Homeರಾಜಕೀಯಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

ಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

- Advertisement -
- Advertisement -

ಬೊಮ್ಮಾಯಿ ನೇತೃತ್ವದ ಆಡಳಿತವು ಕರ್ನಾಟಕವನ್ನು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ಹೇಳಿದ್ದಾರೆ. ಅವರು ವಿಜಯನಗರ ಜಿಲ್ಲೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಸಭೆಯಲ್ಲಿ ಮಾತನಾಡಿದ ನಡ್ಡಾ “ನಾನು ನಿಮಗೆ ಉಪನ್ಯಾಸ ನೀಡಲು ಬಂದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತು ಬಿ ಎಸ್ ಯಡಿಯೂರಪ್ಪನವರ ಕೃಪೆಯಿಂದ ಕರ್ನಾಟಕವು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಹೋಗುತ್ತದೆ ಎಂದು ಹೇಳಲು ಬಂದಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರೇಂದ್ರ ಮೋದಿಯಂತಹ ಅಪ್ರತಿಮ ನಾಯಕನಿದ್ದಾಗ ಬಿಜೆಪಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ತುಂಬಾ ಅದೃಷ್ಟವಂತರು. ಅವರು ರಾಷ್ಟ್ರೀಯ ನಾಯಕರಷ್ಟೇ ಅಲ್ಲ, ಅಂತರರಾಷ್ಟ್ರೀಯ ವ್ಯಕ್ತಿಯಾಗಿದ್ದಾರೆ. ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಉಳಿದೆಲ್ಲವೂ ಕುಟುಂಬ ಪಕ್ಷಗಳು ಮತ್ತು ಯಾವುದೇ ಪಕ್ಷವು ಸಿದ್ಧಾಂತ ಆಧಾರಿತ ಪಕ್ಷವಲ್ಲ” ಎಂದು ನಡ್ಡಾ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

“ಜನರ ಬದುಕನ್ನು ಬದಲಾಯಿಸಲು ತಾವು ಏನು ಮಾಡಲಿದ್ದೇವೆ ಎಂಬುದರ ಕುರಿತು ಮುಂದೆ ಬಂದು ಮಾತನಾಡುವ ಯಾವುದೇ ನಾಯಕ ಕಾಂಗ್ರೆಸ್ ಅಥವಾ ಯಾವುದೇ ಪ್ರಾದೇಶಿಕ ಪಕ್ಷದಲ್ಲಿ ಇಲ್ಲ. ಅವರು ಜಾತಿ, ಪ್ರಾದೇಶಿಕತೆ ಮತ್ತು ಭಾಷಾ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ವಿಭಜನೆಯನ್ನು ಉಂಟುಮಾಡುವ ಬಗ್ಗೆ ಮಾತನಾಡುತ್ತಾರೆ. ಆದರೆ ಬಡವರ ಕಣ್ಣೀರು ಒರೆಸಲು ಅವರು ಎರಡು ಪದಗಳನ್ನು ಹೇಳುವುದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಡ್ಡಾ ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪುನರಾವರ್ತಿತ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿಯ ಕಾರ್ಯಚಟುವಟಿಕೆಯಿಂದ ನನಗೆ ಸಂತೋಷವಾಗಿದೆ. ಸರ್ಕಾರ ಪುನರಾವರ್ತನೆ ಆಗುವ ಹಾಗೆ ನೀವು ಸಂಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತೀರಿ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ನಡ್ಡಾ ಹೇಳಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಗಿದ ಬಳಿಕ ರಾಜ್ಯದ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಊಹಾಪೋಹ ಎದ್ದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಕುರ್ಚಿಯ ಮೇಲೆ ಹಲವಾರು ತಿಂಗಳುಗಳಿಂದ ತೂಗುಗತ್ತಿ ತೂಗಾಡುತ್ತಿದೆ. ಸಚಿವ ಸಂಪುಟ ಬದಲಾವಣೆ ಕುರಿತು ಮಾತುಕತೆಗಾಗಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಅವರಿಗೆ ಬಿಜೆಪಿ ನಾಯಕತ್ವದಿಂದ ಅನುಕೂಲಕರ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಕತ್ತಿಯ ಅಲಗಿನ ಮೇಲೆ; ಕರ್ನಾಟಕದಲ್ಲಿ ವಸ್ತು-ವಿಷಯಗಳು, ಆಕ್ಷೇಪಗಳು ಮತ್ತು ಉದ್ದೇಶಗಳು 

ಈ ಭೇಟಿಯ ವೇಳೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬೊಮ್ಮಾಯಿ ಅವರಿಗೆ ಸಾಧ್ಯವಾಗಿರಲಿಲ್ಲ. ಬೊಮ್ಮಾಯಿ ದೆಹಲಿಯನ್ನು ತೊರೆದ ಕೆಲವು ಗಂಟೆಗಳ ನಂತರ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಅಮಿತ್‌ ಶಾ ಅವರನ್ನು ಭೇಟಿಯಾದ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಉಸ್ತುವಾರಿ ಹೊಂದಿರುವ ಕೇಂದ್ರ ಬಿಜೆಪಿ ನಾಯಕ ಅರುಣ್ ಸಿಂಗ್ ಅವರು, ಬೊಮ್ಮಾಯಿ ಸಾಮಾನ್ಯ ಮನುಷ್ಯ ಮತ್ತು ಸರಳ ವ್ಯಕ್ತಿ ಎಂದು ಶನಿವಾರ ಬಣ್ಣಿಸಿದ್ದಾರೆ.

ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸಚಿವ ಸ್ಥಾನವೂ ಕೈತಪ್ಪಲಿದೆ ಎಂಬ ಊಹಾಪೋಹವಿದೆ. ಗೃಹ ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ಇದೆ ಎಂಬ ಸೂಚನೆಯಾಗಿ, ಸಚಿವ ಸ್ಥಾನದ ಆಕಾಂಕ್ಷಿ ಹಿರಿಯ ಶಾಸಕ ಬಸವರಾಜ ಪಾಟೀಲ ಯತ್ನಾಳ್ ಅವರು, ಜ್ಞಾನೇಂದ್ರ ಅವರು ಒಳ್ಳೆಯ ವ್ಯಕ್ತಿ, ಆದರೆ ಸಚಿವ ಸ್ಥಾನಕ್ಕೆ ಸೂಕ್ತವಲ್ಲ ಎಂದು ಕಳೆದವರ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ಬಲಪಂಥೀಯ ಯುವ ನಾಯಕನನ್ನು ಗೃಹ ಸಚಿವರನ್ನಾಗಿ ಮಾಡಲು ಬಿಜೆಪಿ ಪ್ರಯತ್ನಿಸಲಿದೆ ಎಂಬ ಮಾತುಗಳೂ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....