Homeಕರ್ನಾಟಕಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

- Advertisement -
- Advertisement -

ತಹಸೀಲ್ದಾರ್‌ಗಳಿಂದ ವಿತರಣೆಯಾಗಬೇಕಿದ್ದ ಹಕ್ಕುಪತ್ರಗಳನ್ನು ಚುನಾವಣಾ ಪ್ರಚಾರದ ದೃಷ್ಟಿಯಿಂದ ಪ್ರಧಾನಿ ಮೂಲಕ ಕೊಡಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಟೀಕಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಭಾಸ್ಕರ್‌ ರಾವ್‌, “ತಾಂಡ ಹಾಗೂ ಹಟ್ಟಿಗಳಲ್ಲಿ ವಾಸವಿರುವ ಬುಡಕಟ್ಟು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಕೆಲಸ ಬಹಳ ಹಿಂದೆಯೇ ಆಗಬೇಕಿತ್ತು. ಇದು ತಹಸೀಲ್ದಾರ್‌ ಮಟ್ಟದ ಕೆಲಸವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವವರೆಗೂ ಕಾಯುವ ಅಗತ್ಯವಿರಲಿಲ್ಲ. ಜನಪರ ಆಡಳಿತ ನೀಡಲು ವಿಫಲವಾಗಿರುವ ಬಿಜೆಪಿ ಸರ್ಕಾರವು ಪ್ರಚಾರ ಗಿಟ್ಟಿಸಿಕೊಳ್ಳಲು ಹಕ್ಕುಪತ್ರ ವಿತರಣೆಗೂ ಚುನಾವಣೆವರೆಗೆ ಕಾದಿರುವುದು ದುರಂತ. ದೊಡ್ಡ ಪ್ರಮಾಣದಲ್ಲಿ ಹಕ್ಕು ಪತ್ರ ವಿತರಣೆಯನ್ನು ಇಷ್ಟು ದಿನ ಬಾಕಿ ಉಳಿಸಿಕೊಂಡು ಪ್ರಧಾನಿಯವರಿಂದ ಕೊಡಿಸಿರುವುದು ಕೇವಲ ಪ್ರಚಾರ ಪಡೆಯುವ ಗಿಮಿಕ್” ಎಂದು ಹೇಳಿದರು.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

“ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ರಾಜ್ಯ ಭೇಟಿ ವೇಳೆ ಗಮನ ಹರಿಸುವಂತೆ ಹೇಳಿದ್ದರು. ಬೆಂಗಳೂರಿನ ಕಳಪೆ ಮೂಲಸೌಕರ್ಯಗಳು, ಉತ್ತರ ಕರ್ನಾಟಕದ ಅಭಿವೃದ್ಧಿ, ಕನ್ನಡಕ್ಕಾಗುತ್ತಿರುವ ಅನ್ಯಾಯಗಳು, ಗಡಿ ವಿವಾದಗಳು, ನದಿ ನೀರು ಹಂಚಿಕೆ ವಿವಾದಗಳು, ಗುತ್ತಿಗೆ ಕಾಮಗಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ 40% ಕಮಿಷನ್‌ ದಂಧೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಮೇಲೆ ಸರ್ಕಾರದ ದಿವ್ಯ ನಿರ್ಲಕ್ಷ್ಯ, ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಬಾಕಿ – ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಭೇಟಿಯನ್ನು ಬಳಸಿಕೊಳ್ಳುವಂತೆ ಆಮ್‌ ಆದ್ಮಿ ಪಾರ್ಟಿ ಒತ್ತಾಯಿಸಿತ್ತು. ಆದರೆ ಪ್ರಧಾನಿಯವರ ಭೇಟಿಯು ಚುನಾವಣಾ ಗಿಮಿಕ್‌ಗಳಿಗೆ ಸೀಮಿತವಾಗಿದೆ” ಎಂದು ಭಾಸ್ಕರ್‌ ರಾವ್‌ ಬೇಸರ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಬಿ.ಟಿ.ನಾಗಣ್ಣ ಮಾತನಾಡಿ, “ಸರ್ಕಾರದ ಅನೇಕ ವೈಫಲ್ಯಗಳಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಪರಿಣಾಮವಾಗಿ ಬಿಜೆಪಿ ಬೆಂಬಲಿಗರನ್ನು ಜನಸಾಮಾನ್ಯರು ಗೇಲಿ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಓಲೈಸಿಕೊಂಡು ಕುರ್ಚಿ ಭದ್ರ ಮಾಡಿಕೊಳ್ಳುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಡಬಲ್‌ ಎಂಜಿನ್‌ ಸರ್ಕಾರದ ಲಾಭ ಪಡೆದು, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಬೊಮ್ಮಾಯಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...