Homeಕರ್ನಾಟಕ'ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ': ಕಾಂಗ್ರೆಸ್

‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

- Advertisement -
- Advertisement -

ಭಾನುವಾರ ಮಂಡ್ಯದಲ್ಲಿ ನಡೆದ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚು ಜನರನ್ನು ಸೇರಿಸುವ ಉದ್ದೇಶದಿಂದ ಸರ್ಕಾರ ಜಿಲ್ಲಾ ಪಂಚಾಯತ್ ಕಾರ್ಯಾಲಯದಿಂದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದಕ್ಕೆ ಕಾಂಗ್ರೆಸ್, ಮೋದಿಮೋಸ ಟ್ಯಾಗ್ ಬಳಸಿ ಟ್ವಿಟರ್‌ನಲ್ಲಿ ಟೀಕೆ ಮಾಡಿದೆ.

”ಖಾಲಿ ಕುರ್ಚಿಗಳಿಂದ ನರೇಂದ್ರ ಮೋದಿ ಅವರಿಗೆ ಮುಜುಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತರುತ್ತಿರುವಿರಾ ಬಸವರಾಜ್ ಬೊಮ್ಮಾಯಿ ಅವರೇ..? ಜನರ ಹಣದಲ್ಲಿ ಪಕ್ಷದ ಮೆರವಣಿಗೆ ಮಾಡಲು ನಾಚಿಕೆ ಎನಿಸುವುದಿಲ್ಲವೇ..? ರಾಜ್ಯ ಬಿಜೆಪಿಯು ಜನರನ್ನು ಸೇರಿಸಲು ಇಷ್ಟೊಂದು ಪರದಾಡುತ್ತಿರುವುದು ಕರ್ನಾಟಕದಲ್ಲಿ ಮೋದಿ ಮುಖ ಹಳಸಿದೆ ಎಂಬುದನ್ನು ಸೂಚಿಸುತ್ತದೆ!” ಎಂದು ಕಾಂಗ್ರೆಸ್ ಟೀಕಿಸಿದೆ. ಜೊತೆಗೆ ಟ್ವೀಟ್ ನಲ್ಲಿ ‘ಮೋದಿ ಮೋಸ’ ಎಂದು ಟ್ಯಾಗ್ ಕೂಡ ಬಳಸಲಾಗಿದೆ.

ಜಿಲ್ಲಾ ಪಂಚಾಯತ್ ಕಾರ್ಯಲಯವು, ಮಾರ್ಚ್ 12ರಂದು ನಡೆಯುವ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಬೇಕು ಎಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಆ ಸುತ್ತೋಲೆಯಲ್ಲಿ,- ಸನ್ಮಾನ್ಯ ಪ್ರಧಾನ ಮಂತ್ರಿಗಳು ಮಂಡ್ಯ ಜಿಲ್ಲೆಗೆ ದಿನಾಂಕ:12-03-2023 ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೇಂದ್ರ ಸರ್ಕಾರದ/ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಸಮಾರಂಭ ನಡೆಯುವ ಸ್ಥಳಕ್ಕೆ ಕರೆತರಲು ತಮ್ಮ ತಮ್ಮ ಗ್ರಾಮ ಪಂಚಾಯತಿ ಕೇಂದ್ರಸ್ಥಾನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿದ್ದು, ನಿಮ್ಮ ವ್ಯಾಪ್ತಿಯ ಫಲಾನುಭವಿಗಳನ್ನು ಬೆಳಗ್ಗೆ 8.00 ಗಂಟೆಗೆ ಸಮಾರಂಭಕ್ಕೆ ಕರೆದುಕೊಂಡು ಹೋಗಿ, ಸಮಾರಂಭ ಮುಕ್ತಾಯದ ನಂತರ ಫಲಾನುಭವಿಗಳನ್ನು ಗ್ರಾಮ ಪಂಚಾಯಿತಿ ಕೇಂದ್ರಸ್ಥಾನದಲ್ಲಿ ಬಿಡಲು ಗ್ರಾಮ ಪಂಚಾಯತಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಎಲ್ಲಾ ಗ್ರಾಮ ಪಂಚಾಯತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುಟ್ಟಾಗಿ ಸೂಚಿಸಿದೆ ಹಾಗೂ ಈ ಸಂಬಂಧಪಟ್ಟ ಛಾಯಾಚಿತ್ರಗಳನ್ನು ವಾಲ್ಟಾಪ್‌ ಗ್ರೂಪ್‌ಗಳಲ್ಲಿ ಹಾಕಲು ಸೂಚಿಸುತ್ತಾ, ಮಾನ್ಯ ಜಿಲ್ಲಾಧಿಕಾರಿಗಳ ಪತ್ರವನ್ನು ಈ ಕೆಳಗೆ ಲಗತ್ತಿಸಿದೆ ಎಂದು ಹೇಳಲಾಗಿದೆ.

”ನೆರೆ ಬಂದಾಗ ಬರಲಿಲ್ಲ, ಬರ ಬಂದಾಗ ಬರಲಿಲ್ಲ, ಕರ್ನಾಟಕಕ್ಕೆ ಆಕ್ಸಿಜನ್ ಕೊಡಲಿಲ್ಲ, ವ್ಯಾಕ್ಸಿನ್ ನೀಡಲಿಲ್ಲ, GST ಪಾಲು ಸಿಗಲಿಲ್ಲ. ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ಕಚೇರಿಯ ಬಾಗಿಲು ಕಾದರೂ ಭೇಟಿಯಾಗಿರಲಿಲ್ಲ. ಚುನಾವಣೆಗಾಗಿ ಹಲ್ಲು ಕಿಸಿದು, ಕೈಬೀಸಿ ಹೋಗಲು ಬರುವ ನರೇಂದ್ರ ಮೋದಿ ಕರ್ನಾಟಕಕ್ಕೆ ಮಾಡಿದ್ದು ಮಹಾ ವಂಚನೆ” ಎಂದು ‘ಮೋದಿ ಮೋಸ’ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...