Homeಮುಖಪುಟರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಾಪಸಾತಿ ಕುರಿತು ರೈತರೊಂದಿಗೆ ಮಾತುಕತೆಗೆ ಸಿದ್ದ - ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕೃಷಿ ಕಾಯ್ದೆಗಳ ವಾಪಸಾತಿ ಕುರಿತು ರೈತರೊಂದಿಗೆ ಮಾತುಕತೆಗೆ ಸಿದ್ದ – ಬಸವರಾಜ ಬೊಮ್ಮಾಯಿ

- Advertisement -
- Advertisement -

ರೈತರ ಎಲ್ಲಾ ಬೇಡಿಕೆಗಳ ಬಗ್ಗೆ ಅವರೊಂದಿಗೆ ಮಾತನಾಡಲು ನಾವು ಸಿದ್ದರಿದ್ದೇವೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಯಾವುದೇ ಭರವಸೆ ನೀಡಿಲ್ಲ.

ಇಂದು ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಾರ್ವಜನಿಕ ಹಿತಾಸಕ್ತಿ ಇದ್ದರೆ ಕೃಷಿ ಕಾನೂನುಗಳು ಮತ್ತು ಇತರ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವು ರೈತರೊಂದಿಗೆ ಮಾತನಾಡಲು ಮುಕ್ತರಾಗಿದ್ದೇವೆ. ಅವರು ಏನ್ನನ್ನು ಬಯಸುತ್ತಾರೆ ಎಂಬುದನ್ನು ನಾವು ಆಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

‘ಚಳಿಗಾಲದ ಅಧಿವೇಶನವನ್ನು ಫಲಪ್ರದವಾಗಿ ನಡೆಸಲು ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕೆಲವು ಮಸೂದೆಗಳನ್ನು ಅಂಗೀಕರಿಸಲು, ಅಧಿವೇಶನದಲ್ಲಿ ಚರ್ಚಿಸಲು ನಾವು ಸಿದ್ಧರಿದ್ದೇವೆ. ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಕೆಲವು ದೀರ್ಘಾವಧಿಯ ಬೇಡಿಕೆಗಳನ್ನು ಪರಿಹರಿಸಲು ನಾವು ಸಿದ್ದರಿದ್ದೇವೆ’ ಎಂದು ತಿಳಿಸಿದರು.

ರೈತರಿಗೆ ಅತಿವೃಷ್ಟಿ ಪರಿಹಾರ ಪಾವತಿ ವಿಳಂಬದ ಕುರಿತು ಕೇಳಿದ ಪ್ರಶ್ನೆಗೆ ಸದನದ ವೇದಿಕೆಯಲ್ಲಿ ಉತ್ತರ ನೀಡಲಾಗುವುದು ಎಂದರು. ‘ವಿರೋಧ ಪಕ್ಷದ ನಾಯಕರಿಗೆ ಇಂತಹ ಸಮಸ್ಯೆಗಳನ್ನು ಎತ್ತಲು ಹಲವಾರು ಅವಕಾಶಗಳಿವೆ. ನಾವು ಅವರಿಗೆ ಉತ್ತರಿಸುತ್ತೇವೆ. ಸದನ ನಡೆಯುತ್ತಿರುವಾಗ ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದು ಸರಿಯಲ್ಲ’ ಎಂದರು.

ಮತಾಂತರ ನಿಷೇಧ ಕಾಯ್ದೆ ಕುರಿತು ಕೇಳಲಾದ ಪ್ರಶ್ನೆಗೆ “ಮತಾಂತರ ಕಾಯ್ದೆ ಕಾನೂನು ಇಲಾಖೆಯ ಪರಿಶೀಲನಾ ಸಮಿತಿಯಲ್ಲಿದ್ದು, ಒಪ್ಪಿಗೆಯಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಬೇಕು. ನಂತರ ಸದನದಲ್ಲಿ ಮಂಡಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳು ಮತ್ತು ಸೂಚನೆಗೆ ಅನುಗುಣವಾಗಿ ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದೆ. ಆದರೆ ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರ್ಕಾರದ ತಿದ್ದುಪಡಿಗಳನ್ನು ಇನ್ನು ವಾಪಸ್ ಪಡೆದಿಲ್ಲ. ಹಾಗಾಗಿ ರೈತರು ನಿನ್ನೆಯಿಂದ ಪ್ರತಿಭಟನೆ ಆರಂಭಿಸಿದ್ದಾರೆ.


ಇದನ್ನೂ ಓದಿ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಕೋನರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...