Homeರಾಜಕೀಯಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

ಬೊಮ್ಮಾಯಿ ಆಡಳಿತ ಕರ್ನಾಟಕವನ್ನು ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಣ್ಣನೆ

- Advertisement -
- Advertisement -

ಬೊಮ್ಮಾಯಿ ನೇತೃತ್ವದ ಆಡಳಿತವು ಕರ್ನಾಟಕವನ್ನು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಕೊಂಡೊಯ್ಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ಹೇಳಿದ್ದಾರೆ. ಅವರು ವಿಜಯನಗರ ಜಿಲ್ಲೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಸಭೆಯಲ್ಲಿ ಮಾತನಾಡಿದ ನಡ್ಡಾ “ನಾನು ನಿಮಗೆ ಉಪನ್ಯಾಸ ನೀಡಲು ಬಂದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತು ಬಿ ಎಸ್ ಯಡಿಯೂರಪ್ಪನವರ ಕೃಪೆಯಿಂದ ಕರ್ನಾಟಕವು ಅಭಿವೃದ್ಧಿಯ ಸುವರ್ಣ ಯುಗಕ್ಕೆ ಹೋಗುತ್ತದೆ ಎಂದು ಹೇಳಲು ಬಂದಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರೇಂದ್ರ ಮೋದಿಯಂತಹ ಅಪ್ರತಿಮ ನಾಯಕನಿದ್ದಾಗ ಬಿಜೆಪಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ತುಂಬಾ ಅದೃಷ್ಟವಂತರು. ಅವರು ರಾಷ್ಟ್ರೀಯ ನಾಯಕರಷ್ಟೇ ಅಲ್ಲ, ಅಂತರರಾಷ್ಟ್ರೀಯ ವ್ಯಕ್ತಿಯಾಗಿದ್ದಾರೆ. ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಉಳಿದೆಲ್ಲವೂ ಕುಟುಂಬ ಪಕ್ಷಗಳು ಮತ್ತು ಯಾವುದೇ ಪಕ್ಷವು ಸಿದ್ಧಾಂತ ಆಧಾರಿತ ಪಕ್ಷವಲ್ಲ” ಎಂದು ನಡ್ಡಾ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

“ಜನರ ಬದುಕನ್ನು ಬದಲಾಯಿಸಲು ತಾವು ಏನು ಮಾಡಲಿದ್ದೇವೆ ಎಂಬುದರ ಕುರಿತು ಮುಂದೆ ಬಂದು ಮಾತನಾಡುವ ಯಾವುದೇ ನಾಯಕ ಕಾಂಗ್ರೆಸ್ ಅಥವಾ ಯಾವುದೇ ಪ್ರಾದೇಶಿಕ ಪಕ್ಷದಲ್ಲಿ ಇಲ್ಲ. ಅವರು ಜಾತಿ, ಪ್ರಾದೇಶಿಕತೆ ಮತ್ತು ಭಾಷಾ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ವಿಭಜನೆಯನ್ನು ಉಂಟುಮಾಡುವ ಬಗ್ಗೆ ಮಾತನಾಡುತ್ತಾರೆ. ಆದರೆ ಬಡವರ ಕಣ್ಣೀರು ಒರೆಸಲು ಅವರು ಎರಡು ಪದಗಳನ್ನು ಹೇಳುವುದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಡ್ಡಾ ತಿಳಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪುನರಾವರ್ತಿತ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿಯ ಕಾರ್ಯಚಟುವಟಿಕೆಯಿಂದ ನನಗೆ ಸಂತೋಷವಾಗಿದೆ. ಸರ್ಕಾರ ಪುನರಾವರ್ತನೆ ಆಗುವ ಹಾಗೆ ನೀವು ಸಂಪೂರ್ಣ ಶಕ್ತಿಯೊಂದಿಗೆ ಹೋರಾಡುತ್ತೀರಿ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ನಡ್ಡಾ ಹೇಳಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಗಿದ ಬಳಿಕ ರಾಜ್ಯದ ಸರ್ಕಾರದಲ್ಲಿ ಬದಲಾವಣೆ ಆಗಲಿದೆ ಎಂಬ ಊಹಾಪೋಹ ಎದ್ದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರ ಕುರ್ಚಿಯ ಮೇಲೆ ಹಲವಾರು ತಿಂಗಳುಗಳಿಂದ ತೂಗುಗತ್ತಿ ತೂಗಾಡುತ್ತಿದೆ. ಸಚಿವ ಸಂಪುಟ ಬದಲಾವಣೆ ಕುರಿತು ಮಾತುಕತೆಗಾಗಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಅವರಿಗೆ ಬಿಜೆಪಿ ನಾಯಕತ್ವದಿಂದ ಅನುಕೂಲಕರ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಕತ್ತಿಯ ಅಲಗಿನ ಮೇಲೆ; ಕರ್ನಾಟಕದಲ್ಲಿ ವಸ್ತು-ವಿಷಯಗಳು, ಆಕ್ಷೇಪಗಳು ಮತ್ತು ಉದ್ದೇಶಗಳು 

ಈ ಭೇಟಿಯ ವೇಳೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬೊಮ್ಮಾಯಿ ಅವರಿಗೆ ಸಾಧ್ಯವಾಗಿರಲಿಲ್ಲ. ಬೊಮ್ಮಾಯಿ ದೆಹಲಿಯನ್ನು ತೊರೆದ ಕೆಲವು ಗಂಟೆಗಳ ನಂತರ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಅಮಿತ್‌ ಶಾ ಅವರನ್ನು ಭೇಟಿಯಾದ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಉಸ್ತುವಾರಿ ಹೊಂದಿರುವ ಕೇಂದ್ರ ಬಿಜೆಪಿ ನಾಯಕ ಅರುಣ್ ಸಿಂಗ್ ಅವರು, ಬೊಮ್ಮಾಯಿ ಸಾಮಾನ್ಯ ಮನುಷ್ಯ ಮತ್ತು ಸರಳ ವ್ಯಕ್ತಿ ಎಂದು ಶನಿವಾರ ಬಣ್ಣಿಸಿದ್ದಾರೆ.

ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸಚಿವ ಸ್ಥಾನವೂ ಕೈತಪ್ಪಲಿದೆ ಎಂಬ ಊಹಾಪೋಹವಿದೆ. ಗೃಹ ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ಇದೆ ಎಂಬ ಸೂಚನೆಯಾಗಿ, ಸಚಿವ ಸ್ಥಾನದ ಆಕಾಂಕ್ಷಿ ಹಿರಿಯ ಶಾಸಕ ಬಸವರಾಜ ಪಾಟೀಲ ಯತ್ನಾಳ್ ಅವರು, ಜ್ಞಾನೇಂದ್ರ ಅವರು ಒಳ್ಳೆಯ ವ್ಯಕ್ತಿ, ಆದರೆ ಸಚಿವ ಸ್ಥಾನಕ್ಕೆ ಸೂಕ್ತವಲ್ಲ ಎಂದು ಕಳೆದವರ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ಬಲಪಂಥೀಯ ಯುವ ನಾಯಕನನ್ನು ಗೃಹ ಸಚಿವರನ್ನಾಗಿ ಮಾಡಲು ಬಿಜೆಪಿ ಪ್ರಯತ್ನಿಸಲಿದೆ ಎಂಬ ಮಾತುಗಳೂ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...