Homeಕರ್ನಾಟಕಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

- Advertisement -
- Advertisement -

ತಹಸೀಲ್ದಾರ್‌ಗಳಿಂದ ವಿತರಣೆಯಾಗಬೇಕಿದ್ದ ಹಕ್ಕುಪತ್ರಗಳನ್ನು ಚುನಾವಣಾ ಪ್ರಚಾರದ ದೃಷ್ಟಿಯಿಂದ ಪ್ರಧಾನಿ ಮೂಲಕ ಕೊಡಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಟೀಕಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಭಾಸ್ಕರ್‌ ರಾವ್‌, “ತಾಂಡ ಹಾಗೂ ಹಟ್ಟಿಗಳಲ್ಲಿ ವಾಸವಿರುವ ಬುಡಕಟ್ಟು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಕೆಲಸ ಬಹಳ ಹಿಂದೆಯೇ ಆಗಬೇಕಿತ್ತು. ಇದು ತಹಸೀಲ್ದಾರ್‌ ಮಟ್ಟದ ಕೆಲಸವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವವರೆಗೂ ಕಾಯುವ ಅಗತ್ಯವಿರಲಿಲ್ಲ. ಜನಪರ ಆಡಳಿತ ನೀಡಲು ವಿಫಲವಾಗಿರುವ ಬಿಜೆಪಿ ಸರ್ಕಾರವು ಪ್ರಚಾರ ಗಿಟ್ಟಿಸಿಕೊಳ್ಳಲು ಹಕ್ಕುಪತ್ರ ವಿತರಣೆಗೂ ಚುನಾವಣೆವರೆಗೆ ಕಾದಿರುವುದು ದುರಂತ. ದೊಡ್ಡ ಪ್ರಮಾಣದಲ್ಲಿ ಹಕ್ಕು ಪತ್ರ ವಿತರಣೆಯನ್ನು ಇಷ್ಟು ದಿನ ಬಾಕಿ ಉಳಿಸಿಕೊಂಡು ಪ್ರಧಾನಿಯವರಿಂದ ಕೊಡಿಸಿರುವುದು ಕೇವಲ ಪ್ರಚಾರ ಪಡೆಯುವ ಗಿಮಿಕ್” ಎಂದು ಹೇಳಿದರು.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

“ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ರಾಜ್ಯ ಭೇಟಿ ವೇಳೆ ಗಮನ ಹರಿಸುವಂತೆ ಹೇಳಿದ್ದರು. ಬೆಂಗಳೂರಿನ ಕಳಪೆ ಮೂಲಸೌಕರ್ಯಗಳು, ಉತ್ತರ ಕರ್ನಾಟಕದ ಅಭಿವೃದ್ಧಿ, ಕನ್ನಡಕ್ಕಾಗುತ್ತಿರುವ ಅನ್ಯಾಯಗಳು, ಗಡಿ ವಿವಾದಗಳು, ನದಿ ನೀರು ಹಂಚಿಕೆ ವಿವಾದಗಳು, ಗುತ್ತಿಗೆ ಕಾಮಗಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ 40% ಕಮಿಷನ್‌ ದಂಧೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಮೇಲೆ ಸರ್ಕಾರದ ದಿವ್ಯ ನಿರ್ಲಕ್ಷ್ಯ, ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಬಾಕಿ – ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಭೇಟಿಯನ್ನು ಬಳಸಿಕೊಳ್ಳುವಂತೆ ಆಮ್‌ ಆದ್ಮಿ ಪಾರ್ಟಿ ಒತ್ತಾಯಿಸಿತ್ತು. ಆದರೆ ಪ್ರಧಾನಿಯವರ ಭೇಟಿಯು ಚುನಾವಣಾ ಗಿಮಿಕ್‌ಗಳಿಗೆ ಸೀಮಿತವಾಗಿದೆ” ಎಂದು ಭಾಸ್ಕರ್‌ ರಾವ್‌ ಬೇಸರ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಬಿ.ಟಿ.ನಾಗಣ್ಣ ಮಾತನಾಡಿ, “ಸರ್ಕಾರದ ಅನೇಕ ವೈಫಲ್ಯಗಳಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಪರಿಣಾಮವಾಗಿ ಬಿಜೆಪಿ ಬೆಂಬಲಿಗರನ್ನು ಜನಸಾಮಾನ್ಯರು ಗೇಲಿ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಓಲೈಸಿಕೊಂಡು ಕುರ್ಚಿ ಭದ್ರ ಮಾಡಿಕೊಳ್ಳುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಡಬಲ್‌ ಎಂಜಿನ್‌ ಸರ್ಕಾರದ ಲಾಭ ಪಡೆದು, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಬೊಮ್ಮಾಯಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...