Homeಕರ್ನಾಟಕಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

- Advertisement -
- Advertisement -

ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊನೆಗೂ ಪತ್ರಿಕಾ ಪ್ರಕಟಣೆ ಮೂಲಕ ಶುಕ್ರವಾರ ಪ್ರತಿಕ್ರಿಯೆ ನೀಡಿದೆ. ಆದರೆ, ವಿವಾದಾತ್ಮಕ ಪಠ್ಯಗಳನ್ನು ವಾಪಾಸು ಪಡೆದು ಹಳೆಯ ಪಠ್ಯಗಳನ್ನೇ ಮುಂದುವರೆಸಬೇಕು ಮತ್ತು ನಾಡಗೀತೆಯನ್ನು ಅವಹೇಳನ ಮಾಡಿರುವ ಕವನ ಹಂಚಿಕೊಂಡು ಸಂಭ್ರಮಿಸಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಬೇಕು ಎಂಬ ಪ್ರಮುಖ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಮುಖ್ಯಮಂತ್ರಿ ರೋಹಿತ್ ಚಕ್ರತೀರ್ಥ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಹೋರಾಟಗಾರರು ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ನೀಡಿದ್ದ ಹೇಳಿಕೆಯಲ್ಲಿ “ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ” ಎಂದು ಪಠ್ಯದಲ್ಲಿ ಮಾಡಲಾಗಿರುವ ಬ್ರಾಹ್ಮಣೀಕರಣ ಮತ್ತು ಕೇಸರೀಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳ ಬಗ್ಗೆ ಉಲ್ಲೇಖಿಸಿರುವ ಮುಖ್ಯಮಂತ್ರಿ, “ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ” ಎಂದು ಹಳೆಯ ಸಮಿತಿ ಮೇಲೆ ಆರೋಪಗಳನ್ನು ಮಾಡಿದ್ದು, “ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂಓದಿ: ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರಾಷ್ಟ್ರಕವಿ ಕುವೆಂಪು ಅವರು ರಚಿಸಿದ್ದ ನಾಡಗೀತೆಯನ್ನು ವಿಕೃತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್‌ ಕ್ರೈಮ್‌ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ ಹೋರಾಟರಾರರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಆದಿಚುಂಚನಗಿರಿ ಪೀಠದ ನಿರ್ಮಲಾನಂದ ಸ್ವಾಮೀಜಿಗಳ ಒತ್ತಡಕ್ಕೆ ಮಣಿದಂತೆ ಕಂಡರೂ ಮೂಗಿಗೆ ತುಪ್ಪ ಸವರುವ ತಂತ್ರ ಎಂದು ಬಣ್ಣಿಸಿದ್ದಾರೆ.

ನಾಡಗೀತೆಯನ್ನು ಅವಹೇಳನ ಮಾಡಿದ್ದ ‘ಬರಹ’ ಫೇಸ್‌‌ಬುಕ್‌ನಲ್ಲಿ ಮೊದಲು ಪೋಸ್ಟ್‌ ಆಗಿದ್ದು ರೋಹಿತ್ ಚಕ್ರತೀರ್ಥ ಅವರ ಫೇಸ್‌ಬುಕ್ ಖಾತೆಯಲ್ಲಾಗಿದೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿಯಾಗಿ ಟ್ರೋಲ್ ಮಾಡುವುದು ಸಾಮಾನ್ಯವಾಗಿದ್ದು ಹೀಗಾಗಿ ನಾಡಗೀತೆಯ ಬಗ್ಗೆ ಬರೆಯಲಾದ ಆಕ್ಷೇಪಾರ್ಹ ಬರಹ ಅವರೇ ಬರೆದ್ದಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಅದಲ್ಲದೆ, ಅವರೇ ಹೇಳಿದಂತೆ ‘ವಾಟ್ಸಪ್‌ ಬಂದಿದ್ದು’ ಎಂದು ನಂಬಿದರೂ ಅದು ಯಾರು ಕಳುಹಿಸಿಕೊಟ್ಟಿದ್ದು ಎಂದು ಅವರನ್ನು ಬಂಧಿಸಿ ತನಿಖೆ ನಡೆಸಿದರೆ ತಿಳಿದು ಬರುತ್ತದೆ. ಜೊತೆಗೆ, ನಾಡಗೀತೆಯ ಬಗ್ಗೆ ಬರೆದ ಆಕ್ಷೇಪಾರ್ಹ ಬರಹವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಅದನ್ನು ಬರೆದವರಿಗೆ ‘ಬುರ್ಜ್‌ ಖಲೀಫಾ ಕೊಡುವುದಾಗಿ ಬರಹವನ್ನು ಬೆಂಬಲಿಸಿ, ಅದನ್ನು ಸಂಭ್ರಮಿಸಿದ್ದರು’ ಎಂದೂ ಕೂಡಾ ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟರ್‌

ನಿನ್ನೆ ನೀಡಿದ್ದ ಪತ್ರಿಕಾ ಪ್ರಕಟಣೆಯಲ್ಲಿ ಸರ್ಕಾರ ತೆಗೆದುಕೊಂಡ ಹಲವು ನಿರ್ದಾರಗಳ ಬಗ್ಗೆ ಕೂಡಾ ಆಕ್ಷೇಪ ವ್ಯಕ್ತವಾಗಿದೆ.

