Homeಕರ್ನಾಟಕಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

ಪಠ್ಯ ಬ್ರಾಹ್ಮಣೀಕರಣದ ಬಗ್ಗೆ ಹೇಳದೆ ‘ಮೂಗಿಗೆ ತುಪ್ಪ’ ಸವರಿದ ಬೊಮ್ಮಾಯಿ ಪತ್ರಿಕಾ ಹೇಳಿಕೆ!

- Advertisement -
- Advertisement -

ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊನೆಗೂ ಪತ್ರಿಕಾ ಪ್ರಕಟಣೆ ಮೂಲಕ ಶುಕ್ರವಾರ ಪ್ರತಿಕ್ರಿಯೆ ನೀಡಿದೆ. ಆದರೆ, ವಿವಾದಾತ್ಮಕ ಪಠ್ಯಗಳನ್ನು ವಾಪಾಸು ಪಡೆದು ಹಳೆಯ ಪಠ್ಯಗಳನ್ನೇ ಮುಂದುವರೆಸಬೇಕು ಮತ್ತು ನಾಡಗೀತೆಯನ್ನು ಅವಹೇಳನ ಮಾಡಿರುವ ಕವನ ಹಂಚಿಕೊಂಡು ಸಂಭ್ರಮಿಸಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಬೇಕು ಎಂಬ ಪ್ರಮುಖ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಮುಖ್ಯಮಂತ್ರಿ ರೋಹಿತ್ ಚಕ್ರತೀರ್ಥ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಹೋರಾಟಗಾರರು ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ನೀಡಿದ್ದ ಹೇಳಿಕೆಯಲ್ಲಿ “ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ” ಎಂದು ಪಠ್ಯದಲ್ಲಿ ಮಾಡಲಾಗಿರುವ ಬ್ರಾಹ್ಮಣೀಕರಣ ಮತ್ತು ಕೇಸರೀಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳ ಬಗ್ಗೆ ಉಲ್ಲೇಖಿಸಿರುವ ಮುಖ್ಯಮಂತ್ರಿ, “ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ” ಎಂದು ಹಳೆಯ ಸಮಿತಿ ಮೇಲೆ ಆರೋಪಗಳನ್ನು ಮಾಡಿದ್ದು, “ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂಓದಿ: ರೋಹಿತ್ ಚಕ್ರತೀರ್ಥ ಸಮಿತಿಯ ಮತ್ತೊಂದು ಎಡವಟ್ಟು: 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ!

ರಾಷ್ಟ್ರಕವಿ ಕುವೆಂಪು ಅವರು ರಚಿಸಿದ್ದ ನಾಡಗೀತೆಯನ್ನು ವಿಕೃತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್‌ ಕ್ರೈಮ್‌ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ ಹೋರಾಟರಾರರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಆದಿಚುಂಚನಗಿರಿ ಪೀಠದ ನಿರ್ಮಲಾನಂದ ಸ್ವಾಮೀಜಿಗಳ ಒತ್ತಡಕ್ಕೆ ಮಣಿದಂತೆ ಕಂಡರೂ ಮೂಗಿಗೆ ತುಪ್ಪ ಸವರುವ ತಂತ್ರ ಎಂದು ಬಣ್ಣಿಸಿದ್ದಾರೆ.

ನಾಡಗೀತೆಯನ್ನು ಅವಹೇಳನ ಮಾಡಿದ್ದ ‘ಬರಹ’ ಫೇಸ್‌‌ಬುಕ್‌ನಲ್ಲಿ ಮೊದಲು ಪೋಸ್ಟ್‌ ಆಗಿದ್ದು ರೋಹಿತ್ ಚಕ್ರತೀರ್ಥ ಅವರ ಫೇಸ್‌ಬುಕ್ ಖಾತೆಯಲ್ಲಾಗಿದೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿಯಾಗಿ ಟ್ರೋಲ್ ಮಾಡುವುದು ಸಾಮಾನ್ಯವಾಗಿದ್ದು ಹೀಗಾಗಿ ನಾಡಗೀತೆಯ ಬಗ್ಗೆ ಬರೆಯಲಾದ ಆಕ್ಷೇಪಾರ್ಹ ಬರಹ ಅವರೇ ಬರೆದ್ದಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಅದಲ್ಲದೆ, ಅವರೇ ಹೇಳಿದಂತೆ ‘ವಾಟ್ಸಪ್‌ ಬಂದಿದ್ದು’ ಎಂದು ನಂಬಿದರೂ ಅದು ಯಾರು ಕಳುಹಿಸಿಕೊಟ್ಟಿದ್ದು ಎಂದು ಅವರನ್ನು ಬಂಧಿಸಿ ತನಿಖೆ ನಡೆಸಿದರೆ ತಿಳಿದು ಬರುತ್ತದೆ. ಜೊತೆಗೆ, ನಾಡಗೀತೆಯ ಬಗ್ಗೆ ಬರೆದ ಆಕ್ಷೇಪಾರ್ಹ ಬರಹವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಅದನ್ನು ಬರೆದವರಿಗೆ ‘ಬುರ್ಜ್‌ ಖಲೀಫಾ ಕೊಡುವುದಾಗಿ ಬರಹವನ್ನು ಬೆಂಬಲಿಸಿ, ಅದನ್ನು ಸಂಭ್ರಮಿಸಿದ್ದರು’ ಎಂದೂ ಕೂಡಾ ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟರ್‌

ನಿನ್ನೆ ನೀಡಿದ್ದ ಪತ್ರಿಕಾ ಪ್ರಕಟಣೆಯಲ್ಲಿ ಸರ್ಕಾರ ತೆಗೆದುಕೊಂಡ ಹಲವು ನಿರ್ದಾರಗಳ ಬಗ್ಗೆ ಕೂಡಾ ಆಕ್ಷೇಪ ವ್ಯಕ್ತವಾಗಿದೆ.

