Homeಮುಖಪುಟಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?: ನೆಹರೂ ಫೋಟೊ ಕೈಬಿಟ್ಟ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?: ನೆಹರೂ ಫೋಟೊ ಕೈಬಿಟ್ಟ ಬೊಮ್ಮಾಯಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪಂಡಿತ್ ಜವಹರಲಾಲ್‌ ನೆಹರೂ ಅವರ ಫೋಟೊ ಮತ್ತು ಪರಿಚಯ ಕೈಬಿಟ್ಟಿರುವುದಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಸನ್ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿಯವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ‘ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ಪಂಡಿತ ಜವಾಹರಲಾಲ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ಮೊದಲು ರಾಜ್ಯದ ಜನತೆಯ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ.

ಸಂಸದರು ಮತ್ತು ಕಾಂಗ್ರೆಸ್ ಕಾರ್ಯದರ್ಶಿಗಳಾದ ಜೈರಾಂ ರಮೇಶ್ ಕೂಡ ಬೊಮ್ಮಾಯಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. “ಇಂತಹ ಸಣ್ಣತನಗಳ ಹೊರತಾಗಿಯೂ ನೆಹರು ನಮ್ಮೆಲ್ಲರ ಮನದಲ್ಲಿ ಉಳಿಯುತ್ತಾರೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಹತಾಶರಾಗಿರುವ ಸಿಎಂ ಬೊಮ್ಮಾಯಿಯವರು ಅವರ ತಂದೆ ಎಸ್.ಆರ್. ಬೊಮ್ಮಾಯಿ ಮತ್ತು ಅವರ ತಂದೆಯ ಮೊದಲನೆ ರಾಜಕೀಯ ಗುರು ಎಂ.ಎನ್. ರಾಯ್‌ರಿಗೆ ಅವಮಾನವೆಸಗಿದ್ದಾರೆ. ಏಕೆಂದರೆ ಆ ಇಬ್ಬರೂ ಮಹಾನ್ ನೆಹರೂ ಅಭಿಮಾನಿಗಳು, ನಂತರ ಸ್ನೇಹಿತರೂ ಆಗಿದ್ದರು. ಕರುಣಾಜನಕ ಸ್ಥಿತಿ ಇದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾವುಟ ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ವಿಷಯದಲ್ಲಿ ಕೂಡಾ ತಾರತಮ್ಯ ಮಾಡುವ ಕುತ್ಸಿತ ಮಟ್ಟಕ್ಕೆ ಹೋಗಬಹುದು ಎಂಬ ಅನುಮಾನ ಇಂದಿನ ಪ್ರಜಾವಾಣಿ ಮುಖಪುಟ ನೋಡಿದಾಗ ನಿಜಾವಾಯ್ತು. ಇದು ಅತ್ಯಂತ ದುಃಖದ ಮತ್ತು ತಲೆ ತಗ್ಗಿಸುವ ಕ್ರಿಯೆ!

  2. 75 ne swatantrana sambramadalli ee BJP galu ee deshada modala pradaniyennu maretu rajakiya madiruvudakke deshada janara dikkara vide, avarige nachike aagabeku

  3. ಈ ರೀತಿಯ ಮನಸ್ಥಿತಿ ನಮ್ಮ ರಾಜಕೀಯ ನಾಯಕರ ವ್ಯಕ್ತಿತ್ವದ ಅಂಧ ಪತನಕ್ಕೆ ಸಾಕ್ಷಿಯಾಗಿದೆ.
    ಖುರ್ಚಿಯ ಆಸೆಗಾಗಿ ಬೊಮ್ಮಯಿಯವರು ತೋರುತ್ತಿರುವ ಭಂಗಿ ಅಚ್ಚರಿಯುತ್ತಿಸುತ್ತದೆ.
    ರಾಜಕೀಯ ಜೀವನದ ನಂತರದ ದಿನಗಳಲ್ಲಿ ಬೊ ಮ್ಮಾಯಿಯವರು ಪಶ್ಚಾತ್ತಾಪ ಪಡುವ ಅನಿವಾರ್ಯತೆ ಸೃಷ್ಟಿಯಾಗಿದೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...