ಇದನ್ನೂಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ರೋಹಿತ್‌‌‌ ಚಕ್ರತೀರ್ಥ ಸಮಿತಿಯ ಕಾರ್ಯ ಮುಗಿದಿರುವುದರಿಂದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೆ ವಿವಾದ ಇದ್ದಿದ್ದು, ರೋಹಿತ್ ಚಕ್ರತೀರ್ಥ ಸಮಿತಿಯು ಪರಿಷ್ಕರಣೆ ಮಾಡಿರುವ ಪಠ್ಯಗಳ ಬಗ್ಗೆಯಾಗಿದೆ. ಚಕ್ರತೀರ್ಥ ಸಮಿತಿಯು ಪಠ್ಯಗಳನ್ನು ಬ್ರಾಹ್ಮಣೀಕರಣ ಮತ್ತು ಕೇಸರೀಕರಣಗೊಳಿಸಿದ್ದು, ಅದನ್ನು ವಾಪಾಸು ಪಡೆಯಬೇಕು ಎಂಬ ಬೇಡಿಕೆಯ ಬಗ್ಗೆ ಸರ್ಕಾರ ಯಾವುದೆ ಹೇಳಿಕೆ ನೀಡಿಲ್ಲ.

ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ ಎಂದು ಬೊಮ್ಮಾಯಿ ಹೇಳಿದ್ದು, “ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ” ಎಂದು ಹೇಳಿದೆ. ಆದರೆ ಅಂಬೇಡ್ಕರ್‌ ಬಗ್ಗೆಗಿನ ಪಠ್ಯ ತಿರುಚಿದ್ದು, ಮಹಿಳಾ ಸಾಧಕಿಯರ ಬಗ್ಗೆ, ಅಲ್ಪ ಸಂಖ್ಯಾತ ಲೇಖಕರು ಬರೆದಿರುವ ಪಾಠಗಳನ್ನು ಯಾಕೆ ವಾಪಾಸು ಪಡೆದಿದೆ ಎಂದು ಸ್ಪಷ್ಟೀಕರಣ ನೀಡಿಲ್ಲ. ಬಿಜೆಪಿಯ ಬಹುದೊಡ್ಡ ಓಟ್‌ ಬ್ಯಾಂಕ್‌ ಸಮುದಾಯವಾದ ಲಿಂಗಾಯತರನ್ನು ಓಲೈಸಲು ಬಸವಣ್ಣನ ಬಗ್ಗೆ ಮಾತ್ರ ಹೇಳಿಕೊಂಡಿದೆ.

ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದು ಹೇಳಿಕೆ ನೀಡಿರುವ ಸರ್ಕಾರವು ವಿವಾದಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದೆ.

ಇದನ್ನೂ ಓದಿ:  ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಈ ಮಧ್ಯೆ ರೋಹಿತ್ ಚಕ್ರತೀರ್ಥ ಅವರ ಸಮಿತಿ ಧರ್ಮಗಳನ್ನು ಪರಿಚಯಿಸುವಾಗ ‘ಹಿಂದೂ’ ಧರ್ಮವನ್ನು ಮಾತ್ರ ಧರ್ಮ ಎಂದು ಉಲ್ಲೇಖಿಸಿದ್ದು, ಇಸ್ಲಾಂ, ಕ್ರೈಸ್ತ ಧರ್ಮವನ್ನು ‘ರಿಲೀಜಿಯನ್’(ಮತ) ಎಂದು ಕರೆದಿದೆ. “ತಾವು ಆಚರಿಸುವ ಧರ್ಮ ಮಾತ್ರವೇ ಧರ್ಮವಾಗಿದ್ದು, ಉಳಿದವುಗಳು ಧರ್ಮಗಳಲ್ಲ” ಎಂಬುವುದು ಸಂಘಪರಿವಾರ ಮಂಡಿಸುವ ವಾದಗಳಾಗಿದೆ. ಸಂಘಪರಿವಾರದ ಸಿದ್ದಾಂತಗಳನ್ನು ಪಠ್ಯ ಪುಸ್ತಕಗಳಲ್ಲೇ ರೋಹಿತ್‌ ಚಕ್ರತೀರ್ಥ ಸಮಿತಿ ಮುದ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....