ಇದನ್ನೂಓದಿ: ರೋಹಿತ್‌‌ ಚಕ್ರತೀರ್ಥ ‘ಶೈಕ್ಷಣಿಕ ಅರ್ಹತೆ’ ಬಗ್ಗೆ ಪ್ರಶ್ನಿಸಿ ಆರ್‌‌ಟಿಐ ಅರ್ಜಿ

ರೋಹಿತ್‌‌‌ ಚಕ್ರತೀರ್ಥ ಸಮಿತಿಯ ಕಾರ್ಯ ಮುಗಿದಿರುವುದರಿಂದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೆ ವಿವಾದ ಇದ್ದಿದ್ದು, ರೋಹಿತ್ ಚಕ್ರತೀರ್ಥ ಸಮಿತಿಯು ಪರಿಷ್ಕರಣೆ ಮಾಡಿರುವ ಪಠ್ಯಗಳ ಬಗ್ಗೆಯಾಗಿದೆ. ಚಕ್ರತೀರ್ಥ ಸಮಿತಿಯು ಪಠ್ಯಗಳನ್ನು ಬ್ರಾಹ್ಮಣೀಕರಣ ಮತ್ತು ಕೇಸರೀಕರಣಗೊಳಿಸಿದ್ದು, ಅದನ್ನು ವಾಪಾಸು ಪಡೆಯಬೇಕು ಎಂಬ ಬೇಡಿಕೆಯ ಬಗ್ಗೆ ಸರ್ಕಾರ ಯಾವುದೆ ಹೇಳಿಕೆ ನೀಡಿಲ್ಲ.

ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ ಎಂದು ಬೊಮ್ಮಾಯಿ ಹೇಳಿದ್ದು, “ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ” ಎಂದು ಹೇಳಿದೆ. ಆದರೆ ಅಂಬೇಡ್ಕರ್‌ ಬಗ್ಗೆಗಿನ ಪಠ್ಯ ತಿರುಚಿದ್ದು, ಮಹಿಳಾ ಸಾಧಕಿಯರ ಬಗ್ಗೆ, ಅಲ್ಪ ಸಂಖ್ಯಾತ ಲೇಖಕರು ಬರೆದಿರುವ ಪಾಠಗಳನ್ನು ಯಾಕೆ ವಾಪಾಸು ಪಡೆದಿದೆ ಎಂದು ಸ್ಪಷ್ಟೀಕರಣ ನೀಡಿಲ್ಲ. ಬಿಜೆಪಿಯ ಬಹುದೊಡ್ಡ ಓಟ್‌ ಬ್ಯಾಂಕ್‌ ಸಮುದಾಯವಾದ ಲಿಂಗಾಯತರನ್ನು ಓಲೈಸಲು ಬಸವಣ್ಣನ ಬಗ್ಗೆ ಮಾತ್ರ ಹೇಳಿಕೊಂಡಿದೆ.

ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದು ಹೇಳಿಕೆ ನೀಡಿರುವ ಸರ್ಕಾರವು ವಿವಾದಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸಿದೆ.

ಇದನ್ನೂ ಓದಿ:  ಕುವೆಂಪು, ಸ್ತ್ರೀದ್ವೇಷಿ ಮತ್ತು ರೇಪ್‌ ಸಮರ್ಥನೆಯ ಟ್ವೀಟ್‌ಗಳು ವೈರಲ್‌‌: ಫೇಸ್‌ಬುಕ್ & ಟ್ವಿಟರ್‌ಗೆ ಲಾಕ್‌ ಮಾಡಿದ ರೋಹಿತ್ ಚಕ್ರತೀರ್ಥ

ಈ ಮಧ್ಯೆ ರೋಹಿತ್ ಚಕ್ರತೀರ್ಥ ಅವರ ಸಮಿತಿ ಧರ್ಮಗಳನ್ನು ಪರಿಚಯಿಸುವಾಗ ‘ಹಿಂದೂ’ ಧರ್ಮವನ್ನು ಮಾತ್ರ ಧರ್ಮ ಎಂದು ಉಲ್ಲೇಖಿಸಿದ್ದು, ಇಸ್ಲಾಂ, ಕ್ರೈಸ್ತ ಧರ್ಮವನ್ನು ‘ರಿಲೀಜಿಯನ್’(ಮತ) ಎಂದು ಕರೆದಿದೆ. “ತಾವು ಆಚರಿಸುವ ಧರ್ಮ ಮಾತ್ರವೇ ಧರ್ಮವಾಗಿದ್ದು, ಉಳಿದವುಗಳು ಧರ್ಮಗಳಲ್ಲ” ಎಂಬುವುದು ಸಂಘಪರಿವಾರ ಮಂಡಿಸುವ ವಾದಗಳಾಗಿದೆ. ಸಂಘಪರಿವಾರದ ಸಿದ್ದಾಂತಗಳನ್ನು ಪಠ್ಯ ಪುಸ್ತಕಗಳಲ್ಲೇ ರೋಹಿತ್‌ ಚಕ್ರತೀರ್ಥ ಸಮಿತಿ ಮುದ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...