Homeಮುಖಪುಟರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಾಪಸಾತಿ ಕುರಿತು ರೈತರೊಂದಿಗೆ ಮಾತುಕತೆಗೆ ಸಿದ್ದ - ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಾಪಸಾತಿ ಕುರಿತು ರೈತರೊಂದಿಗೆ ಮಾತುಕತೆಗೆ ಸಿದ್ದ – ಬಸವರಾಜ ಬೊಮ್ಮಾಯಿ

- Advertisement -
- Advertisement -

ರೈತರ ಎಲ್ಲಾ ಬೇಡಿಕೆಗಳ ಬಗ್ಗೆ ಅವರೊಂದಿಗೆ ಮಾತನಾಡಲು ನಾವು ಸಿದ್ದರಿದ್ದೇವೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ.

ಇಂದು ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಾರ್ವಜನಿಕ ಹಿತಾಸಕ್ತಿ ಇದ್ದರೆ ಕೃಷಿ ಕಾನೂನುಗಳು ಮತ್ತು ಇತರ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ರೈತರೊಂದಿಗೆ ಮಾತನಾಡಲು ಮುಕ್ತರಾಗಿದ್ದೇವೆ. ಅವರು ಏನ್ನನ್ನು ಬಯಸುತ್ತಾರೆ ಎಂಬುದನ್ನು ನಾವು ಆಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

‘ಚಳಿಗಾಲದ ಅಧಿವೇಶನವನ್ನು ಫಲಪ್ರದವಾಗಿ ನಡೆಸಲು ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕೆಲವು ಮಸೂದೆಗಳನ್ನು ಅಂಗೀಕರಿಸಲು, ಅಧಿವೇಶನದಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ. ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕೆಲವು ದೀರ್ಘಾವಧಿಯ ಬೇಡಿಕೆಗಳನ್ನು ಪರಿಹರಿಸಲು ನಾವು ಸಿದ್ದರಿದ್ದೇವೆ’ ಎಂದು ತಿಳಿಸಿದರು.

ರೈತರಿಗೆ ಅತಿವೃಷ್ಟಿ ಪರಿಹಾರ ಪಾವತಿ ವಿಳಂಬದ ಕುರಿತು ಕೇಳಿದ ಪ್ರಶ್ನೆಗೆ ಸದನದ ವೇದಿಕೆಯಲ್ಲಿ ಉತ್ತರ ನೀಡಲಾಗುವುದು ಎಂದರು. ‘ವಿರೋಧ ಪಕ್ಷದ ನಾಯಕರಿಗೆ ಇಂತಹ ಸಮಸ್ಯೆಗಳನ್ನು ಎತ್ತಲು ಹಲವಾರು ಅವಕಾಶಗಳಿವೆ. ನಾವು ಅವರಿಗೆ ಉತ್ತರಿಸುತ್ತೇವೆ. ಸದನ ನಡೆಯುತ್ತಿರುವಾಗ ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದು ಸರಿಯಲ್ಲ’ ಎಂದರು.

ಮತಾಂತರ ನಿಷೇಧ ಕಾಯ್ದೆ ಕುರಿತು ಕೇಳಲಾದ ಪ್ರಶ್ನೆಗೆ “ಮತಾಂತರ ಕಾಯ್ದೆ ಕಾನೂನು ಇಲಾಖೆಯ ಪರಿಶೀಲನಾ ಸಮಿತಿಯಲ್ಲಿದ್ದು, ಒಪ್ಪಿಗೆಯಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಬೇಕು. ನಂತರ ಸದನದಲ್ಲಿ ಮಂಡಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳು ಮತ್ತು ಸೂಚನೆಗೆ ಅನುಗುಣವಾಗಿ ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಆದರೆ ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರ್ಕಾರದ ತಿದ್ದುಪಡಿಗಳನ್ನು ಇನ್ನು ವಾಪಸ್ ಪಡೆದಿಲ್ಲ. ಹಾಗಾಗಿ ರೈತರು ನಿನ್ನೆಯಿಂದ ಪ್ರತಿಭಟನೆ ಆರಂಭಿಸಿದ್ದಾರೆ.


ಇದನ್ನೂ ಓದಿ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಕೋನರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...