Homeಕರ್ನಾಟಕ'ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ': ಕಾಂಗ್ರೆಸ್

‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

- Advertisement -
- Advertisement -

ಭಾನುವಾರ ಮಂಡ್ಯದಲ್ಲಿ ನಡೆದ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚು ಜನರನ್ನು ಸೇರಿಸುವ ಉದ್ದೇಶದಿಂದ ಸರ್ಕಾರ ಜಿಲ್ಲಾ ಪಂಚಾಯತ್ ಕಾರ್ಯಾಲಯದಿಂದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದಕ್ಕೆ ಕಾಂಗ್ರೆಸ್, ಮೋದಿಮೋಸ ಟ್ಯಾಗ್ ಬಳಸಿ ಟ್ವಿಟರ್‌ನಲ್ಲಿ ಟೀಕೆ ಮಾಡಿದೆ.

”ಖಾಲಿ ಕುರ್ಚಿಗಳಿಂದ ನರೇಂದ್ರ ಮೋದಿ ಅವರಿಗೆ ಮುಜುಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತರುತ್ತಿರುವಿರಾ ಬಸವರಾಜ್ ಬೊಮ್ಮಾಯಿ ಅವರೇ..? ಜನರ ಹಣದಲ್ಲಿ ಪಕ್ಷದ ಮೆರವಣಿಗೆ ಮಾಡಲು ನಾಚಿಕೆ ಎನಿಸುವುದಿಲ್ಲವೇ..? ರಾಜ್ಯ ಬಿಜೆಪಿಯು ಜನರನ್ನು ಸೇರಿಸಲು ಇಷ್ಟೊಂದು ಪರದಾಡುತ್ತಿರುವುದು ಕರ್ನಾಟಕದಲ್ಲಿ ಮೋದಿ ಮುಖ ಹಳಸಿದೆ ಎಂಬುದನ್ನು ಸೂಚಿಸುತ್ತದೆ!” ಎಂದು ಕಾಂಗ್ರೆಸ್ ಟೀಕಿಸಿದೆ. ಜೊತೆಗೆ ಟ್ವೀಟ್ ನಲ್ಲಿ ‘ಮೋದಿ ಮೋಸ’ ಎಂದು ಟ್ಯಾಗ್ ಕೂಡ ಬಳಸಲಾಗಿದೆ.

ಜಿಲ್ಲಾ ಪಂಚಾಯತ್ ಕಾರ್ಯಲಯವು, ಮಾರ್ಚ್ 12ರಂದು ನಡೆಯುವ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಬೇಕು ಎಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಆ ಸುತ್ತೋಲೆಯಲ್ಲಿ,- ಸನ್ಮಾನ್ಯ ಪ್ರಧಾನ ಮಂತ್ರಿಗಳು ಮಂಡ್ಯ ಜಿಲ್ಲೆಗೆ ದಿನಾಂಕ:12-03-2023 ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೇಂದ್ರ ಸರ್ಕಾರದ/ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಸಮಾರಂಭ ನಡೆಯುವ ಸ್ಥಳಕ್ಕೆ ಕರೆತರಲು ತಮ್ಮ ತಮ್ಮ ಗ್ರಾಮ ಪಂಚಾಯತಿ ಕೇಂದ್ರಸ್ಥಾನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿದ್ದು, ನಿಮ್ಮ ವ್ಯಾಪ್ತಿಯ ಫಲಾನುಭವಿಗಳನ್ನು ಬೆಳಗ್ಗೆ 8.00 ಗಂಟೆಗೆ ಸಮಾರಂಭಕ್ಕೆ ಕರೆದುಕೊಂಡು ಹೋಗಿ, ಸಮಾರಂಭ ಮುಕ್ತಾಯದ ನಂತರ ಫಲಾನುಭವಿಗಳನ್ನು ಗ್ರಾಮ ಪಂಚಾಯಿತಿ ಕೇಂದ್ರಸ್ಥಾನದಲ್ಲಿ ಬಿಡಲು ಗ್ರಾಮ ಪಂಚಾಯತಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಎಲ್ಲಾ ಗ್ರಾಮ ಪಂಚಾಯತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುಟ್ಟಾಗಿ ಸೂಚಿಸಿದೆ ಹಾಗೂ ಈ ಸಂಬಂಧಪಟ್ಟ ಛಾಯಾಚಿತ್ರಗಳನ್ನು ವಾಲ್ಟಾಪ್‌ ಗ್ರೂಪ್‌ಗಳಲ್ಲಿ ಹಾಕಲು ಸೂಚಿಸುತ್ತಾ, ಮಾನ್ಯ ಜಿಲ್ಲಾಧಿಕಾರಿಗಳ ಪತ್ರವನ್ನು ಈ ಕೆಳಗೆ ಲಗತ್ತಿಸಿದೆ ಎಂದು ಹೇಳಲಾಗಿದೆ.

”ನೆರೆ ಬಂದಾಗ ಬರಲಿಲ್ಲ, ಬರ ಬಂದಾಗ ಬರಲಿಲ್ಲ, ಕರ್ನಾಟಕಕ್ಕೆ ಆಕ್ಸಿಜನ್ ಕೊಡಲಿಲ್ಲ, ವ್ಯಾಕ್ಸಿನ್ ನೀಡಲಿಲ್ಲ, GST ಪಾಲು ಸಿಗಲಿಲ್ಲ. ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ಕಚೇರಿಯ ಬಾಗಿಲು ಕಾದರೂ ಭೇಟಿಯಾಗಿರಲಿಲ್ಲ. ಚುನಾವಣೆಗಾಗಿ ಹಲ್ಲು ಕಿಸಿದು, ಕೈಬೀಸಿ ಹೋಗಲು ಬರುವ ನರೇಂದ್ರ ಮೋದಿ ಕರ್ನಾಟಕಕ್ಕೆ ಮಾಡಿದ್ದು ಮಹಾ ವಂಚನೆ” ಎಂದು ‘ಮೋದಿ ಮೋಸ’ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...