Homeಕರ್ನಾಟಕಜವಾಹರಲಾಲ್‌ ನೆಹರೂರನ್ನು ಹಾಡಿ ಹೊಗಳಿದ ಮುಖ್ಯಮಂತ್ರಿ ಬೊಮ್ಮಾಯಿ!

ಜವಾಹರಲಾಲ್‌ ನೆಹರೂರನ್ನು ಹಾಡಿ ಹೊಗಳಿದ ಮುಖ್ಯಮಂತ್ರಿ ಬೊಮ್ಮಾಯಿ!

ನೆಹರೂ ಅವರ ಆದರ್ಶಗಳ ಪಾಲನೆ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ

- Advertisement -
- Advertisement -

ಒಂದು ಕಡೆ ಬಿಜೆಪಿಯು ದೇಶದ ಎಲ್ಲಾ ಅವ್ಯವಸ್ಥೆಗೆ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಕಾರಣ ಎಂದು ಅಪಪ್ರಚಾರ ಮಾಡುತ್ತಿದೆ. ಈ ಮಧ್ಯೆ ರಾಜ್ಯದ ಹೊಸ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನು ಹಾಡಿ ಹೊಗಳಿದ್ದು, ‘ನೆಹರೂ ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸಿದವರು’ ಎಂದು ಹೇಳಿದ್ದಾರೆ.

ಭಾನುವಾರ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡುತ್ತಿದ್ದರು.

“ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಇದನ್ನೂ ಓದು: ಈ ಅಸಹಾಯಕತೆ ಸಿಎಂ ಬೊಮ್ಮಾಯಿಯವರದ್ದಾ? ಕರ್ನಾಟಕದ ಜನರದ್ದಾ?

“ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ನೆಹರೂ ಮಹತ್ವದ ಪಾತ್ರ ವಹಿಸಿದ್ದಾರೆ. ಅವರು ಕೈಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು” ಎಂದು ತಿಳಿಸಿದರು.

“ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಪರ್ಕ ಹೊಂದಿ ಕಾರ್ಯನಿರ್ವಹಿಸಿದವರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜೈಲು ವಾಸ ಅನುಭವಿಸಿದ ನೆಹರೂರವರ ಆದರ್ಶಗಳ ಪಾಲನೆ ನಮ್ಮೆಲ್ಲರ ಕರ್ತವ್ಯ” ಎಂದು ಮುಖ್ಯಮಂತ್ರಿ ತಿಳಿಸಿದರು.

ಮೆಟ್ರೋ ಕಾಮಗಾರಿಯಿಂದಾಗಿ ಸ್ಥಳಾಂತರಗೊಂಡಿದ್ದ ಮಾಜಿ ಪ್ರಧಾನಿ ಜವಾಹರ್ ಲಾಲ್ ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪಿಸುವ ಮೂಲಕ ವಿಧಾನಸೌಧದ ಮೆರಗು ಹೆಚ್ಚಿಸಿದಂತಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದು: ಬಿಎಸ್‌ವೈ ಸಂಪುಟದಲ್ಲಿದ್ದ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ತಪ್ಪಿದ್ದವರು ಯಾರು ಯಾರು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...