕೇಂದ್ರ ಬಿಜೆಪಿ ನಾಯಕ ಅರುಣ್ ಸಿಂಗ್ ಅವರು, ಬೊಮ್ಮಾಯಿ ಸಾಮಾನ್ಯ ಮನುಷ್ಯ ಮತ್ತು ಸರಳ ವ್ಯಕ್ತಿ ಎಂದು ಶನಿವಾರ ಬಣ್ಣಿಸಿದ್ದಾರೆ.

ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸಚಿವ ಸ್ಥಾನವೂ ಕೈತಪ್ಪಲಿದೆ ಎಂಬ ಊಹಾಪೋಹವಿದೆ. ಗೃಹ ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ಇದೆ ಎಂಬ ಸೂಚನೆಯಾಗಿ, ಸಚಿವ ಸ್ಥಾನದ ಆಕಾಂಕ್ಷಿ ಹಿರಿಯ ಶಾಸಕ ಬಸವರಾಜ ಪಾಟೀಲ ಯತ್ನಾಳ್ ಅವರು, ಜ್ಞಾನೇಂದ್ರ ಅವರು ಒಳ್ಳೆಯ ವ್ಯಕ್ತಿ, ಆದರೆ ಸಚಿವ ಸ್ಥಾನಕ್ಕೆ ಸೂಕ್ತವಲ್ಲ ಎಂದು ಕಳೆದವರ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ಬಲಪಂಥೀಯ ಯುವ ನಾಯಕನನ್ನು ಗೃಹ ಸಚಿವರನ್ನಾಗಿ ಮಾಡಲು ಬಿಜೆಪಿ ಪ್ರಯತ್ನಿಸಲಿದೆ ಎಂಬ ಮಾತುಗಳೂ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...